ಮುಡಿಪು: ಮಂಜನಾಡಿ ಸಮೀಪದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಮಂಗಳವಾರ ಶಾರ್ಟ್ ಸರ್ಕೀಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ನಷ್ಟ ಸಂಭವಿಸಿದೆ.
ದೇರಳಕಟ್ಟೆಯಲ್ಲಿ ವಾಸವಾಗಿರುವ ನೋಮನ್ ಎಂಬುವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದ್ದು, ಘಟನೆ ವೇಳೆ ನಾಲ್ಕು ಸಿಬ್ಬಂದಿ ಒಳಗಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಹೊರ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಹತ್ತಿಯ ವಸ್ತುಗಳು ಹಾಗೂ ಯಂತ್ರಗಳು ಸುಟ್ಟುಹೋಗಿವೆ. ಘಟನೆಯಿಂದ ₹ 10 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ನೋಮನ್ ತಿಳಿಸಿದ್ದಾರೆ.
Discussion about this post