ಪಡುಬಿದ್ರೆ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜ (35) ಎಂಬವರಿಗೆ ವ್ಯಕ್ತಿಯೊರ್ವ ಚೂರಿ ಇರಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗಾಯಾಳು ರೀನಾ ಡಿಸೋಜ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ವಿನಯ (36) ಎಂಬ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.ರೀನಾ ಡಿಸೋಜ ನೆರೆ ಮನೆಯ ಮಹಿಳೆಯೊಂದಿಗೆ ಮಾತನಾಡತ್ತಿದ್ದಾಗ ಏಕಾಏಕಿ ಬಂದ ಆರೋಪಿ ಚೂರಿಯಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post