• About us
  • Contact us
  • Disclaimer
Wednesday, June 25, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡಯಟ್ ದಾಂಧಲೆ ; ಬಿಎಡ್ ಕಲೀತಿದ್ದಾಗ ಶಿಕ್ಷಕಿ ಕೀಟಲೆ ಮಾಡುತ್ತಿದ್ದರಂತೆ.., ಆತನಿಗಿತ್ತು ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ !

Coastal Times by Coastal Times
September 21, 2021
in ಕ್ರೈಮ್ ನ್ಯೂಸ್
ಡಯಟ್ ದಾಂಧಲೆ ; ಬಿಎಡ್ ಕಲೀತಿದ್ದಾಗ ಶಿಕ್ಷಕಿ ಕೀಟಲೆ ಮಾಡುತ್ತಿದ್ದರಂತೆ.., ಆತನಿಗಿತ್ತು ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ !
57
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.21 : ನಗರದ ಸಬ್ ಜೈಲಿನ ಪಕ್ಕದಲ್ಲಿರುವ ಡಯಟ್ ಶಿಕ್ಷಣ ಕೇಂದ್ರಕ್ಕೆ ನುಗ್ಗಿದ್ದ ಯುವಕನೊಬ್ಬ ತನ್ನ ಕೈಯಲ್ಲಿದ್ದ ಕತ್ತಿಯನ್ನು ಬೀಸಿ ಮೂವರು ಮಹಿಳಾ ಸಿಬಂದಿಯ ಮೇಲೆ ಗಾಯ ಮಾಡಿದ್ದ. ಆನಂತರ ಪೊಲೀಸರು ಯುವಕನನ್ನು ಬಂಧಿಸಿ, ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆಗ ಆತನ ಹೆಸರು ನವೀನ್ ಕುಮಾರ್ ಶೆಟ್ಟಿ ಎನ್ನುವುದು ಗೊತ್ತಾಗಿದೆ. ಅಲ್ಲದೆ, ಕುಂದಾಪುರದ ಕೋರ್ಟಿನಲ್ಲಿ 2018ರಿಂದ ಅಟೆಂಡರ್ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದ. ಕತ್ತಿ ಹಿಡ್ಕೊಂಡು ಕೊಲ್ಲಲು ಬಂದಿದ್ದೀಯಲ್ಲಾ ಎಂದು ಕೇಳಿದ್ದಕ್ಕೆ, ತನ್ನ ಹಳೆಯ ವಿಚಾರವನ್ನು ಹೇಳಿದ್ದಾನೆ.

ಕುಂದಾಪುರ ಮೂಲದ ನವೀನ್ ಕುಮಾರ್ 2012-13ರಲ್ಲಿ ಮಂಗಳೂರಿನ ಡಯಟ್ ಶಿಕ್ಷಣ ಕೇಂದ್ರದಲ್ಲಿ ಬಿಎಡ್ ಕಲಿಯುವುದಕ್ಕೆಂದು ಬಂದಿದ್ದ. ಆದರೆ, ಶಿಕ್ಷಣ ಕೇಂದ್ರದಲ್ಲಿ ಇತರ ವಿದ್ಯಾರ್ಥಿಗಳ ಜೊತೆಗೆ ಬೆರೆಯುತ್ತಿರಲಿಲ್ಲ. ಏನೋ ಅಸಹನೆ, ನಾನು ಬೋ.. ಮಗ. ನನ್ನನ್ನು ಬೋ.. ಮಗ ಅಂತಲೇ ಕರೆಯುತ್ತಾರೆ. ನನ್ನನ್ನು ಅವರೆಲ್ಲ ಗೇಲಿ ಮಾಡುತ್ತಿದ್ದರು. ನನಗೆ ಕೀಟಲೆ ಮಾಡುತ್ತಿದ್ದರು. ತನ್ನ ಜೊತೆಗಿದ್ದವರನ್ನು ಪಾಸ್ ಮಾಡಿದ್ದಾರೆ, ನನ್ನನ್ನು ಫೈಲ್ ಮಾಡಿದ್ದಾರೆಂದು ಅಲ್ಲಿ ಶಿಕ್ಷಕಿಯಾಗಿದ್ದ ಒಬ್ಬರಲ್ಲಿ ಮುನಿಸಿಕೊಂಡು ದ್ವೇಷ ಬೆಳೆಸಿದ್ದ. ಶಿಕ್ಷಣ ಪಡೆಯುತ್ತಿದ್ದಾಗಲೇ ಉಡುಪಿಯ ಎವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮಾನಸಿಕ ಸಮಸ್ಯೆಗೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದ.

