ಮಂಗಳೂರು, ಸೆ.21: ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿಯೊಂದಿಗೆ ಮಾಡು ವುದರಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ. ಆ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ಥ ಉದ್ಯೋಗ ಮಾಹಿತಿ ಶಿಬಿರವನ್ನು ಬುಧವಾರ ನಗರದ ಬೆಂದೂರ್ ವೆಲ್ನಲ್ಲಿರುವ ತೋಟಗಾರಿಕೆ ಇಲಾಖೆಯ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ದ.ಕ. ಜಿಪಂ ಸಿಇಒ ಡಾ.ಕುಮಾರ ಮಾತನಾಡಿ, ಸ್ವ ಉದ್ಯೋಗ ಮಾಡಲು ಆಸಕ್ತಿ ಮುಖ್ಯ. ಜೊತೆಗೆ ಆ ಕ್ಷೇತ್ರದ ಮಾಹಿತಿ ಕೌಶಲ್ಯ, ಸರಕಾರದ ಸಹಾಯವನ್ನು ಪಡೆದು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬಹುದು ಎಂದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್ ನಾಯ್ಕ, ದಕ, ಮನು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಸ್ವಾಗತಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರ.ಕಾರ್ಯದರ್ಶಿ ಜೀತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಯ ಪಾಲಿಸಿಯನ್ನು ರೈತರಿಗೆ ಮತ್ತು ತರಕಾರಿ ಗಿಡಗಳನ್ನು ಪತ್ರಕರ್ತರಿಗೆ ಸಾಂಕೇತಿಕವಾಗಿ ಅತಿಥಿಗಳು ವಿತರಿಸಿದರು. ಸಂಪನ್ಮೂಲ ವ್ಯಕ್ತಿಗಳಿಂದ ಜೇನು, ಅಣಬೆ ಕೃಷಿ, ಹೈನುಗಾರಿಕೆ, ಕೋಳಿ ಸಾಕಣೆ, ಮೀನುಗಾರಿಕೆ ಬಗ್ಗೆ ಮಾಹಿತಿ ಶಿಬಿರ ನಡೆಯಿತು.
Discover more from Coastal Times Kannada
Subscribe to get the latest posts sent to your email.
Discussion about this post