• About us
  • Contact us
  • Disclaimer
Friday, September 19, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ: ಪ್ರೊ. ಕೆ. ಫಣಿರಾಜ್

Coastal Times by Coastal Times
September 21, 2023
in ಕರಾವಳಿ
ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ: ಪ್ರೊ. ಕೆ. ಫಣಿರಾಜ್
16
VIEWS
WhatsappTelegramShare on FacebookShare on Twitter

ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೊ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ವೈವಿದ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ತತ್ವದಡಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ್ವೇಷ ಎನ್ನುವುದು ಬಹಳ ಸರಳವಾದ ವಿಷಯ, ಪ್ರೀತಿಯೆಂಬುವುದು ಸರಳವಲ್ಲ. ಅಧಿಕಾರಕ್ಕಾಗಿ, ಹಣಕ್ಕಾಗಿ ವೇಷ ಮಾಡುವುದು ಸುಲಭ, ಅದಕ್ಕೆ ಪ್ರಚೋದನೆ ನೀಡಲು ಹಲವರಿದ್ದಾರೆ. ಅಂತಹ ಸಂದರ್ಭಲ್ಲಿ ಪ್ರೀತಿಸುವ ಗುಣವು ನಿಜವಾದ ಒಂದು ಆಧ್ಯಾತ್ಮವಾಗಿದೆ. ಭಾರತ ಬಹಳ ದೊಡ್ಡ ಕೋಮು ಹಿಂಸೆಯನ್ನು ಅನುಭವಿಸಿದೆ, ಮತೀಯ ದ್ವೇಷದಿಂದ ಒಬ್ಬರನ್ನು ಒಬ್ಬರು ಕೊಂದಿದ್ದಾರೆ, ಅತ್ಯಾಚಾರ ಎಸಗಿದ್ದಾರೆ. ಭಾರತದಲ್ಲಿ ಸಹೋದರತ್ವ ಎನ್ನುವ ಭಾವನೆ ದಿನ ನಿತ್ಯ ಮಾಡುವ ಊಟ, ನಿದ್ದೆಯ, ಉಸಿರಾಡುವ ಗಾಳಿಯ ಹಾಗೇ ದಿನ ನಿತ್ಯದ ಮೌಲ್ಯವಾಗದೆ ಹೋದರೆ ಸಾಮಾಜಿಕ ಪ್ರಜಾಪ್ರಭುತ್ವ ಇರಲು ಸಾಧ್ಯವಿಲ್ಲ. ಕಾನೂನಿನ ಆಸರೆಯಲ್ಲಿ ಸಮಾನತೆಯನ್ನು ರಕ್ಷಿಸಲು ಸಾಧ್ಯವಿಲ್ಲ ಮತ್ತು ಬಹಳ ದಿವಸ ಉಳಿಯುವುದಿಲ್ಲ. ಸಮಾನತೆ, ಭ್ರಾತೃತ್ವ ಬಹಳ ದಿನ ಉಳಿಯಬೇಕಾದರೆ ಸಮಾನ ಸಂಪನ್ಮೂಲ ಹಂಚಿಕೆಯಾಗುವ ಕ್ರಮವಾಗಬೇಕು. ಸ್ನೇಹದ ಭಾವನೆ ಅಂದರೆ ಮೈತ್ರಿಯ ಭಾವವನ್ನು ಕೆಡಿಸುವವರಿಂದ ಸಂಘರ್ಷ ಉಂಟಾಗುತ್ತಿದೆ ಎಂದು ಪ್ರೊ. ಫಣಿರಾಜ್ ಹೇಳಿದರು.

