• About us
  • Contact us
  • Disclaimer
Friday, July 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವಕ್ಫ್ ಸಂತ್ರಸ್ತರಿಗೆ ಸಹಾಯವಾಣಿ, ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಅನ್ವರ್‌ ಮಾಣಿಪ್ಪಾಡಿ ಆಗ್ರಹ

Coastal Times by Coastal Times
November 22, 2024
in ಕರಾವಳಿ
ಮಂಗಳೂರು: ವಕ್ಫ್ ಸಂತ್ರಸ್ತರಿಗೆ ಸಹಾಯವಾಣಿ, ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಅನ್ವರ್‌ ಮಾಣಿಪ್ಪಾಡಿ ಆಗ್ರಹ
75
VIEWS
WhatsappTelegramShare on FacebookShare on Twitter

ಮಂಗಳೂರು: ರಾಜ್ಯದಲ್ಲಿ ಒತ್ತುವರಿಯಾಗಿರುವ ವಕ್ಫ್ ಭೂಮಿಯನ್ನು ತೆರವು ಮಾಡಬೇಕು. ಈ ಬಗ್ಗೆ ಸಲ್ಲಿಸಲಾಗಿರುವ ವರದಿ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಮತ್ತು ರಾಜ್ಯ ಅಲ್ಪಸಂಖ್ಯಾಕ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ  ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

29,000 ಎಕ್ರೆ ವಕ್ಫ್ ಭೂಮಿ ಒತ್ತುವರಿಯಾಗಿದೆ. ಅದನ್ನು ಮತ್ತೆ ವಕ್ಫ್ ಸುಪರ್ದಿಗೆ ಒಪ್ಪಿಸಬೇಕು. ಒತ್ತುವರಿ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ರೈತರು ಒತ್ತುವರಿ ಮಾಡಿಲ್ಲ. ರಾಜಕಾರಣಿಗಳು, ಇತರರು ಒತ್ತುವರಿ ಮಾಡಿದ್ದಾರೆ. ವಕ್ಫ್ ಆಸ್ತಿ ಒತ್ತುವರಿ ಕುರಿತು ನಾನು ಸಲ್ಲಿಸಿದ ವರದಿಯನ್ನು ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ಹಾಗೂ ಲೋಕಾಯುಕ್ತ ನ್ಯಾಯಾಲಯ ಒಪ್ಪಿಕೊಂಡಿದೆ. ಹಾಗಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಿಂದಿನ ಗೆಜೆಟ್‌ ನೋಟಿಫಿಕೇಷನ್‌ಗಳನ್ನು ಪರಿಶೀಲಿಸಿದರೆ ಸಮರ್ಪಕವಾದ ಮಾಹಿತಿ ದೊರೆಯಲಿದೆ ಎಂದು ಮಾಣಿಪ್ಪಾಡಿ ಹೇಳಿದರು. ಪ್ರಮೋದ್‌ ಮುತಾಲಿಕ್‌ ಮಾತನಾಡಿ, ಅನ್ವರ್‌ ಮಾಣಿಪ್ಪಾಡಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು. ಒತ್ತುವರಿ ಮಾಡಿರುವವರನ್ನು ಶಿಕ್ಷಿಸಬೇಕು ಎಂದು ಹೇಳಿದರು.

ರಾಜ್ಯವ್ಯಾಪಿ ಜಾಗೃತಿ: 2013ರಲ್ಲಿ ಪ್ರಧಾನಿ ಮನಮೋಹನ್‌ ಸಿಂಗ್‌ ಸರಕಾರ ವಕ್ಫ್ ಬೋರ್ಡ್‌ಗೆ ಪರಮಾಧಿಕಾರ ನೀಡಿತು. ಅಲ್ಲಿಂದ ಇದುವರೆಗೆ 9.40 ಲಕ್ಷ ಎಕ್ರೆ ವಕ್ಫ್ ಆಸ್ತಿ ಒತ್ತುವರಿಯಾಗಿದೆ. ನರೇಂದ್ರ ಮೋದಿ ವಕ್ಫ್ ಕಾಯ್ದೆಗೆ 44 ತಿದ್ದುಪಡಿ ತರಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗು ತ್ತಿದೆ. ಇದರ ವಿರುದ್ಧ ಶ್ರೀರಾಮಸೇನೆ ರಾಜ್ಯ ವ್ಯಾಪಿ ತಿಳಿವಳಿಕೆ ಮೂಡಿಸುತ್ತಿದೆ ಎಂದರು.

