ಸುಳ್ಯ: ಇತ್ತೀಚೆಗೆ ಕ್ಷುಲ್ಲಕ ವಿಚಾರವಾಗಿ ಬೆಳ್ಳಾರೆಯಲ್ಲಿ ಯುವಕನೊಬ್ಬನಿಗೆ 8 ಜನರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಧೀರ್ ಮತ್ತು ಮೊಹಮ್ಮದ್ ಮಸೂದ್ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದಿತ್ತು. ಬಳಿಕ ರಾಜಿಯಲ್ಲಿ ಜಗಳವನ್ನು ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ಸುಧೀರ್ ಮತ್ತು ಆತನ ಸಂಗಡಿಗರು ಮೊಹಮ್ಮದ್ ಮುಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಗಂಭೀರವಾಗಿ ಗಾಯಗೊಂಡ ಮಸೂದ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಸೂದ್(19) ಮೃತಪಟ್ಟಿದ್ಧಾರೆ. ಘಟನೆಗೆ ಸಂಬಂಧಿಸಿದಂತೆ ಸುಧೀರ್ ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮುನ್ನೆಚರಿಕೆ ಕ್ರಮವಾಗಿ ಬೆಳ್ಳಾರೆಯಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ.
Discover more from Coastal Times Kannada
Subscribe to get the latest posts sent to your email.
Discussion about this post