ಸಂವಿಧಾನದ ಮೂಲ ತತ್ವ ಅರಿತುಕೊಳ್ಳಿ: ಎಕ್ಕಾರು

ಹಲವು ಜಾತಿ, ಧರ್ಮ, ಸಂಸ್ಕೃತಿ, ಭಾಷೆ ಹೀಗೆ ಹಲವುಗಳನ್ನು ಒಪ್ಪಿಕೊಂಡು ಬದುಕುವುದೇ ಬಹುತ್ವ, ಈ ವೈವಿಧ್ಯತೆಯನ್ನು ಮತ್ತು ಭಾರತೀಯ ಸಂವಿಧಾನದ ಮೂಲ ತತ್ವಗಳನ್ನು ಅರ್ಥ ಮಾಡಿಕೊಂಡರೆ ನಾವು ಪ್ರೀತಿಯ ಸೆಲೆಯಲ್ಲಿ ಮೊಳಗುವುದಕ್ಕೆ ಸಾಧ್ಯವಾಗುತ್ತದೆ ಎಂದು ಜನಪದ ವಿದ್ವಾಂಸ, ನಿವೃತ್ತ ಎನ್‍ಎಸ್‍ಎಸ್ ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ವಿಷಯ ಮಂಡನೆ ಮಾಡಿ ಮಾತನಾಡಿದ ಅವರು, ಗಾಂಧೀಜಿ ಹೇಳುತ್ತಾರೆ ನಿಜವಾದ ಕ್ರಾಂತಿ ಎಂಬುವುದು ನಮ್ಮ ಅಂತರಂಗದಿಂದ ಆರಂಭವಾಗುತ್ತದೆ ಎಂದು. ನೈಜತೆಯನ್ನು ಅರ್ಥ ಮಾಡಿಕೊಂಡಾಗ ಅಂತರಂಗದ ಕ್ರಾಂತಿಯಾಗಲು ಸಾಧ್ಯವಾಗುತ್ತದೆ. ಇದರಿಂದಾಗಿ ನಮ್ಮ ಯೋಚನಾ ಕ್ರಮ, ನಮ್ಮ ಮತ್ತು ನಾಡಿನ ಬೆಳವಣಿಗೆ ಮಾತ್ರವಲ್ಲ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಭಾರತ ಸಂವಿಧಾನದ ಮೂಲ ತಿರುಳುಗಳಾದ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಹಾಗೂ ಸಾಮಾಜಿಕ ನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ನನಗೆ ಸಮಾನತೆ, ಸ್ವಾತಂತ್ರ್ಯ ಇರುವಾಗ ಇನ್ನೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ ಇದೆ ಎಂಬುದನ್ನು ಅರಿತುಕೊಂಡು ಪರಸ್ಪರ ಗೌರವದಿಂದ ಬದುಕುವ ಅನಿವಾರ್ಯತೆ ಮತ್ತು ಅಗತ್ಯವಿದೆ. ಸಮಾನತೆಗೆ ತೊಂದರೆ ಆದಾಗ ಮದರ್ ತೆರೆಸಾರಂತಹ ಮಹನೀಯರು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಇಂದು ಪ್ರೀತಿಯ ಬೋಧನೆಗಳಿಗಿಂತ ಆಚರಣೆಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದೇವೆ. ಮಾನವೀಯತೆ ಎಂದರೆ ಪ್ರೀತಿಯ ಸೆಲೆ. ಇದರ ಅಗತ್ಯ ಬಹಳಷ್ಟಿದೆ. ಮದರ್ ತೆರೆಸಾ ಅವರು ತನ್ನನ್ನು ತಾನು ಸೇವೆಗಾಗಿ ಸಮರ್ಪಿಸಿಕೊಂಡು ಬದುಕಿದರು. ಹೊಟ್ಟೆ ಬಟ್ಟೆಗೆ ಇಲ್ಲದವರು, ಸೂರಿಲ್ಲದವರು, ಅಂಗವಿಕಲರು, ಕುರುಡರು, ಕುಷ್ಠ ರೋಗಿಗಳು, ಸಮಾಜಕ್ಕೆ ಬೇಡವಾದವರು, ಪ್ರೀತಿ ವಂಚಿತರು ಇವರೆಲ್ಲರ ಸೇವೆ ಮಾಡುವ ಮೂಲಕ ಅವರಲ್ಲಿ ದೇವರನ್ನು ಕಂಡವರು ಹಾಗೂ ತನ್ನನ್ನು ಟೀಕೆ ಮಾಡಿದವರಿಗೆ ಕೂಡ ಜನಸೇವೆಯನ್ನು ಮಾಡಿದ ಮಹನೀಯರು ಮದರ್ ತೆರೇಸಾರವರು.

