• About us
  • Contact us
  • Disclaimer
Friday, August 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಕರಾವಳಿ ಮಹಿಳೆ ಯಾರು?

Coastal Times by Coastal Times
November 21, 2023
in ಕ್ರೀಡಾ ಸುದ್ದಿ
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಕರಾವಳಿ ಮಹಿಳೆ ಯಾರು?
156
VIEWS
WhatsappTelegramShare on FacebookShare on Twitter

ಮಂಗಳೂರು, ನ.20: ಮೊನ್ನೆಯಷ್ಟೇ ಕೊನೆಗೊಂಡ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯಾ ತಂಡ ವಿಶ್ವಕಪ್ ತನ್ನದಾಗಿಸಿಕೊಂಡಿದೆ. ಆ ಚಾಂಪಿಯನ್ಸ್​ ತಂಡದ ಹಿಂದೆ ಕರಾವಳಿಯ ಮಹಿಳೆಯೊಬ್ಬರು ಇರುವುದು ತಡವಾಗಿ ಬೆಳಕಿಗೆ ಬಂದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿದ್ದವರು ನಮ್ಮ ಕರಾವಳಿ ಮೂಲದ ಕುವರಿ ಅಂದರೆ ಹೆಚ್ಚಿನ ಜನ ನಂಬಲಿಕ್ಕಿಲ್ಲ. ಮಂಗಳೂರಿನ ಕಿನ್ನಿಗೋಳಿ ಮೂಲದ ಊರ್ಮಿಳಾ ರೊಸಾರಿಯೋ ಎಂಬ ಯುವತಿ ಕ್ರಿಕೆಟ್ ಆಸ್ಟೇಲಿಯಾ ತಂಡದ ಮ್ಯಾನೇಜರ್ ಆಗಿದ್ದು ಭಾರತ ವಿರುದ್ಧ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ‌

ಯಾರೀಕೆ ಊರ್ಮಿಳಾ?: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಿನ್ನಿಗೋಳಿಯ ವೆಲಂಟೈನ್ ರೊಸೆರಿಯೊ ಮತ್ತು ಇವಿ ಅವರ ಪುತ್ರಿಯೇ ಊರ್ಮಿಳಾ ರೊಸೆರಿಯೊ. ಈ ದಂಪತಿ ದೋಹಾ ಕತಾರ್​ನಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿಯೇ ಜನಿಸಿದ್ದ ಊರ್ಮಿಳಾಗೆ ಈಗ 34 ವರ್ಷ. ಈಕೆಯ ತಂದೆ-ತಾಯಿ ಏಳು ವರ್ಷಗಳ ಹಿಂದೆ ಭಾರತಕ್ಕೆ ಮರಳಿದ್ದು, ಸಕಲೇಶಪುರದಲ್ಲಿ ಕಾಫಿ ಎಸ್ಟೇಟ್ ಖರೀದಿಸಿ ನೆಲೆಸಿದ್ದಾರೆ.

ಈ ಮಧ್ಯೆ ಕಾರ್ನೆಜಿ ಮೆಲನ್ ಯುನಿವರ್ಸಿಟಿಯಲ್ಲಿ ಬಿಬಿಎ ಪದವಿ ಪಡೆದಿರುವ ಊರ್ಮಿಳಾ ಆಸ್ಟ್ರೇಲಿಯಾಗೆ ತೆರಳಿದ್ದರು. ಇದಕ್ಕೂ ಮುನ್ನ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ಊರ್ಮಿಳಾ, ಮೂರು ವರ್ಷಗಳ ಕಾಲ ಕತಾರ್ ಟೆನಿಸ್ ಫೆಡರೇಷನ್​ನಲ್ಲೂ ಕೆಲಸ ಮಾಡಿದ್ದರು. ಆಸ್ಟ್ರೇಲಿಯಾಗೆ ತೆರಳಿದ ಬಳಿಕ ಮೊದಲಿಗೆ ಮೂರು ವರ್ಷ ಅಡಿಲೇಡ್ ಕ್ರಿಕೆಟ್ ಟೀಮ್ ಜತೆ ಕೆಲಸ ಮಾಡಿದ್ದರು. ನಂತರ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಮ್ಯಾನೇಜರ್ ಆದರು.