2012ರಿಂದ 15ರ ನಡುವೆ ಹಲವು ಬಾರಿ ಬಾಳಿಗಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ. ಪ್ಯಾರನಾಯ್ಡ್ ಸ್ಕಿಜೋಫ್ರೀನಿಯಾ ಎನ್ನುವ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಆತನಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು. ಮಂಗಳೂರು ಪೊಲೀಸರು ಉಡುಪಿಯಲ್ಲಿ ಚಿಕಿತ್ಸೆ ಪಡೆದ ವೈದ್ಯರಲ್ಲಿ ಮಾಹಿತಿ ಪಡೆದಿದ್ದು, ಕಳೆದ ಜನವರಿಯಲ್ಲಿ ಕೊನೆಯ ಬಾರಿಗೆ ಚಿಕಿತ್ಸೆಗೆ ಬಂದಿದ್ದ ಅನ್ನುವುದನ್ನು ವೈದ್ಯರು ತಿಳಿಸಿದ್ದಾರೆ. ಮಂಗಳೂರಿನ ಡಯಟ್ ಶಿಕ್ಷಣ ಕೇಂದ್ರದಲ್ಲಿ ಬಿಎಡ್ ಮುಗಿಸಿ ತೆರಳಿದ್ದ ನವೀನ್ ಕುಮಾರ್ ಗೆ ಕುಂದಾಪುರದ ಕೋರ್ಟಿನಲ್ಲಿ ಅಟೆಂಡರ್ ಕೆಲಸ ಸಿಕ್ಕಿತ್ತು.

ತನ್ನನ್ನು ಡಯಟ್ ಶಿಕ್ಷಣ ಕೇಂದ್ರದಲ್ಲಿದ್ದಾಗ ಶಿಕ್ಷಕಿಯೊಬ್ಬರು ಉದ್ದೇಶಪೂರ್ವಕ ಕೀಟಲೆ ಮಾಡುತ್ತಿದ್ದರು ಅನ್ನುವುದನ್ನು ಮನಸ್ಸಿನಲ್ಲಿ ಹಚ್ಚಿಕೊಂಡಿದ್ದ ನವೀನ್ ಕುಮಾರ್, ಆನಂತರ ಆಕೆಯನ್ನು ಭೇಟಿಯಾಗುವ ಉದ್ದೇಶದಿಂದ ಮಂಗಳೂರಿಗೆ ಬಂದಿದ್ದ. ಆದರೆ, ಪ್ರತೀ ಬಾರಿ ಬಂದಾಗಲೂ ಆ ಶಿಕ್ಷಕಿ ಸಿಕ್ಕಿರಲಿಲ್ಲ. ಇತರ ಸಿಬಂದಿ, ಅವರು ಹೊರಗೆ ಹೋಗಿದ್ದಾರೆಂದು ಕಳಿಸಿಕೊಡುತ್ತಿದ್ದರು. ಈತನ ಉದ್ದೇಶ ಮತ್ತು ಈತ ಯಾರೆಂದು ಸಿಬಂದಿಗೆ ತಿಳಿದಿರಲಿಲ್ಲ. ಆದರೆ, ಹಳೆಯದ್ದನ್ನೇ ದ್ವೇಷವಾಗಿ ಬೆಳೆಸಿಕೊಂಡಿದ್ದ ನವೀನ್ ಕುಮಾರ್, ಇಲ್ಲಿನ ಸಿಬಂದಿ ಬೇಕಂತಲೇ ನನಗೆ ಹೀಗೆ ಹೇಳುತ್ತಿದ್ದಾರೆ, ನನ್ನನ್ನು ಕೀಟಲೆ ಮಾಡುತ್ತಿದ್ದಾರೆ ಎಂದು ಊಹಿಸಿಕೊಂಡಿದ್ದ. ಇದರಿಂದ ಸಿಬಂದಿ ಮೇಲೂ ದ್ವೇಷ ಬೆಳೆಸಿಕೊಂಡಿದ್ದ.

