• About us
  • Contact us
  • Disclaimer
Wednesday, August 27, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಣಾಜೆ: ರಸ್ತೆ ನಿಯಮ ನಿರ್ಲಕ್ಷಿಸಿದ್ದ ಮಹಿಳೆಗೂ ಬಿತ್ತು ಕೇಸು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು, ಅಜಾಗರೂಕತೆಯ ಚಾಲನೆಗೆ ದಂಡ

Coastal Times by Coastal Times
June 22, 2023
in ಕೋಸ್ಟಾಲ್ ಟೈಮ್ಸ್ ವಿಶೇಷ
ಕೊಣಾಜೆ: ರಸ್ತೆ ನಿಯಮ ನಿರ್ಲಕ್ಷಿಸಿದ್ದ ಮಹಿಳೆಗೂ ಬಿತ್ತು ಕೇಸು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು, ಅಜಾಗರೂಕತೆಯ ಚಾಲನೆಗೆ ದಂಡ
136
VIEWS
WhatsappTelegramShare on FacebookShare on Twitter

ಕೊಣಾಜೆ: ತೌಡುಗೋಳಿ ಕ್ರಾಸ್ ಬಳಿ ಏಕಾಏಕಿ ರಸ್ತೆ ದಾಟಿದ ಮಹಿಳೆ ಬಸ್ ಅಪಘಾತದಿಂದ ಪಾರಾದ ಘಟನೆ ಮಂಗಳವಾರ ನಡೆದಿದೆ. ಮಂಗಳೂರಿನಿಂದ ಮುಡಿಪು ಸಂಪರ್ಕಿಸುವ ಖಾಸಗಿ ಬಸ್ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ಸಂದರ್ಭ ಚಾಲಕನ ಸಮಯಪ್ರಜ್ಞೆಯಿಂದಾಗಿ ಮಹಿಳೆ ಪಾರಾಗಿದ್ದಾರೆ.

ಮಹಿಳೆ ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ಸನ್ನು ಎಡಕ್ಕೆ ಸರಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆಗೂ ಬಿತ್ತು ಕೇಸು ; ಕಾಸರಗೋಡು ಜಿಲ್ಲೆಯ ವರ್ಕಾಡಿಯ ಐಸಮ್ಮ (63) ಎಂಬವರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 13 ಮತ್ತು ಪೊಲೀಸ್ ಏಕ್ಟ್ 92 ಜಿ ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದ್ದು, ದಂಡ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆಯುವ ಮಂದಿಗೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದ್ದು, ಈ ರೀತಿ ಮಾಡುವ ಮಂದಿ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.

ಅಜಾಗರೂಕತೆಯ ಚಾಲನೆಗೆ ದಂಡ : ಮಹಿಳೆಗೆ ಬಸ್  ಢಿಕ್ಕಿ ಹೊಡೆಯುವುದನ್ನು ಬಸ್ ಚಾಲಕ ತಪ್ಪಿಸಿರುವುದು ಶ್ಲಾಘನೀಯವಾಗಿದೆ. ಆದರೆ  ಕರ್ಕಶ ಹಾರ್ನ್ ನೊಂದಿಗೆ ಅತಿ ಕಿರಿದಾದ ರಸ್ತೆಯಲ್ಲಿ ಅತಿವೇಗ, ಅಜಾಗರೂಕತೆಯ ಬಸ್  ಚಾಲನೆಯನ್ನು  ಪೊಲೀಸರು ಗಮನಿಸಿದ್ದು, ಬಸ್ ಗೆ ದಂಡ ವಿಧಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಚಾಲಕನ ವಿರುದ್ಧ ಪ್ರಕರಣ : ಚಾಲಕ ತ್ಯಾಗರಾಜ್ ಬಸ್ಸನ್ನು ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿದ್ದರಿಂದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪೆಟ್ರೋಲ್ ಸುರಿದು ಹತ್ಯೆ ಮಾಡಿ ಚಾರ್ಮಾಡಿ ಘಾಟ್ ಬಳಿ ಮೃತದೇಹ ಎಸೆದಿದ್ದ ಪ್ರಕರಣ; ಬಂಟ್ವಾಳ ಮೂಲದ ಇಬ್ಬರು ಆರೋಪಿಗಳ ಬಂಧನ

Next Post

ಕರ್ನಾಟಕದ ಯಲಬುರ್ಗಾ ತಾಲೂಕುಗಳಲ್ಲಿ ಅಪೌಷ್ಟಿಕತೆ ಕೊನೆಗಾಣಿಸುವ ಪೈಲಟ್ ಪರಿಕಲ್ಪನೆ ಫಲಿತಾಂಶ

Related Posts

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
144
ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
ಕೋಸ್ಟಾಲ್ ಟೈಮ್ಸ್ ವಿಶೇಷ

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

June 25, 2025
174
Next Post
ಕರ್ನಾಟಕದ ಯಲಬುರ್ಗಾ ತಾಲೂಕುಗಳಲ್ಲಿ ಅಪೌಷ್ಟಿಕತೆ ಕೊನೆಗಾಣಿಸುವ ಪೈಲಟ್ ಪರಿಕಲ್ಪನೆ ಫಲಿತಾಂಶ

ಕರ್ನಾಟಕದ ಯಲಬುರ್ಗಾ ತಾಲೂಕುಗಳಲ್ಲಿ ಅಪೌಷ್ಟಿಕತೆ ಕೊನೆಗಾಣಿಸುವ ಪೈಲಟ್ ಪರಿಕಲ್ಪನೆ ಫಲಿತಾಂಶ

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
40
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
66
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d