ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಪಡೆದ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸರು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಈ ಕುರಿತು ವರದಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಜಾಮೀನು ರದ್ದಾದರೆ ಸ್ವಾಮೀಜಿ ಯಾವುದೇ ಕ್ಷಣದಲ್ಲಾದರೂ ಅರೆಸ್ಟ್ ಆಗುವ ಸಾಧ್ಯತೆ ಇದೆ.
ಶ್ರೀಗಳ ಜಾಮೀನು ರದ್ದು ಮಾಡುವಂತೆ ಮನವಿ : ತಮ್ಮ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಈ ಕುರಿತು ಹರಿಹರ ಗ್ರಾಮಾಂತರ ಠಾಣೆಯ ಪಿಐ, ತನಿಖಾಧಿಕಾರಿ ಸುರೇಶ್ ಸಗರಿ ಅವರು ಮಾತನಾಡಿ, “ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಕೋರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಅವರು ಮೇ 25ರಂದು ಮತ್ತೊಮ್ಮೆ ವಿಚಾರಣೆಗಾಗಿ ಠಾಣೆಗೆ ಹಾಜರಾಗಲಿದ್ದಾರೆ” ಎಂದು ತಿಳಿಸಿದರು.
Discover more from Coastal Times Kannada
Subscribe to get the latest posts sent to your email.







Discussion about this post