• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್, 49 ಲಕ್ಷ ರೂ. ವಸೂಲಿ

Coastal Times by Coastal Times
January 22, 2022
in ಕ್ರೈಮ್ ನ್ಯೂಸ್
ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್, 49 ಲಕ್ಷ ರೂ. ವಸೂಲಿ
122
VIEWS
WhatsappTelegramShare on FacebookShare on Twitter

ಮಂಗಳೂರು: ಪೂಜೆ ಮಾಡಿಸಲೆಂದು ಪುರೋಹಿತರೊಬ್ಬರನ್ನು ಮನೆಗೆ ಕರೆಸಿಕೊಂಡ ಈ ಖತರ್ನಾಕ್​ ದಂಪತಿ ಮಾಡಬಾರದ್ದು ಮಾಡಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕೊಡಗು ಜಿಲ್ಲೆ ಸೋಮವಾರಪೇಟೆಯ ಭವ್ಯ ಮತ್ತು ಈಕೆಯ 2ನೇ ಗಂಡ, ಹಾಸನದ ಅರಕಲಗೂಡು ನಿವಾಸಿ ಕುಮಾರ್ ಬಂಧಿತರು. ಇವರಿಬ್ಬರೂ ಮಂಗಳೂರಿನ ಮೇರಿಹಿಲ್​ನ ಅಪಾರ್ಟ್‌ಮೆಂಟ್​ನಲ್ಲಿ ವಾಸವಿದ್ದರು. ಇವರ ಹಿನ್ನೆಲೆ ಕೇಳಿದ್ರೆ ಶಾಕ್​ ಆಗ್ತೀರಿ.

ಮನೆಯಲ್ಲಿ ಪೂಜೆ ಮಾಡಿಸಬೇಕಿದೆ. ದಯವಿಟ್ಟು ನಮ್ಮ ಮನೆಗೆ ಬಂದು ಪೂಜೆ ಮಾಡಿ ಎಂದು ಚಿಕ್ಕಮಗಳೂರು ಮೂಲದ ಪುರೋಹಿತರೊಬ್ಬರನ್ನು ಭೇಟಿ ಮಾಡಿದ ಈ ದಂಪತಿ, ನಮ್ಮ ಮನೆಯಲ್ಲಿ ಪದೇಪದೆ ಸಮಸ್ಯೆಗಳು ಸಂಭವಿಸುತ್ತಿವೆ. ದಯವಿಟ್ಟು ಮನೆಯಲ್ಲೊಂದು ಪೂಜೆ ಮಾಡಿ ಎಂದು ಮನೆಗೆ ಆಹ್ವಾನಿಸಿದ್ದರು. ಪೂಜೆ ಮಾಡಲೆಂದು ಪುರೋಹಿತ ಮನೆಗೆ ಬರುತ್ತಿದ್ದಂತೆ ವರಸೆ ಬದಲಿಸಿದ ದಂಪತಿ, ಅರ್ಚಕರರೊಂದಿಗೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದಾಗಿ ಬೆದರಿಸಿ ಅರ್ಚಕರಿಂದ ಬರೋಬ್ಬರಿಂದ 49 ಲಕ್ಷ ರೂ. ವಸೂಲಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಅಷ್ಟೇ ಅಲ್ಲ, ಇನ್ನಷ್ಟು ಹಣಕ್ಕಾಗಿ ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿದ್ದರು.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್​ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ಖತರ್ನಾಕ್​ ದಂಪತಿಯನ್ನು ಬಂಧಿಸಿದೆ. ಆರೋಪಿಗಳಿಂದ 37,000 ರೂ. ಮೌಲ್ಯದ ಎರಡು 2 ಚಿನ್ನದ ರಿಂಗ್, 31 ಸಾವಿರ ನಗದು ಮತ್ತು 4 ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜತೆ ಇತರರು ಕೂಡ ಭಾಗಿಯಾಗಿ ಹಣ ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್​ಇನ್​ಸ್ಪೆಕ್ಟರ್ ಅವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಸಂತ್ರಸ್ತ ಅರ್ಚಕರಿಗೆ ಬೆದರಿಕೆ ಹಾಕಿದ್ದಾರೆ. ಇನ್ನಷ್ಟು ಹಣ ಕೊಡಬೇಕು. ಇಲ್ಲವಾದಲ್ಲಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಕೆಯೊಡ್ಡಿದ್ದರು. ಅಷ್ಟೇ ಅಲ್ಲ, ಆರೋಪಿ ಕುಮಾರ್ ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ದೂರುದಾರನಿಗೆ ಸಹಾಯ ಮಾಡುವ ನೆಪದಲ್ಲೂ ಹಣ ವಸೂಲಿ ಮಾಡಿದ್ದಾನೆ.

ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ದಂಪತಿ ಐಷಾರಾಮಿ ಜೀವನ ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು, ಈ ಕೃತ್ಯವೆಸಗಿದ ನಂತರ ಸಂತ್ರಸ್ತ ಪುರೋಹಿತನಿಂದ ಸುಲಿಗೆ ಮಾಡಿದ ಹಣದಲ್ಲಿ 10 ಲಕ್ಷ ಹಣ ಕೊಟ್ಟು ಪ್ಲ್ಯಾಟ್​ವೊಂದನ್ನು ಲೀಸ್​ಗೆ ಪಡೆದುಕೊಂಡು ವಾಸವಿದ್ದರು. ಅಷ್ಟೇ ಅಲ್ಲ, ಪ್ಲ್ಯಾಟ್​ಗೆ ಸುಮಾರು 7 ಲಕ್ಷ ರೂ. ಮೌಲ್ಯದ ಮನೆ ಸಾಮಗ್ರಿ ಖರೀದಿಸಿದ್ದರು. ಹೊಸ ದ್ವಿಚಕ್ರ ವಾಹನ ಖರೀದಿಸಿದ್ದರು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವಿವರಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಮುಗಿಯದ ಸ್ಕಾರ್ಫ್ ವಿವಾದ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ!

Next Post

ಪಡುಬಿದ್ರೆ ; ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ : ಆರೋಪಿ ವಶಕ್ಕೆ

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
47
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
68
Next Post
ಪಡುಬಿದ್ರೆ ; ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ : ಆರೋಪಿ ವಶಕ್ಕೆ

ಪಡುಬಿದ್ರೆ ; ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ : ಆರೋಪಿ ವಶಕ್ಕೆ

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
53
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d