• About us
  • Contact us
  • Disclaimer
Sunday, May 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಶ್ಲೀಲ ವಿಡಿಯೋ ಪ್ರಕರಣ: ರಾಜ್​ ಕುಂದ್ರಾಗೆ ಜಾಮೀನು ಮಂಜೂರು

Coastal Times by Coastal Times
September 21, 2021
in ಕ್ರೈಮ್ ನ್ಯೂಸ್
ಅಶ್ಲೀಲ ವಿಡಿಯೋ ಪ್ರಕರಣ: ರಾಜ್​ ಕುಂದ್ರಾಗೆ ಜಾಮೀನು ಮಂಜೂರು
28
VIEWS
WhatsappTelegramShare on FacebookShare on Twitter

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿದ್ದ ಬಾಲಿವುಡ್​ ಬೆಡಗಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾಗೆ ಮುಂಬಯಿ ನ್ಯಾಯಾಲಯ ಜಾಮೀನು ನೀಡಿದೆ. 50 ಸಾವಿರ ಶ್ಯೂರಿಟಿಯೊಂದಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಹಿಂದೆ ಜಾಮೀನು ಕೋರಿ ರಾಜ್​ ಕುಂದ್ರಾ ಸೆಷನ್ಸ್​ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಸೆಷನ್ಸ್​ ನ್ಯಾಯಾಲಯ ಈ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಬಾಂಬೆ ಹೈ ಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.

ಪ್ರಕರಣದಲ್ಲಿ ಬಂಧಿಯಾರಗಿರುವ ಮತ್ತೊಬ್ಬ ಆರೋಪಿಯಾದ ರಾಜ್ ಕುಂದ್ರಾ ಸಂಸ್ಥೆಯೊಂದರ ಐಟಿ ಮುಖ್ಯಸ್ಥ ರಯಾನ್ ಥಾರ್ಪೆಗೆ ಕೂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಉದ್ಯಮಿ ರಾಜ್​ ಕುಂದ್ರಾ ಪರವಾಗಿ ವಾದಿಸಿದ ವಕೀಲ ಪ್ರಶಾಂತ್​ ಪಾಟೀಲ್​, ವಿಡಿಯೋ ತಾಣಗಳಿಗೆ ಯಾವ ರೀತಿಯ ವಿಷಯವನ್ನು ಅಪ್ಲೋಡ್ ಮಾಡಬೇಕೆಂದು ಸೆಲೆಬ್ರಿಟಿ ಮತ್ತು ನಿರ್ಮಾಪಕರು ನಿರ್ಧರಿಸುತ್ತಾರೆ. ಏನನ್ನು ಅಪ್‌ಲೋಡ್ ಮಾಡಬೇಕೆಂದು ಕುಂದ್ರಾ ಅಥವಾ ರಯಾನ್ ನಿರ್ಧರಿಸಲಿಲ್ಲ. 1400 ಪುಟಗಳ ಚಾರ್ಜ್‌ಶೀಟ್‌ನಲ್ಲಿ, ಕುಂದ್ರಾ ಅಪ್‌ಲೋಡ್ ಮಾಡುತ್ತಿರುವುದನ್ನು ತೋರಿಸುವ ಒಂದು ಸಾಕ್ಷ್ಯವೂ ಇಲ್ಲ ಎಂದು ಕೋರ್ಟ್​ಗೆ ತಿಳಿಸಿದರು.

ಇನ್ನು ರಾಜ್​ ಕುಂದ್ರಾ ಅವರಿಗೆ ಜಾಮೀನು ನೀಡಿದರೆ ಸಾಕ್ಷ್ಯಾ ನಾಶ ಮಾಡುವ ಸಾಧ್ಯತೆ ಇದೆ ಎಂದು ಪ್ರಾಸಿಕ್ಯೂಷನ್​ ಪ್ರತಿವಾದಿಸಿತು. ಇಂದು ಸಂಜೆ ಪ್ರಕರಣ ಆಲಿಸಿದ ನ್ಯಾಯಾಲಯ ಜಾಮೀನು ನೀಡಿದ್ದು, ನ್ಯಾಯಾಲಯದ ಕೆಲ ಕಾರ್ಯಗಳು ಮುಗಿದ ವೇಳೆ ಅವರು ಇಂದು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನವಾಗಿದೆ. ನಾಳೆ ಅಥವಾ ನಾಡಿದ್ದು, ರಾಜ್​ ಕುಂದ್ರಾ ಬಿಡುಗಡೆ ಆಗಲಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧಿಸಿದಂತೆ ಮುಂಬೈ ಪೊಲೀಸರು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ರಾಜ್​ ಕುಂದ್ರಾ ಜೊತೆಗೆ ಆತನ ಸಹಚರ ಮತ್ತು ಪ್ರಕರಣದ ಮತ್ತೊರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಲಾಗಿದೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂಬ ಕುರಿತು ಯಾವುದೇ ಸಾಕ್ಷಿಗಳು ಇಲ್ಲ ಎಂದು ರಾಜ್​ ಕುಂದ್ರಾ ಅರ್ಜಿಯಲ್ಲಿ ತಿಳಿಸಿದ್ದರು. ಕಳೆದ ಗುರುವಾರ ಉದ್ಯಮಿ ರಾಜ್​ ಕುಂದ್ರಾ ಮೇಲೆ 1400 ಪುಟಗಳ ಚಾರ್ಜ್​ ಶೀಟ್​ ಅನ್ನು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಡಯಟ್ ದಾಂಧಲೆ ; ಬಿಎಡ್ ಕಲೀತಿದ್ದಾಗ ಶಿಕ್ಷಕಿ ಕೀಟಲೆ ಮಾಡುತ್ತಿದ್ದರಂತೆ.., ಆತನಿಗಿತ್ತು ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ !

Next Post

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ; ಇಬ್ಬರು ಸಜೀವದಹನ

Related Posts

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​
ಕ್ರೈಮ್ ನ್ಯೂಸ್

ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​

May 22, 2026
25
ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

May 21, 2026
82
Next Post
ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ  ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ; ಇಬ್ಬರು ಸಜೀವದಹನ

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ; ಇಬ್ಬರು ಸಜೀವದಹನ

Discussion about this post

Recent News

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
59
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d