• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಂಇಎಸ್‌ ಪುಂಡಾಟ : ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ

Coastal Times by Coastal Times
December 21, 2021
in ಕರಾವಳಿ
ಎಂಇಎಸ್‌ ಪುಂಡಾಟ : ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ
8
VIEWS
WhatsappTelegramShare on FacebookShare on Twitter

ಮಂಗಳೂರು : ಬೆಳಗಾವಿಯಲ್ಲಿ ‌ಎಂಇಎಸ್ ಪುಂಡಾಟ ನಿಜಕ್ಕೂ ಬಹಳ ದುಖಃಕರ ಸಂಗತಿ. ಸಂಗೊಳ್ಳಿ ರಾಯಣ್ಣ ಕನ್ನಡದ ಅಸ್ಮಿತೆಯನ್ನು ಪ್ರತಿನಿಧಿಸುತ್ತಾರೆ. ಶಿವಾಜಿ ಮಹಾರಾಜರು ಕೇವಲ ಮರಾಠಿಗರಿಗೆ ಸೀಮಿತರಲ್ಲ. ಶಿವಾಜಿ ಮಹಾರಾಜ ನಿಜವಾಗಿಯೂ ಮಹಾನ್ ರಾಷ್ಟ್ರ ಭಕ್ತ. ಎಂಇಎಸ್​ನವರು 2 ಬಾರಿ ಈ ರೀತಿ ಗಲಾಟೆ ಮಾಡುತ್ತಾರೆ. ಕನ್ನಡ ರಾಜ್ಯೋತ್ಸವ, ಅಧಿವೇಶನದ ವೇಳೆ ಗಲಾಟೆ ಮಾಡ್ತಾರೆ. ಸರ್ಕಾರ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಸಾಪದಲ್ಲಿ ಕನ್ನಡ, ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ ಮಾಡಲಾಗುವುದು. ಕರ್ನಾಟಕ, ಮಹಾರಾಷ್ಟ್ರ ಕಡೆ ಸೇವೆ ಸಲ್ಲಿಸಿರೋರ ಸಮಿತಿ ರಚನೆ ಮಾಡಲಾಗುವುದು. ನ್ಯಾಯಮೂರ್ತಿ ಬನ್ನೂರು ಮಠ ಸೇರಿದಂತೆ ಹಿರಿಯರ ಸಮಿತಿಗೆ ಚಿಂತನೆ ಮಾಡಲಾಗಿದೆ ಎಂದು ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ‌ಎಂಇಎಸ್ ಪುಂಡರ ದಾಳಿಯನ್ನು ನಾನು ಖಂಡಿಸುತ್ತೇನೆ. ಪ್ರತಿಮೆಗಳು ನಮ್ಮ ಅಸ್ಮಿತೆಯ ಪ್ರತೀಕ. ಸಂಗೊಳ್ಳಿ ರಾಯಣ್ಣ ಸ್ವಾತಂತ್ರ ಹೋರಾಟಗಾರ. ರಾಯಣ್ಣ ಕಿತ್ತೂರಿನ ರಾಣಿಯ ಬಲಗೈ ಬಂಟನಾಗಿದ್ದ. ಸಂಗೊಳ್ಳಿ ರಾಯಣ್ಣ ಕನ್ನಡ ಆಸ್ಮಿತೆಯನ್ನು ಪ್ರತಿನಿಧಿಸುತ್ತಾರೆ. ಶಿವಾಜಿ ಮಹಾರಾಜರು ಮರಾಠಿಗಳಿಗೆ ಸೀಮಿತರಲ್ಲ. ಅವರು ಮಹಾನ್ ರಾಷ್ಟ್ರ ಭಕ್ತರಾಗಿದ್ದರು. ಯಾರೇ ಅಗಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ ಮಾಡಿರುವುದು ಅಕ್ಷಮ್ಯ ಅಪರಾಧ. ಎಂಇಎಸ್ ನವರು ಎರಡು ಸಲ ಈ ಥರ ಗಲಾಟೆ ಮಾಡುತ್ತಾರೆ. ಕನ್ನಡ ರಾಜ್ಯೋತ್ಸವ ಮತ್ತು ಅಧಿವೇಶನದ ವೇಳೆ ಗಲಾಟೆ ಮಾಡುತ್ತಾರೆ. ಸರ್ಕಾರ ಇನ್ನು ಮುಂದೆ ಕಠಿಣವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಘರ್ಷದ ಹಾದಿ ಹಿಡಿದ್ರೆ ಸಮಸ್ಯೆ ಪರಿಹಾರ ಅಗಲ್ಲ. ಸಮನ್ವಯತೆ ಬರಬೇಕು, ಭಾವನಾತ್ಮಕವಾಗಿ ನಂಬಿಕೆ ಎರಡು