ಶ್ರೀನಗರ : ಇಲ್ಲಿನ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಇಂದು ಬೆಳಗ್ಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗದ ಮಂಜುನಾಥ್ ರಾವ್ ಸೇರಿದಂತೆ ಮೂವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಮೂಲಗಳ ಪ್ರಕಾರ, ಸಾವಿನ ಸಂಖ್ಯೆ
ಕರ್ನಾಟಕದ ಅಭಿಜ್ಞಾನ್ ರಾವ್, ಮಂಜುನಾಥ್ ರಾವ್, ಗುಜರಾತ್ನ ವಿನೋ ಭಟ್ಪಾ ಪಾಟೀಲ್ ಬೀಡ್ಸ್, ರಿನೋ ಪಾಂಡೆ, ಮಹಾರಾಷ್ಟ್ರದ ಎಸ್.ಬಾಲಚಂದ್ರು, ಡಾ.ಪರಮೇಶ್ವರ್, ತಮಿಳುನಾಡಿನ ಸಂತ್ರು ಮತ್ತು ಒಡಿಶಾದ ಸಾಹಸಿ ಕುಮಾರಿ. ಶಿವಮೊಗ್ಗದ ಮಂಜುನಾಥ್ ರಾವ್ ಅವರು ಉಗ್ರರ ದಾಳಿಯಲ್ಲಿ ಮೃತಪಟ್ಟಿರುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಇನ್ನು ಪತ್ನಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್ ರಾವ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದ ವಿಜಯ ನಗರದ ನಿವಾಸಿಯಾಗಿರುವ ಮಂಜುನಾಥ್ ರಾವ್ ಅವರು ತಮ್ಮ ಪತ್ನಿ ಮತ್ತು ಪುತ್ರನ ಜೊತೆಗೆ ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post