ಬಂಟ್ವಾಳ : ಹಾಡಹಗಲೇ ಬೈಕ್ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆದು ತಲವಾರು ತೋರಿಸಿ, ಬೆದರಿಸಿ, 8.5 ಲಕ್ಷ ರೂ ನಗದನ್ನು ದೋಚಿದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬಲ್ಲಿ ಗುರುವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ ತೀವ್ರ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಕಣ್ಣೂರು ಎಂಬಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಎಂಬುವರು, ತನ್ನ ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿಕೊಂಡು ಬರುವ ಸಲುವಾಗಿ ಗುರುವಾರ ಬೈಕ್ನಲ್ಲಿ ತೆರಳಿದ್ದರು. ಹಲವು ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿ, ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ, ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ, ಬಂಟ್ವಾಳ ಮಣಿನಾಲ್ಕೂರು ಮುಲ್ಕಾಜೆಮಾಡ ಎಂಬಲ್ಲಿ ಈ ಘಟನೆ ನಡೆದಿದೆ.
ಎರಡು ಬೈಕ್ಗಳಲ್ಲಿ ಬಂದ ನಾಲ್ಕು ಜನ ಅಪರಿಚಿತರು, ಮಯ್ಯದಿ ಅವರಿಗೆ ತಲವಾರು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 8,52,000 ರೂ ನಗದನ್ನು ಸುಲಿಗೆ ಮಾಡಿ ಪರಾರಿಯಾಗಿರುತ್ತಾರೆ, ನಗದು ರೂಪದ ಹಣವಲ್ಲದೆ, ಕೆಲವು ಕಡೆ ಚೆಕ್, ಡಿಡಿಗಳನ್ನು ನೀಡುತ್ತಾರೆ. ಎಲ್ಲವನ್ನೂ ಬ್ಯಾಗಿನಲ್ಲಿ ಕಟ್ಟಿಕೊಂಡು ಬರುವುದು ರೂಢಿಯಾಗಿತ್ತು. ಮಯ್ಯದಿ ಮಧ್ಯಾಹ್ನ ಮಣಿ ನಾಲ್ಕೂರು ಗ್ರಾಮದಿಂದ ಮಣಿಹಳ್ಳಕ್ಕೆ ಬರುವ ನಿರ್ಜನ ಪ್ರದೇಶದಲ್ಲಿ ಬೈಕಿನಲ್ಲಿ ಬಂದವರು ಹಿಂದಿನಿಂದ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ, ಮತ್ತೊಂದು ಬೈಕಿನಲ್ಲಿದ್ದವರು ಮಯ್ಯದಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕೈಯಲ್ಲಿದ್ದ ಹಣದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ. ನಗದು ಹಣವಲ್ಲದೆ, ಎಷ್ಟು ಮೊತ್ತದ ಚೆಕ್, ಡಿಡಿಗಳಿದ್ದವು ಎಂಬ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಹಣ ಹಿಡಿದುಕೊಂಡು ಬರುತ್ತಿದ್ದ ಇವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post