ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರೀತ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಾಯಿ-ಮಗಳು ಸಜೀವದಹನ ಆಗಿದ್ದಾರೆ.
ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು. ಮೂರನೇ ಮಹಡಿಯ 210ನೇ ಫ್ಲ್ಯಾಟ್ನಲ್ಲಿದ್ದ ನಿವಾಸಿಗಳು ಸಾವನ್ನಪ್ಪಿದ್ದಾರೆ.
210 ನೇ ಫ್ಲ್ಯಾಟ್ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನವಾಗಿದ್ದು, ಮೃತದೇಹಗಳು ಪತ್ತೆಯಾಗಿವೆ. ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಐದರಿಂದ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
https://twitter.com/TNSubbaRao1/status/1440309943089840132?s=20
Discussion about this post