• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ತುಳು ಮತ್ತು ಬ್ಯಾರಿ ಭಾಷಾ ತರಬೇತಿ ಶಿಬಿರ’ ನೆಲದ ಭಾಷೆಯಲ್ಲಿ ಬಾಂಧವ್ಯ: ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್

Coastal Times by Coastal Times
September 22, 2021
in ಕರಾವಳಿ
‘ತುಳು ಮತ್ತು ಬ್ಯಾರಿ ಭಾಷಾ ತರಬೇತಿ ಶಿಬಿರ’ ನೆಲದ ಭಾಷೆಯಲ್ಲಿ ಬಾಂಧವ್ಯ: ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್
16
VIEWS
WhatsappTelegramShare on FacebookShare on Twitter

ಮಂಗಳೂರು: ನೆಲದ ಭಾಷೆಯಲ್ಲಿ ಬಾಂಧವ್ಯವೂ ಗಾಢವಾಗಿರುತ್ತದೆ. ನೆಲದ ಭಾಷೆ, ಸಂಸ್ಕೃತಿ, ಮೌಲ್ಯಯುತ ಆಚರಣೆಗಳನ್ನು ಗೌರವಿಸಿದಾಗ ಕರ್ತವ್ಯವೂ ಸುಲಲಿತವಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಹೇಳಿದರು.

ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ‘ತುಳು ಮತ್ತು ಬ್ಯಾರಿ ಭಾಷಾ ತರಬೇತಿ ಶಿಬಿರ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಾವು ಕೆಲಸ ಮಾಡುವ ಪ್ರದೇಶದ ಭಾಷೆ, ಆಚರಣೆ, ಸಂಸ್ಕೃತಿ ಮೊದಲಾದವನ್ನು ಕಲಿತು ಗೌರವಿಸಿದರೆ, ಕೆಲಸ ನಿರ್ವಹಣೆ ಸಮಸ್ಯೆಯಾಗದು. ಜತೆಗೆ ಆತ್ಮವಿಶ್ವಾಸವೂ ವೃದ್ಧಿಯಾಗುತ್ತದೆ ಎಂದರು.

‘ಮಂಗಳೂರು ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಹೊರ ಜಿಲ್ಲೆಯ ಪೊಲೀಸ್‌ ಸಿಬ್ಬಂದಿಗೆ ಒಂದು ತಿಂಗಳ ಕಾಲ ತುಳು ಮತ್ತು ಬ್ಯಾರಿ ಭಾಷೆ ಕಲಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಮೂಲಕ ಜನಸ್ನೇಹಿ ಪೊಲೀಸರನ್ನು ರೂಪಿಸುವ ಪ್ರಯತ್ನ ನಮ್ಮದು’ ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್ ಮಾತನಾಡಿ, ‘ತುಳು ಭಾಷೆಯು ಸುಸಂಸ್ಕೃತರನ್ನಾಗಿಸುವ ಸಾಮರ್ಥ್ಯ ಹೊಂದಿದೆ. ಪೊಲೀಸರಿಗೆ ತುಳು ಮತ್ತು ಬ್ಯಾರಿ ಕಲಿಸುವ ಕಾರ್ಯ ಶ್ಲಾಘನೀಯ’ ಎಂದರು.

ಒಂದು ತಿಂಗಳ ಕಾಲ ನಡೆದ ತುಳು ಮತ್ತು ಬ್ಯಾರಿ ಭಾಷೆ ಕಲಿಕಾ ತರಬೇತಿ ಶಿಬಿರದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಇತರ ಜಿಲ್ಲೆಗಳ 55 ಪೊಲೀಸ್‌ ಸಿಬ್ಬಂದಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಆಸಕ್ತಿಯಿಂದ ಪಾಲ್ಗೊಂಡ ಪೊಲೀಸರ ಬಗ್ಗೆ ಶಿಕ್ಷಕರು ಮೆಚ್ಚುಗೆಯ ಮಾತುಗಳನ್ನಾಡಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ. ದಿನೇಶ್ ಕುಮಾರ್, ಸಿಎಆರ್ ಡಿಸಿಪಿ ಹಡಪದ ಇದ್ದರು.

‘ತಾಸೆದ ಪೆಟ್ಟ್‌ಗೆ ನಲಿಪುನಾ…’ ಎಂಬ ತುಳು ಹಾಡನ್ನು ಖುದ್ದು ಹಾಡುವ ಮೂಲಕ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಗಮನ ಸೆಳೆದರು. ಆಯುಕ್ತರ ಹಾಡಿಗೆ ಪೊಲೀಸರೂ ಸಂಭ್ರಮಿಸಿದರು.

ರಾಜೇಶ್ ಕದ್ರಿ, ಸುಧಾನ ನಾಗೇಶ್ ಅವರು ತುಳು ಭಾಷಾ ಶಿಕ್ಷಕರಾಗಿ, ಶಂಶೀರ್ ಬಂಡೋಳಿ, ರಜಾಕ್ ಅನಂತವಾಡಿ ಮತ್ತು ಅಶ್ರುದ್ದಿನ್ ಸತ್ರಾಬೈಲ್ ಬ್ಯಾರಿ ಭಾಷಾ ಶಿಕ್ಷಕರಾಗಿ ಪಾಲ್ಗೊಂಡಿದ್ದರು. ಸಂಚಾರ ವಿಭಾಗದ ಎಸಿಪಿ ಎಂ.ಎ. ನಟರಾಜ್ ಕಾರ್ಯಕ್ರಮ ನಿರ್ವಹಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌದರಿ ನೇಮಕ

Next Post

ತುಳುಕೂಟ ಉಡುಪಿ : ಎಸ್.ಯು. ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ

Related Posts

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ
ಕರಾವಳಿ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
7
ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು
ಕರಾವಳಿ

ಕಾರ್ಕಳ ಹೆಬ್ರಿ ಸಮೀಪ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

August 8, 2026
28
Next Post
ತುಳುಕೂಟ ಉಡುಪಿ : ಎಸ್.ಯು. ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ

ತುಳುಕೂಟ ಉಡುಪಿ : ಎಸ್.ಯು. ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ

Discussion about this post

Recent News

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
7
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
52
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d