• About us
  • Contact us
  • Disclaimer
Saturday, January 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗ್ಯಾಂಗ್‌ಸ್ಟರ್ ಸುರೇಶ್ ಪೂಜಾರಿ ಫಿಲಿಪ್ಪೀನ್ಸ್‌ನಲ್ಲಿ ಅರೆಸ್ಟ್

Coastal Times by Coastal Times
October 21, 2021
in ಕ್ರೈಮ್ ನ್ಯೂಸ್
ಗ್ಯಾಂಗ್‌ಸ್ಟರ್ ಸುರೇಶ್ ಪೂಜಾರಿ ಫಿಲಿಪ್ಪೀನ್ಸ್‌ನಲ್ಲಿ ಅರೆಸ್ಟ್
42
VIEWS
WhatsappTelegramShare on FacebookShare on Twitter

ಮಂಗಳೂರು: ಅಂಡರ್‌ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿ ಬಳಿಕ ತನ್ನದೇ ನಟೋರಿಯಸ್ ಗ್ಯಾಂಗ್ ಕಟ್ಟಿಕೊಂಡು ಮುಂಬೈಯಲ್ಲಿ ಬಾರ್ ಮಾಲೀಕರಿಂದ, ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಕರಾವಳಿ ಮೂಲದ ಗ್ಯಾಂಗ್‌ಸ್ಟರ್ ಸುರೇಶ್ ಪೂಜಾರಿಯನ್ನು ಫಿಲಿಪ್ಪೀನ್ಸ್ ಪೊಲೀಸರು ಬಂಧಿಸಿದ್ದಾರೆ.

ಬಾಲಕನಾಗಿದ್ದಾಗಲೇ ಹೋಟೆಲ್ ಕೆಲಸಕ್ಕೆಂದು ಮುಂಬೈಗೆ ತೆರಳಿದ್ದ ಸುರೇಶ್, ಕೆಲವರ್ಷಗಳ ಬಳಿಕ ಯಾವುದೇ ಕೇಸ್‌ನಲ್ಲಿ ಜೈಲು ಪಾಲಾಗಿದ್ದ. ಈ ವೇಳೆ ರವಿ ಪೂಜಾರಿಯ ಸಂಪರ್ಕಕ್ಕೆ ಬಂದಿದ್ದ. ಬಳಿಕ ಛೋಟಾ ರಾಜನ್ ಜತೆಗೂ ಇದ್ದ. ದಶಕದ ಹಿಂದೆ ಅವರಿಬ್ಬರಿಂದಲೂ ಅಂತರ ಕಾಯ್ದುಕೊಂಡು ತನ್ನದೇ ಗ್ಯಾಂಗ್ ಕಟ್ಟಿಕೊಂಡು ಭೂಗತ ಲೋಕದಲ್ಲಿ ಗುರುತಿಸಿಕೊಂಡಿದ್ದ. ನವೀ ಮುಂಬೈ, ಮುಂಬೈ ಹಾಗೂ ಥಾಣೆಯಲ್ಲಿನ ಬಾರ್ ಮಾಲೀಕರಿಗೆ ಕರೆ ಮಾಡಿ ಹಫ್ತಾಕ್ಕಾಗಿ ಬೆದರಿಕೆ ಹಾಕುತ್ತಿದ್ದ. ಹಣ ಕೊಡದೆ ಇದ್ದರೆ ಕೊಲೆ ಬೆದರಿಕೆ ಹಾಕುತ್ತಿದ್ದ. ತನ್ನ ಸಹಚರರ ಮೂಲಕ ಬಾರ್‌ಗಳಿಗೆ ಶೂಟ್ ಮಾಡಿ ಹೆದರಿಸಿ ಹಣ ಲೂಟಿ ಮಾಡುತ್ತಿದ್ದ. 2015ರಲ್ಲಿ ಕೇಬಲ್ ಆಪರೇಟರ್ ಓರ್ವನನ್ನು ಕೊಲೆ ಮಾಡಿಸಿದ್ದ. 2018ರಲ್ಲಿ ಕಲ್ಯಾಣ್ ಭಿವಂಡಿಯ ಹೋಟೆಲ್‌ಗೆ ಶಾರ್ಪ್ ಶೂಟರ್‌ಗಳ ಮೂಲಕ ಗುಂಡು ಹಾರಿಸಿ ಅಲ್ಲಿದ್ದ ಸ್ವಾಗತಕಾರನನ್ನು ಕೊಲೆ ಮಾಡಿಸಿದ್ದ.

2007ರಲ್ಲಿ ಮುಂಬೈ ಬಿಟ್ಟು ವಿದೇಶಕ್ಕೆ ತೆರಳಿದ್ದ ಸುರೇಶ್ ಪೂಜಾರಿ ಅಲ್ಲಿಂದಲೇ ತನ್ನ ಸಹಚರರ ಮೂಲಕ ಕೆಲಸ ಮಾಡಿಸುತ್ತಿದ್ದ. ಆತನ ಪತ್ತೆಗೆ ಮುಂಬೈ ಪೊಲೀಸರು ಇಂಟರ್‌ಪೋಲ್ ನೋಟಿಸ್ ಜಾರಿ ಮಾಡಿದ್ದರು. ಮಲೇಷ್ಯಾ, ಕೆನಡಾ, ಫಿಲಿಪ್ಪೀನ್ಸ್ಸ್, ದುಬೈ ಮೊದಲಾದ ಕಡೆ ತನ್ನ ವಾಸ ಬದಲಾಯಿಸುತ್ತಿದ್ದ ಆತ 2020 ಸೆಪ್ಟೆಂಬರ್‌ನಿಂದ ಫಿಲಿಪ್ಪೀನ್ಸ್‌ನಲ್ಲಿ ನೆಲೆಸಿದ್ದ.

