• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಿಯಕರನಿಗಾಗಿ ಪುಟ್ಟ ಬಾಲಕನನ್ನು ಅಪಹರಿಸಿ ಅಂದರ್‌ ಆದ ‘ಕ್ರೈಮ್ ಪೆಟ್ರೋಲ್’ ಕಿರುತರೆ ನಟಿ

Coastal Times by Coastal Times
October 22, 2024
in ಕ್ರೈಮ್ ನ್ಯೂಸ್
ಪ್ರಿಯಕರನಿಗಾಗಿ ಪುಟ್ಟ ಬಾಲಕನನ್ನು ಅಪಹರಿಸಿ ಅಂದರ್‌ ಆದ ‘ಕ್ರೈಮ್ ಪೆಟ್ರೋಲ್’ ಕಿರುತರೆ ನಟಿ
39
VIEWS
WhatsappTelegramShare on FacebookShare on Twitter

ಮಹಾರಾಷ್ಟ್ರ : ಪಾಲ್ಘರ್ ಜಿಲ್ಲೆಯಲ್ಲಿ ಮೂರೂವರೆ ವರ್ಷದ ಬಾಲಕನನ್ನು ಅಪಹರಿಸಿದ ಆರೋಪದ ಮೇಲೆ ಕಿರುತರೆ ನಟಿ ಶಬ್ರೀನ್ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಪ್ರಿಯಕರನಿಗಾಗಿ ಪುಟ್ಟ ಬಾಲಕನನ್ನು ಅಪಹರಿಸಿ ಅಂದರ್‌ ಆದ ನಟಿ ‘ಕ್ರೈಮ್ ಪೆಟ್ರೋಲ್’ ಎಂಬ ಕ್ರೈಮ್‌ ಶೋನಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟಿ ಶಬ್ರೀನ್ ನಿಜ ಜೀವನದಲ್ಲಿ ಅಪರಾಧ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಾಲ್ಘರ್ ಜಿಲ್ಲೆಯ ವಾಲಿವ್‌ನಲ್ಲಿ ತನ್ನ ಪ್ರಿಯಕರನ ಮೂರೂವರೆ ವರ್ಷದ ಸಂಬಂಧಿಯನ್ನು ಅಪಹರಿಸಿ ಅಂದರ್‌ ಆಗಿದ್ದಾರೆ.

ಪ್ರೀತಿಗಾಗಿ ಬಾಲಕನ ಕಿಡ್ನಾಪ್! : ನಟಿ ಶಬ್ರೀನ್ ಬಾಲಕನ ಚಿಕ್ಕಪ್ಪ ಬ್ರಿಜೇಶ್ ಸಿಂಗ್ ಜೊತೆ ಪ್ರೇಮ ಸಂಬಂಧ ಹೊಂದಿದ್ದರು. ಆದರೆ ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯದಿಂದಾಗಿ, ಬ್ರಿಜೇಶ್ ಅವರ ಕುಟುಂಬವು ಶಬ್ರೀನ್‌ ಜೊತೆಗಿನ ಮದುವೆಗೆ ವಿರೋಧ ವ್ಯಕ್ತಪಡಿಸಿತ್ತು. ಅಪಹರಣ ಮಾಡಿ ಕುಟುಂಬವನ್ನು ಬ್ಲ್ಯಾಕ್‌ಮೇಲೆ ಮಾಡಲು ಹೀಗೆ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಬಂಧನವನ್ನು ಖಚಿತಪಡಿಸಿದ ಹಿರಿಯ ಅಧಿಕಾರಿ ಜಯರಾಜ್ ರಣವಾನೆ, ಶಬ್ರೀನ್ ಅವರು ಬ್ರಿಜೇಶ್‌ನೊಂದಿಗೆ ಪ್ರೀತಿಯಲ್ಲಿದ್ದರು ಶಬ್ರೀನ್ ಮತ್ತು ಬ್ರಿಜೇಶ್ ಹಲವಾರು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದಿದ್ದಾರೆ.