ಕಡೆಯೂ ಬೆಳೆಯಬೇಕು. ನಾವು ಬೆಳಗಾವಿ ಹೋಗಿ ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ಮತ್ತು ಮರಾಠಿ ಭಾಷೆ ತಿಳಿದಿರುವ ಸಮಿತಿ ರಚನೆ ಮಾಡುತ್ತೇವೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ಕಡೆಯಲ್ಲಿ ಸೇವೆ ಸಲ್ಲಿಸಿರುವ ಸಮಿತಿ ರಚನೆ ಮಾಡುತ್ತೇವೆ. ಎರಡೂ ಕಡೆಯಲ್ಲೂ ಅವರ ಮಾತಿಗೆ ಬೆಲೆ ಇರುವ ಹಿರಿಯರನ್ನು ಸೇರಿಸಿ ಸಮಿತಿ ರಚನೆ ಮಾಡುತ್ತೇವೆ. ನ್ಯಾಯಮೂರ್ತಿ ಬನ್ನೂರು ಮಠ ಸೇರಿದಂತೆ ಹಿರಿಯರನ್ನು ಸೇರಿಸಿ ಸಮಿತಿ ರಚಿಸಲು ಚಿಂತಿಸಿದ್ದೇವೆ. ಹಿರಿಯರ ಸಮಿತಿಯ ಮಾರ್ಗದರ್ಶನದಲ್ಲಿ ಎರಡು ಕಡೆಯವರನ್ನು ಸೇರಿಸಿ ಮಾತುಕತೆ ನಡೆಸುತ್ತೇವೆ. ಇಲ್ಲಿಯವರೆಗೆ ಪುಂಡಾಟ ಮಾಡಿರುವಂತದ್ದು ಅಕ್ಷ್ಯಮ ಅಪರಾಧ. ಮುಂದೆ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಸರ್ಕಾರದ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ ಕೈ ಜೋಡಿಸುತ್ತದೆ. ಸರ್ಕಾರದ ಕೈ ಬಲಪಡಿಸುವ ಕಾರ್ಯ ಮಾಡುತ್ತದೆ. ಸರ್ಕಾರ ಮೌನ ವಹಿಸಬಾರದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಸಮಸ್ಯೆಗೆ ಪರಿಹಾರ ಇದ್ದೇ ಇದೆ. ಸಮಸ್ಯೆ ಪರಿಹಾರವಾಗಬೇಕಾದರೆ ಚಟುವಟಿಕೆಯಿಂದ ಕೂಡಿದ ಸರ್ಕಾರ ಇರಬೇಕು. ಸರ್ಕಾರದ ಮೌನವನ್ನು ನಾವು ಸಹಿಸುವುದಿಲ್ಲ. ಸಮಸ್ಯೆ ಉಂಟಾದ ಸಂದರ್ಭದಲ್ಲಿ ಸಮಸ್ಯೆಯನ್ನು ಬಗೆಹರಿಸಬೇಕು. ಕಬ್ಬಿಣ ಕಾದಿರುವಾಗಲೇ ಹೊಡೆಯುವ ಕೆಲಸ ಅಗಬೇಕು. ಕನ್ನಡ, ಕನ್ನಡಿಗರು, ಕರ್ನಾಟಕಕ್ಕೆ ಯಾವುದೇ ರೀತಿಯ ಧಕ್ಕೆಯಾದರೆ ಕನ್ನಡ ಪರಿಷತ್ ಬೀದಿಗೆ ಇಳಿದು ಹೋರಾಟ ನಡೆಸುತ್ತದೆ ಹಾಗೂ ತುಳುವಿಗೆ ಯೋಗ್ಯ ಸ್ಥಾನ ಮಸನ ದೋರಕಲು ಕನ್ನಡ ಪರಿಷತ್ ಸಹಕಾರ ನೀಡುತ್ತದೆ. ತುಳು ಕರಾವಳಿಯ ಜೀವನಾಡಿ ಭಾಷೆ ಎಂಟನೇ ಪರಿಚ್ಛೇದ ಕ್ಕೆ ಸೇರಿಸುವಲ್ಲಿ ಸಹಕಾರವಿದೆ ಎಂದು ಮಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಾಷ್ಟಮಟ್ಟದ ಸ್ಕೇಟಿಂಗ್: ಮಂಗಳೂರಿನ ಆರ್ನಾ ರಾಜೇಶ್ ಗೆ ಎರಡು ಪದಕ

Next Post

ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪ್ರತಿಭಟನೆ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪ್ರತಿಭಟನೆ

ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಪ್ರತಿಭಟನೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d