ಸುರೇಶ್ ಪೂಜಾರಿ ಬೇರೆ ದೇಶಗಳಿಗೆ ಹೋದಾಗಲೆಲ್ಲ ಬೇರೆ ಬೇರೆ ಹೆಸರುಗಳನ್ನು ಇಟ್ಟುಕೊಂಡು, ನಕಲಿ ಪಾಸ್‌ಪೋರ್ಟ್‌ಗಳನ್ನು ಬಳಸಿ ಪ್ರಯಾಣಿಸುತ್ತಿದ್ದ. ಸುಮಾರು 8 ಪಾಸ್‌ಪೋರ್ಟ್‌ಗಳಿದ್ದು, ಸುರೇಶ್ ಪೂಜಾರಿ, ಸುರೇಶ್ ಪುರಿ, ಸತೀಶ್ ಪೈ, ಶೇಖರ್ ಪೈ ಮೊದಲಾದ ಹೆಸರುಗಳಿವೆ. ಈತನ ಮೂಲ ಉಡುಪಿ ಜಿಲ್ಲೆಯ ಮಲ್ಪೆ. ತಂದೆ ಬಸಪ್ಪ ದೇವಸ್ಥಾನದ ಪೂಜಾರಿಯಾಗಿದ್ದು, ಪುತ್ರನ ಜತೆ ಯಾವುದೇ ಸಂಬಂಧ ಹೊಂದಿಲ್ಲ. ಸುರೇಶ್‌ನ ಸಹೋದರಿ ಮದುವೆಯಾಗಿ ಥಾಣೆಯಲ್ಲಿ ನೆಲೆಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಯಾವುದೇ ಅಪರಾಧ ಕೃತ್ಯಗಳನ್ನು ಎಸಗಿರುವ ಮಾಹಿತಿ ಇಲ್ಲ. ಆದರೆ ಬೆಂಗಳೂರಿನಲ್ಲಿ ಕೆಲವು ಪ್ರಕರಣಗಳಿವೆ.

ರವಿ ಪೂಜಾರಿ ಸೆನೆಗಲ್‌ನಲ್ಲಿ ಬಂಧಿತನಾಗಿ ಬೆಂಗಳೂರಿಗೆ ಹಸ್ತಾಂತರವಾದ ಬಳಿಕ ಮುಂಬೈಯನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಸುರೇಶ್ ಪೂಜಾರಿ ಹವಣಿಸಿದ್ದು, ಈ ಅವಧಿಯಲ್ಲೇ ಬಂಧನವಾಗಿದ್ದಾನೆ. ಶೀಘ್ರದಲ್ಲೇ ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಡ್ಯಾರ್: ಪೊಲೀಸ್ ಸಿಬ್ಬಂದಿ ಮೇಲೆ ಮರಳು ಸಾಗಾಟದ ಟಿಪ್ಪರ್ ಚಲಾಯಿಸಲು ಯತ್ನ

Next Post

ಕುಂದಾಪುರ: ಪಂಚಗಂಗಾವಳಿ ಹೊಳೆಯಲ್ಲಿ ಪಂಜರ ಮೀನುಗಳ ನಿಗೂಢ ಸಾವು

Related Posts

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಕ್ರೈಮ್ ನ್ಯೂಸ್

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
46
ಬೆಂಗಳೂರಿನ ಬಿಲ್ಡರ್ ಮನೆಯಲ್ಲಿ 18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ನೇಪಾಳ ಮೂಲದ ಮನೆ ಕೆಲಸದ ದಂಪತಿಯ ಕೃತ್ಯ!
ಕ್ರೈಮ್ ನ್ಯೂಸ್

ಬೆಂಗಳೂರಿನ ಬಿಲ್ಡರ್ ಮನೆಯಲ್ಲಿ 18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ನೇಪಾಳ ಮೂಲದ ಮನೆ ಕೆಲಸದ ದಂಪತಿಯ ಕೃತ್ಯ!

January 29, 2026
41
Next Post
ಕುಂದಾಪುರ:  ಪಂಚಗಂಗಾವಳಿ ಹೊಳೆಯಲ್ಲಿ ಪಂಜರ ಮೀನುಗಳ ನಿಗೂಢ ಸಾವು

ಕುಂದಾಪುರ: ಪಂಚಗಂಗಾವಳಿ ಹೊಳೆಯಲ್ಲಿ ಪಂಜರ ಮೀನುಗಳ ನಿಗೂಢ ಸಾವು

Discussion about this post

Recent News

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
31
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d