• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡಾ. ಎಂಎನ್‌ಆರ್‌ ಪ್ರೊಡಕ್ಷನ್‌ ಸಂಸ್ಥೆ ಕನ್ನಡ ಸಿನಿಮಾ ‘ವಾದಿರಾಜ ವಾಲಗ ಮಂಡಳಿ’ ಮುಹೂರ್ತ

Coastal Times by Coastal Times
November 22, 2025
in ಕರಾವಳಿ
ಡಾ. ಎಂಎನ್‌ಆರ್‌ ಪ್ರೊಡಕ್ಷನ್‌ ಸಂಸ್ಥೆ ಕನ್ನಡ ಸಿನಿಮಾ ‘ವಾದಿರಾಜ ವಾಲಗ ಮಂಡಳಿ’ ಮುಹೂರ್ತ
38
VIEWS
WhatsappTelegramShare on FacebookShare on Twitter

ಮಂಗಳೂರು: ಎಂ.ಎನ್‌.ಆರ್‌. ಪ್ರೊಡಕ್ಷನ್‌ ಸಂಸ್ಥೆಯಡಿ ನಿರ್ಮಾಣಗೊಳ್ಳಲಿರುವ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಶುಕ್ರವಾರ ಉರ್ವ ಮಾರಿಯಮ್ಮನ ಸಾನಿಧ್ಯದಲ್ಲಿ ಚಿತ್ರದ ನಿರ್ಮಾಪಕ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಕ್ಯಾಮರಾಗೆ ಚಾಲನೆ ನೀಡುವ ಮೂಲಕ ಶೂಟಿಂಗ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌, ಕನ್ನಡ ಕಲಾವಿದರಿಗೆ ವಿಶೇಷ ಗೌರವ, ಅವಕಾಶವನ್ನು ನೀಡುವ ಉದ್ದೇಶದಿಂದ ಈ ಸಿನಿಮಾ ಮಾಡುತ್ತಿದ್ದೇವೆ. ಇದು ಸಂಪೂರ್ಣವಾಗಿ ಹಾಸ್ಯಪ್ರಧಾನದ ಜತೆಗೆ ಕುಟುಂಬ ಸಮೇತರು ಬಂದು ನೋಡುವ ಸಿನಿಮಾವಾಗಿದೆ. ಮನುಷ್ಯನ ದೈನಂದಿನ ಜೀವನದಲ್ಲಿ ಚಿಂತೆ, ಸಮಸ್ಯೆಗಳು ಇರುವಾಗ ಈ ಚಿತ್ರದಲ್ಲಿರುವ ಹಾಸ್ಯದ ಮೂಲಕ ಮನಸ್ಸಿಗೆ ನೆಮ್ಮದಿ ನೀಡುವ ಜತೆಗೆ ಅವನ ಜೀವನಕ್ಕೆ ಒಳ್ಳೆಯ ಹಾದಿ ಸೃಷ್ಟಿಯ ಅವಕಾಶ ಸಿಗುತ್ತದೆ ಎನ್ನುವ ಭರವಸೆಯಿದೆ ಎಂದರು.ಸಿನಿಮಾದ ನಿರ್ದೇಶಕ ಶಶಿರಾಜ್‌ ಕಾವೂರು ಮಾತನಾಡಿ, ಕನ್ನಡ ಸಿನಿಮಾಕ್ಕೆ ಒಳ್ಳೆಯ ಕೊಡುಗೆ ಕೊಡಬೇಕು ಎನ್ನುವ ಉದ್ದೇಶದಿಂದ ಹಲವು ಸಿನಿಮಾಗಳಲ್ಲಿ ಹಾಡುಗಳು ಬರೆದ ಅನುಭವವಿತ್ತು. ಅದರ ಜತೆಗೆ ಹಲವು ತುಳು ಸಿನಿಮಾಗಳಿಗೆ ಚಿತ್ರಕತೆ, ಸಂಭಾಷಣೆ, ಸಹ ನಿರ್ದೇಶನದ ಅನುಭವದ ಹಿನ್ನೆಲೆಯಲ್ಲಿ ಕನ್ನಡದಲ್ಲಿ ನನ್ನ ಮೊದಲ ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಿದ್ದೇನೆ. ಕನ್ನಡ ಚಿತ್ರರಂಗದ ಎಲ್ಲ ಪ್ರೇಕ್ಷಕರು ಈ ಚಿತ್ರವನ್ನು ಇಷ್ಟಪಡುತ್ತಾರೆ ಎನ್ನುವ ನಂಬಿಕೆಯಿದೆ. ವಾದಿರಾಜ ವಾಲಗ ಮಂಡಳಿ ಸಿನಿಮಾದ ಕತೆಯನ್ನು 8 ವರ್ಷಗಳ ಹಿಂದೆಯೇ ಮಾಡಿದ್ದು, ಈಗ ಇದು ತೆರೆಗೆ ಬರುವ ಯೋಗ ಬಂದಿದೆ. ಎಂಎನ್‌ಆರ್‌ ಪ್ರಾಡಕ್ಷನ್‌ನಲ್ಲಿ ಈ ಸಿನಿಮಾ ಬರುತ್ತಿದೆ ಎಂದರು.

