• About us
  • Contact us
  • Disclaimer
Thursday, May 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

Coastal Times by Coastal Times
February 22, 2024
in ಕರಾವಳಿ
ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!
137
VIEWS
WhatsappTelegramShare on FacebookShare on Twitter

ಬೆಂಗಳೂರು, ಫೆ 22: ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ಹಾಕಿಸಿದ್ದೆ ಎನ್ನುವ ವಿಪಕ್ಷ ನಾಯಕ ಆರ್​ ಅಶೋಕ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಕೆಂಡಾಮಂಡಲವಾಗಿದ್ದು, ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್​ ಅವರನ್ನು ತೆಗೆದು ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಪತ್ರ ಬರೆದು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಆರ್​ ಅಶೋಕ್​, ಬಜರಂಗ ದಳದ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆಶೋಕ್, ರಾಮನಗರದ ವಕೀಲರು ಜ್ಞಾನವಾಪಿ ದೇಗುಲ ಬಗ್ಗೆ ಪೋಸ್ಟ್ ಮಾಡಿದ್ರು. ಆ ವಿಚಾರವಾಗಿ ಪ್ರಸ್ತಾಪಿಸಿದ್ದೆ, ಮುಸ್ಲಿಮರು ಅಂತಾ ಓಲೈಕೆ ಮಾಡಬೇಡಿ. ಬಜರಂಗ ದಳ ಕಾರ್ಯಕರ್ತರ ಮೇಲೆ ಗೂಂಡಾಕಾಯ್ದೆ ಹಾಕಿಸಿದ್ದೆ ಎಂದೆ. ಬಜರಂಗ ದಳ, ಹಿಂದೂ ಕಾರ್ಯಕರ್ತರಿಗೆ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ. ನಾನು ಕೂಡ 10 ವರ್ಷ ಬಜರಂಗ ದಳದಲ್ಲೇ ಇದ್ದವನು ಎಂದು ಹೇಳಿದರು. ಈ ಮೂಲಕ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ಮುಂದೆ ಮಂಡಿಯೂರಿದರು.

ಅಷ್ಟಕ್ಕೂ ಆರ್ ಅಶೋಕ್ ಹೇಳಿದ್ದೇನು? : ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದರು. ಈ ವೇಳೆ, “ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಇದೇ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಧರಣಿ ಕೂಡ ನಡೆದು, ದೊಡ್ಡ ಗಲಾಟೆಯೇ ಆಗಿತ್ತು. ಅವತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನನ್ನ ಮೇಲೆ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ವೇಳೆ ಯುವತಿಯರ ಮೇಲೆ ದೌರ್ಜನ್ಯ ಎಸಗಿ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ಥರ ನೀವೂ ಕೂಡ ಕ್ರಮ ಕೈಗೊಳ್ಳಿ” ಎಂದು ಗೃಹ ಸಚಿವ ಪರಮೇಶ್ವರ್​ಗೆ​ ಆಗ್ರಹಿಸಿದ್ದರು.

ಈ ಮೂಲಕ ತಾವು ಗೃಹ ಸಚಿವರಾಗಿದ್ದಾಗ ಹೇಗೆ ಇದ್ದೆ ಎನ್ನುವುದನ್ನು ತೋರಿಸಿಕೊಳ್ಳುವ ಭರದಲ್ಲಿ ಬಜರಂಗ ದಳ ವಿರುದ್ಧ ಗುಂಡಾ ಕೇಸ್ ಹಾಕಿದ್ದೆ ಎಂದು ಹೇಳಿಕೊಂಡಿದ್ದರು. ಆದ್ರೆ, ಈ ಹೇಳಿಕೆ ವಿಪಕ್ಷ ನಾಯಕ ಆರ್ ಅಶೋಕ್​ಗೆ ತಿರುಗು ಬಾಣವಾಗಿದ್ದು, ಅಶೋಕ್​ ವಿರುದ್ಧ ಬಜರಂಗದಳ ಕೆಂಡಾಮಂಡಲವಾಗಿತ್ತು. ಇದೀಗ ಕ್ಷಮೆ ಕೇಳುವ ಮೂಲಕ ಅಶೋಕ್ ಹಿಂದೂ ಸಂಘಟನೆಗಳ ಮುಂದೆ ಮಂಡಿಯೂರಿದ್ದಾರೆ,.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫೆ. 24 ರಂದು ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

Next Post

ದುಬೈಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ವಿಧಿವಶ

Related Posts

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ
ಕರಾವಳಿ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
55
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
35
Next Post
ದುಬೈಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ವಿಧಿವಶ

ದುಬೈಯಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ವಿಧಿವಶ

Discussion about this post

Recent News

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
56
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ

May 27, 2026
ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d