ನಂತರ ಕಳೆದ ಫುಟ್​ಬಾಲ್ ವಿಶ್ವಕಪ್ ಸಂದರ್ಭದಲ್ಲಿ ಕ್ರಿಕೆಟ್​ನಿಂದ ಬಿಡುವು ಪಡೆದ ಊರ್ಮಿಳಾ ಕತಾರ್​ನಲ್ಲಿ ನಾಲ್ಕು ತಿಂಗಳ ಕಾಲ ಫುಟ್​ಬಾಲ್ ಕ್ರೀಡಾಂಗಣದ ನಿರ್ವಹಣೆ ಜವಾಬ್ದಾರಿ ನಿಭಾಯಿಸಿದ್ದರು. ಇದೇ ಸೆಪ್ಟೆಂಬರ್​ನಲ್ಲಿ ಮತ್ತೆ ಆಸ್ಟ್ರೇಲಿಯಾಗೆ ವಾಪಸ್ ಆದ ಈಕೆಗೆ ಆಸ್ಟ್ರೇಲಿಯಾದ ಪುರುಷರ ಕ್ರಿಕೆಟ್ ತಂಡವನ್ನು ನಿರ್ವಹಣೆ ಮಾಡುವ ಅವಕಾಶ ಸಿಕ್ಕಿತ್ತು.

ಊರ್ಮಿಳಾ ವಿಶ್ವಕಪ್ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪುರುಷರ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿದ್ದು, ಅದು ಮುಗಿದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡಕ್ಕೆ ಮರಳಲಿದ್ದು, ಈ ತಂಡ ಡಿಸೆಂಬರ್​​ನಲ್ಲಿ ಭಾರತಕ್ಕೆ ಬರುವಾಗ ಜೊತೆಯಾಗಲಿದ್ದಾರೆ ಎಂಬುದಾಗಿ ಈಕೆಯ ತಂದೆ ಮಾಹಿತಿ ನೀಡಿದ್ದಾರೆ. ಅಂದಹಾಗೆ ಈಕೆ ಕ್ರಿಕೆಟ್ ಜಗತ್ತಿಗೆ ಪ್ರವೇಶಿಸಿದ್ದೇ ಅಚ್ಚರಿ. ವಿದ್ಯಾರ್ಥಿನಿ ಆಗಿದ್ದಾಗ ಅವಳು ಬಾಸ್ಕೆಟ್​ಬಾಲ್, ಟೆನಿಸ್​, ರೋಯಿಂಗ್, ಬಂಗಿ ಜಂಪಿಂಗ್​ನಲ್ಲಿ ತೊಡಗಿಸಿಕೊಂಡಿದ್ದಳು. ಆದರೆ ನಂತರ ಹೀಗೆ ಕ್ರಿಕೆಟ್​ನಲ್ಲಿ ತೊಡಗಿಸಿಕೊಳ್ಳುತ್ತಾಳೆ ಎಂಬ ಯೋಚನೆಯೇ ಇರಲಿಲ್ಲ ಎನ್ನುತ್ತಾರೆ ಊರ್ಮಿಳಾ ಅವರ ತಂದೆ ವೆಲಂಟೈನ್.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ನಗರದಲ್ಲಿ ಇನ್ನುಂದೆ ಕೆಲವು ಪ್ರದೇಶದಲ್ಲಿ ಹಾರ್ನ್ ಹಾಕುವಂತಿಲ್ಲ

Next Post

ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಆಹ್ವಾನ ರದ್ದು

Related Posts

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ
ಕ್ರೀಡಾ ಸುದ್ದಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
18
ಚೆಸ್ ಗ್ರ್ಯಾಂಡ್ ಮಾಸ್ಟರ್ ಸೋಲಿಸಿ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಬ್ರಿಟಿಷ್ ಚೆಸ್ ಆಟಗಾರ್ತಿ 10 ವರ್ಷದ ಬೋಧನಾ ಶಿವಾನಂದನ್
ಕ್ರೀಡಾ ಸುದ್ದಿ

ಚೆಸ್ ಗ್ರ್ಯಾಂಡ್ ಮಾಸ್ಟರ್ ಸೋಲಿಸಿ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಬ್ರಿಟಿಷ್ ಚೆಸ್ ಆಟಗಾರ್ತಿ 10 ವರ್ಷದ ಬೋಧನಾ ಶಿವಾನಂದನ್

August 15, 2025
15
Next Post
ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಆಹ್ವಾನ ರದ್ದು

ಬೆಂಗಳೂರು ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಂಬಳದಿಂದ ಆಹ್ವಾನ ರದ್ದು

Discussion about this post

Recent News

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

August 28, 2025
31
ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

August 28, 2025
292
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

August 28, 2025
ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

August 28, 2025
ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d