ಆಸೆಯೇ ದುಃಖಕ್ಕೆ ಕಾರಣ, ಆದರೆ ಆಸೆಯೆಂದರೆ ಯಾವುದೋ ವಸ್ತುವಿನ ಮೇಲಿನ ಆಸೆಯಲ್ಲ ನಮ್ಮ ಮನಸ್ಸಿನಲ್ಲಿರುವ ಸ್ವಾರ್ಥ, ದ್ವೇಷ, ಕೋಪ, ಕೋಮುವಾದ ಇವೆಲ್ಲವೂ ಆಸೆಗಳು. ಅದನ್ನು ಬಿಟ್ಟು ನಾವು ಹೊರ ಬಂದಾಗ ಕುವೆಂಪು ಹೇಳಿದಂತೆ ನಾವು ವಿಶ್ವ ಮಾನವರಾಗುತ್ತೇವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರಾಯ್ ಕ್ಯಾಸ್ಟೆಲಿನೊ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಜನರು ಭಾರತದ ಭವಿಷ್ಯ, ದೇಶದ 60% ಜನರು 30ರ ವಯಸ್ಸಿನ ಒಳಗಿನವರು. ಯುವಕರು ಮುಂದಿನ ತಾರೆಗಳು. ಮದರ್ ತೆರೆಸಾ ನಾವು ಕಂಡ ಮಹಾನ್ ಮಾನವತಾವಾದಿ. ಸಮಾಜದ ಕಟ್ಟಕಡೆಯ ವ್ಯಕ್ತಿಯಲ್ಲಿ ಪರಮಾತ್ಮನನ್ನು ಕಂಡವರು. ಭಾರತವನ್ನು ಅವರು ಕರ್ಮಭೂಮಿಯನ್ನಾಗಿಸಿದವರು. ಮರಣ ಹೊಂದಿ 26 ವರ್ಷಗಳ ನಂತರವೂ ಮನುಕುಲಕ್ಕೆ ಪ್ರೇರಣೆ ನೀಡುತ್ತಿರುವ ಹಿರಿಮೆ ಅವರದು. ಅವರ ಸ್ಫೂರ್ತಿ ಪಡೆದು ಪ್ರೀತಿ ಹರಡಲಿ ಎಲ್ಲೆಡೆ ಎಂಬ ಧ್ಯೇಯದೊಂದಿಗೆ ಸಂತ ಮದರ್ ತೆರೆಸಾ ವಿಚಾರ ವೇದಿಕೆ ಸ್ಥಾಪಿಸಲ್ಪಟ್ಟಿದೆ ಎಂದು ಅವರು ವಿವರಿಸಿದರು.

ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ವಸಂತ್ ಕುಮಾರ್ ಪ್ರತಿಕ್ರಿಯೆ ನೀಡಿದರು. ಮಂಗಳೂರು ಧರ್ಮಪ್ರಾಂತ್ಯದ ಪಿಆರ್‍ಒ ಫಾ. ಜೆ.ಬಿ. ಸಲ್ದಾನ, ಸಿಸ್ಟರ್ ಶಾಂತಿಧನ್, ಸಿಸ್ಟರ್ ರೋನಾ, ಫಾ. ಪ್ರವೀಣ್, ಫಾ. ರೂಪೇಶ್ ಮಾಡ್ತಾ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಮಾಜಿ ಸಚಿವ ರಮಾನಾಥ ರೈ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಕಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ ಉಪಸ್ಥಿತರಿದ್ದರು. ವೇದಿಕೆಯ ಜಂಟಿ ಕಾರ್ಯದರ್ಶಿ ಮಂಜುಳಾ ನಾಯಕ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ನಿರೂಪಿಸಿದರು. ಸ್ಟ್ಯಾನಿ ಅಲ್ವಾರಿಸ್ ವಂದಿಸಿದರು. ಪ್ರಾರಂಭದಲ್ಲಿ ಏಕತಾರಿ ಹಾಡುಗಾರ ನಾದ ಮಣಿನಾಲ್ಕೂರು ಬಳಗ ಹಾಗೂ ಜನಪ್ರೀತಿ ಬಳಗದವರಿಂದ ಪ್ರೀತಿಯ ಸಿಂಚನ ಸೌಹಾರ್ದ ಗಾಯನ ಕಾರ್ಯಕ್ರಮ ನಡೆಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಬಂಟ್ಸ್ ಹಾಸ್ಟೇಲ್: ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ

Next Post

ಬಜರಂಗದಳದ ನೇತೃತ್ವದಲ್ಲಿ ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥ ಯಾತ್ರೆ – ವಿಶ್ವ ಹಿಂದೂ ಪರಿಷದ್

Related Posts

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ
ಕರಾವಳಿ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
14
ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ
ಕರಾವಳಿ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
17
Next Post
ಬಜರಂಗದಳದ ನೇತೃತ್ವದಲ್ಲಿ ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥ ಯಾತ್ರೆ – ವಿಶ್ವ ಹಿಂದೂ ಪರಿಷದ್

ಬಜರಂಗದಳದ ನೇತೃತ್ವದಲ್ಲಿ ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣ ರಥ ಯಾತ್ರೆ - ವಿಶ್ವ ಹಿಂದೂ ಪರಿಷದ್

Discussion about this post

Recent News

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

September 18, 2025
35
ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

September 18, 2025
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

ಬಾಲಿವುಡ್‌ ನಟಿ ದಿಶಾ ಪಟಾಣಿ ಮನೆ ಮೇಲೆ ದಾಳಿ ಮಾಡಿದ್ದ ಇಬ್ಬರು ಆರೋಪಿಗಳು ಎನ್‌ಕೌಂಟರ್‌ಗೆ ಬಲಿ

September 18, 2025
ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಭೂಗತ ಪಾತಕಿ ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

September 18, 2025
ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d