ಇಂದು, ಏನಾದ್ರೂ ಮಾಡಲೇಬೇಕು ಎಂಬ ಮನಸ್ಸಿನಲ್ಲಿ ಹಚ್ಚಿಕೊಂಡು ಬಂದಿದ್ದ ನವೀನ್ ಕುಮಾರ್, ಅದಕ್ಕಾಗಿ ಹೊಸ ಕತ್ತಿಯೊಂದನ್ನು ಖರೀದಿಸಿ ತಂದಿದ್ದ. ಡಯಟ್ ಕಚೇರಿಗೆ ಬಂದು ಕೇಳಿದಾಗ, ಆ ಶಿಕ್ಷಕಿ ಮಾತ್ರ ಇರಲಿಲ್ಲ. ಈ ಬಗ್ಗೆ ಅಲ್ಲಿನ ಸಿಬಂದಿ ಬಳಿ ಕೇಳಿದಾಗ, ಎಂದಿನ ಉತ್ತರ ನೀಡಿದ್ದಾರೆ. ಒಮ್ಮೆಲೇ ಕೋಪಕ್ಕೀಡಾದ ನವೀನ್, ನೀವು ಸುಳ್ಳು ಹೇಳುತ್ತಿದ್ದೀರಿ.. ಅವರಿಗೊಂದು ನಾನು ಗಿಫ್ಟ್ ತಂದಿದ್ದೇನೆ ಎನ್ನುತ್ತಲೇ ಕತ್ತಿ ಹೊರ ತೆಗೆದಿದ್ದಾನೆ. ಮೇಡಮ್ ಬಗ್ಗೆ ಸುಳ್ಳು ಹೇಳ್ತೀರಾ ಎನ್ನುತ್ತಲೇ ಕತ್ತಿ ಬೀಸಿದ್ದಾನೆ. ಅಲ್ಲಿದ್ದ ಮೂರು ಸಿಬಂದಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಮಾನಸಿಕ ಸ್ಥಿಮಿತ ಕಳಕೊಂಡು ಏನೋ ದ್ವೇಷ ಇಟ್ಟುಕೊಂಡು ಕತ್ತಿ ಬೀಸಿದ್ದಾನೆ. ಪೊಲೀಸರು ಬಂದಾಗ, ಚೇರ್ ನಲ್ಲಿ ಕತ್ತಿ ಹಿಡ್ಕೊಂಡೇ ಕುಳಿತಿದ್ದ. ನನ್ನ ಕೆಲಸ ಮುಗೀತು ಎನ್ನುತ್ತಿದ್ದ.

ಮಂಗಳೂರಿನ ಬರ್ಕೆ ಠಾಣೆಯಲ್ಲಿ ನವೀನ್ ಕುಮಾರ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಡಯಟ್ ಶಿಕ್ಷಣ ಸಂಸ್ಥೆ ಕಚೇರಿಗೆ ನುಗ್ಗಿ ಮೂವರು ಮಹಿಳೆಯರ ಮೇಲೆ ಮಚ್ಚಿನಿಂದ ದಾಳಿ

Next Post

ಅಶ್ಲೀಲ ವಿಡಿಯೋ ಪ್ರಕರಣ: ರಾಜ್​ ಕುಂದ್ರಾಗೆ ಜಾಮೀನು ಮಂಜೂರು

Related Posts

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು
ಕ್ರೈಮ್ ನ್ಯೂಸ್

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

June 24, 2025
91
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ
ಕ್ರೈಮ್ ನ್ಯೂಸ್

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

June 24, 2025
40
Next Post
ಅಶ್ಲೀಲ ವಿಡಿಯೋ ಪ್ರಕರಣ: ರಾಜ್​ ಕುಂದ್ರಾಗೆ ಜಾಮೀನು ಮಂಜೂರು

ಅಶ್ಲೀಲ ವಿಡಿಯೋ ಪ್ರಕರಣ: ರಾಜ್​ ಕುಂದ್ರಾಗೆ ಜಾಮೀನು ಮಂಜೂರು

Discussion about this post

Recent News

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

June 24, 2025
91
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

June 24, 2025
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

ಮಂಗಳೂರು ಬಿಜೈ: ಬ್ಯೂಟಿ ಸಲೂನ್ ಅಕ್ರಮ ಚಟುವಟಿಕೆ ಆರೋಪ: ಪೊಲೀಸರ ದಾಳಿ, ವ್ಯಾಪಾರ ಪರವಾನಗಿ ರದ್ದು

June 24, 2025
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಅಹಮದಾಬಾದ್‌ನಲ್ಲಿ ಪೊಲೀಸ್ ಬಲೆಗೆ

June 24, 2025
ಇರಾನ್ ಕತಾರ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ

ಇರಾನ್ ಕತಾರ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ

June 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d