ವಕ್ಫ್ ಸಂತ್ರಸ್ತರಿಗೆ ಸಹಾಯವಾಣಿ : ವಕ್ಫ್ ಬೋರ್ಡ್‌ನಿಂದ ಭೂಮಿ ಅತಿಕ್ರಮಣ ಸಂತ್ರಸ್ತರ ನೆರವಿಗಾಗಿ 24 x 7 ಕಾರ್ಯಾಚರಿಸುವ ಸಹಾಯವಾಣಿಯನ್ನು (9945288819) ಅನ್ವರ್‌ ಮತ್ತು ಮುತಾಲಿಕ್‌ ಬಿಡುಗಡೆ ಮಾಡಿದರು. ಈ ಸಹಾಯವಾಣಿಯ ಮೂಲಕ ಕಾನೂನು ಸಹಿತ ಅಗತ್ಯ ನೆರವು ನೀಡಲಾಗುವುದು ಎಂದು ಮುತಾಲಿಕ್‌ ತಿಳಿಸಿದರು.
ಶ್ರೀರಾಮಸೇನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆನಂದ್‌ ಅಡ್ಯಾರ್‌, ವಿಭಾಗ ಅಧ್ಯಕ್ಷ ಮಧುಸೂದನ, ಜಿಲ್ಲಾಧ್ಯಕ್ಷ ಅರುಣ್‌ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಭಾರೀ ಬಹುಮಾನದ ಬೇನಾಮಿ ಸ್ಕೀಮ್‌, ಡ್ರೀಮ್ ಡೀಲ್ ಹೆಸರಲ್ಲಿ ಅದೃಷ್ಟ ಚೀಟಿ ಅಸಲಿತನ ಬಯಲು, ಆತಂಕಕ್ಕೊಳಗಾದ ಗ್ರಾಹಕರು.

Next Post

ಉಳ್ಳಾಲ: ಮಾನಸಿಕವಾಗಿ ಹಿಂಸಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಮಾವನ ಮುಂದೆಯೇ ಪತ್ನಿಗೆ ತ್ರಿಪಲ್ ತಲಾಖ್ – ಪತಿ ಅರೆಸ್ಟ್

Related Posts

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ
ಕರಾವಳಿ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ! ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

July 13, 2026
31
“Mangalore IAS – A School for Civil Services” ಸಂಸ್ಥೆ ಉದ್ಘಾಟನೆ
ಕರಾವಳಿ

“Mangalore IAS – A School for Civil Services” ಸಂಸ್ಥೆ ಉದ್ಘಾಟನೆ

July 12, 2026
47
Next Post
ಉಳ್ಳಾಲ: ಮಾನಸಿಕವಾಗಿ ಹಿಂಸಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಮಾವನ ಮುಂದೆಯೇ ಪತ್ನಿಗೆ ತ್ರಿಪಲ್ ತಲಾಖ್ – ಪತಿ ಅರೆಸ್ಟ್

ಉಳ್ಳಾಲ: ಮಾನಸಿಕವಾಗಿ ಹಿಂಸಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಮಾವನ ಮುಂದೆಯೇ ಪತ್ನಿಗೆ ತ್ರಿಪಲ್ ತಲಾಖ್ - ಪತಿ ಅರೆಸ್ಟ್

Discussion about this post

Recent News

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
27
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

FIFA World Cup 2026: ಕೊನೆಯ ಕ್ಷಣದಲ್ಲಿ ಅರ್ಜೆಂಟೀನಾ ಎರಡು ಮ್ಯಾಜಿಕ್‌ ಗೋಲು : ಫೈನಲ್‌ ಪ್ರವೇಶಿಸಿ ಮೆಸ್ಸಿ ಪಡೆ

July 16, 2026
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d