ಆದರೆ ಜಾತಿ ಮತ್ತು ಧರ್ಮದ ಭಿನ್ನಾಭಿಪ್ರಾಯಗಳಿಂದಾಗಿ ಬ್ರಿಜೇಶ್ ಅವರ ಕುಟುಂಬವು ಅವರ ಪ್ರೀತಿಯನ್ನು ಒಪ್ಪಲಿಲ್ಲ ಮಾತ್ರವಲ್ಲ ಮದುವೆಗೂ ನಿರಾಕರಿಸಿತ್ತು. ಶಬ್ರೀನ್‌ ಎಷ್ಟೇ ಪ್ರಯತ್ನಿಸಿದ್ರೂ ಕುಟುಂಬ ಈಕೆಯನ್ನು ವಿರೋಧಿಸುತ್ತಲೇ ಇತ್ತು. ಕೊನೆಗೆ ಕಠಿಣ ಕ್ರಮಗಳ ಭಾಗವಾಗಿ ನಟಿ ಶಬ್ರೀನ್‌ ಕಿಡ್ನ್ಯಾಪ್‌ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಾಲಕ ಪ್ರಿನ್ಸ್‌ ಅನ್ನು ಶಬ್ರೀನ್‌ ಅಪಹರಿಸಿದ್ದೇಗೆ? : ಘಟನೆ ನಡೆದ ದಿನದಂದು ಶಬ್ರೀನ್ ಬೆಳಗ್ಗೆ 11 ಗಂಟೆ ಸುಮಾರಿಗೆ ಬ್ರಿಜೇಶ್ ಅವರ ಸಂಬಂಧಿ ಪ್ರಿನ್ಸ್‌ನ ಶಾಲೆಗೆ ಬಂದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದಾಳೆ. ಮಗು ಕೂಡ ಅವಳನ್ನು ಗುರುತಿಸಿದ್ದು, ಅವಳೊಟ್ಟಿಗೆ ಹೋಗಿದೆ ಎಂದು ಮಹಾರಾಷ್ಟ್ರದ ವಾಲೀವ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನದ ವೇಳೆಗೆ ಪ್ರಿನ್ಸ್ ಮನೆಗೆ ಹಿಂತಿರುಗದಿದ್ದಾಗ, ಅವನ ಕುಟುಂಬವು ಆತಂಕದಲ್ಲಿ ಶಾಲೆಯಲ್ಲಿ ವಿಚಾರಿಸಿದೆ ಮತ್ತು ಅವನು ತನ್ನನ್ನು ವೈದ್ಯರ ಬಳಿಗೆ ಕರೆದೊಯ್ಯುತ್ತಿರುವುದಾಗಿ ಹೇಳಿಕೊಂಡು ಮಹಿಳೆಯೊಬ್ಬರು ಬಂದಿದ್ದರು, ಮಗು ಕೂಡ ಅವರನ್ನು ಗುರುತಿಸಿ ಅವರ ಜೊತೆ ಹೋಯಿತು ಎಂದು ಶಿಕ್ಷಕರು ತಿಳಿಸಿದ್ದಾರೆ. ತಕ್ಷಣ ಕುಟುಂಬದವರು ವಾಲೀವ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿತು. ತಕ್ಷಣ ಕ್ರಮ ತೆಗೆದುಕೊಂಡು ವಾಲೀವ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಶಬ್ರೀನ್ ಮಗುವನ್ನು ಆಟೋ ರಿಕ್ಷಾದಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಕರೆದುಕೊಂಡು ಹೋಗುತ್ತಿರುವುದು ಕಂಡು ಕೊಂಡರು.

ಆಟೋ ಚಾಲಕನನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಶಬ್ರೀನ್‌ನನ್ನು ನೈಗಾಂವ್‌ನಲ್ಲಿ ಡ್ರಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆಕೆಯ ಮೊಬೈಲ್ ಫೋನ್ ಸ್ಥಳವನ್ನು ಪತ್ತೆಹಚ್ಚಿ ಬಾಂದ್ರಾದಲ್ಲಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಪ್ರಿನ್ಸ್‌ನನ್ನು ಆಕೆ ನೈಗಾಂವ್‌ನ ಫ್ಲಾಟ್‌ನಲ್ಲಿ ಇರಿಸಿದ್ದಾಗಿ ಹೇಳಿಕೊಂಡಿದ್ದಾಳೆ. ಪುಟ್ಟ ಬಾಲಕನನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಮಗು ಕ್ಷೇಮವಾಗಿದೆ. ಶಬ್ರೀನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬ್ರಿಜೇಶ್ ಭಾಗಿಯಾಗಿರುವ ಬಗ್ಗೆ ತನಿಖೆಗಳು ನಡೆಯುತ್ತಿದ್ದು, ನಟಿ ಶಬ್ರೀನ್‌ ಜೊತೆ ಆಟೋದಲ್ಲಿ ತೆರಳಿದ ಇನ್ನೋರ್ವ ಅಪರಿಚಿತ ಮಹಿಳಾ ಸಹಚರಿಗಾಗಿ ಹುಡುಕಾಟ ನಡೆಯುತ್ತಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಯಕ್ಷಗಾನ ರಂಗದ ಹಿರಿಯ ಕಲಾವಿದ ‘ಹಾಸ್ಯರಾಜ’ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Next Post

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
53
Next Post
ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d