ಹಾಸ್ಯದ ಜತೆಗೆ ಸಂದೇಶ ಪ್ರಧಾನ ಸಿನಿಮಾ: ಈ ಸಿನಿಮಾ ಉತ್ತಮ ಕಥಾ ಹಂದರದಿಂದ ಸಂಪೂರ್ಣ ಹಾಸ್ಯ ಪ್ರಧಾನವಾಗಿದ್ದು, ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೂಡಾ ನೀಡುತ್ತದೆ. ಸಿನಿಮಾದಲ್ಲಿ ನವೀನ್‌ ಡಿ ಪಡೀಲ್‌, ಲಕ್ಷ್ಮಣ ಕುಮಾರ್‌ ಮಲ್ಲೂರು, ಪ್ರಕಾಶ ತೂಮಿನಾಡು. ದೀಪಕ್‌ ರೈ ಪಾಣಾಜೆ, ಪುಷ್ಪರಾಜ್‌ ಬೊಳ್ಳೂರ್‌, ಮೈಮ್‌ ರಾಮದಾಸ್‌, ಶೋಭರಾಜ್‌ ಪಾವೂರು, ತನ್ವಿ ರಾವ್‌, ವೇನ್ಯ ರೈ, ಚೈತ್ರಾ ಶೆಟ್ಟಿ, ಕೀರ್ತನಾ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.ಹಲವು ಕನ್ನಡ, ತಮಿಳು ಹಿಟ್‌ ಸಿನಿಮಾಗಳ ಛಾಯಾಚಿತ್ರಗಾರ ಎಸ್‌. ಚಂದ್ರಶೇಖರನ್‌, ಕ್ಯಾಮೆರಾದ ಹಿಂದೆ ತಮ್ಮ ಕೈಚಳಕ ತೋರಿಸಲಿದ್ದಾರೆ. ಚಿತ್ರಕ್ಕೆ ಸಂಗೀತ ಮಣಿಕಾಂತ ಕದ್ರಿಯವರದ್ದಾಗಿದೆ. ಸಹ ನಿರ್ಮಾಪಕರಾಗಿ ಜಯಪ್ರಕಾಶ ತುಂಬೆ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ನಟ ಸಂತೋಷ್‌ ಶೆಟ್ಟಿಸಹಕರಿಸಲಿದ್ದಾರೆ. ಚಿತ್ರದಲ್ಲಿ ಬರುವ ‘ಮೆಹಂದಿ’ ದೃಶ್ಯದಲ್ಲಿ ನವೋದಯ ಸ್ವಸಹಾಯ ಸಂಘದ ಸದಸ್ಯರು ನಟನೆ ಮಾಡಲಿದ್ದಾರೆ.ಸಿನಿಮಾಕ್ಕೆ ಒಂದೇ ಹಂತದಲ್ಲಿ 40 ದಿನಗಳ ಕಾಲ ಕಾಸರಗೋಡು, ಮಂಗಳೂರು, ಉಡುಪಿ, ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ಮುಹೂರ್ತ ಸಂದರ್ಭ ಡಾ.ಎಂ.ಎನ್‌.ಆರ್‌ ಅವರ ಧರ್ಮಪತ್ನಿ ಅರುಣಾ ರಾಜೇಂದ್ರಕುಮಾರ್‌, ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜರಾಮ ಭಟ್‌ , ದೇವಿಪ್ರಸಾದ್‌ ಶೆಟ್ಟಿ ಬೆಳಪು , ಶಶಿಕುಮಾರ್‌ ರೈ ಬಾಲ್ಯೋಟ್ಟು , ಎಸ್‌.ಬಿ.ಜಯರಾಮ ರೈ , ಜೈರಾಜ್‌ ಬಿ. ರೈ , ಅಶೋಕ್‌ ಕುಮಾರ್‌ ಶೆಟ್ಟಿ, ಸದಾಶಿವ ಉಳ್ಳಾಲ, ರಾಜೇಶ್‌ ರಾವ್‌ , ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್‌ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟಿ ಸುನಿಲ್‌ ಕುಮಾರ್‌ ಬಜಗೋಳಿ, ಉದ್ಯಮಿ ಪುಷ್ಪರಾಜ್‌ ಜೈನ್‌ , ಸಿರಾಜ್‌ ಅಹಮ್ಮದ್‌ , ಜಯಪ್ರಕಾಶ್‌ ತುಂಬೆ, ಪ್ರಕಾಶ್‌ ಪಾಂಡೇಶ್ವರ್‌, ಸಂಗೀತ ನಿರ್ದೇಶಕ ಮಣಿಕಾಂತ್‌ ಕದ್ರಿ , ನಟ ನವೀನ್‌ ಡಿ. ಪಡೀಲ್‌, ಛಾಯಾಚಿತ್ರಗಾರ ಎಸ್‌. ಚಂದ್ರಶೇಖರನ್‌, ಸಂತೋಷ್‌ ಶೆಟ್ಟಿ, ಲಕ್ಷ್ಮಣಕುಮಾರ್‌ ಮಲ್ಲೂರು, ಅಥರ್ವ ಪ್ರಕಾಶ್‌, ಚೇತನ್‌ ರೈ ಮಾಣಿ, ರಂಜನ್‌ ಬೋಳೂರು, ಪುಷ್ಪರಾಜ್‌ ಬೊಳ್ಳಾರ್‌, ಪ್ರಕಾಶ ತೂಮಿನಾಡ್‌ ಮತ್ತಿತರರು ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

Next Post

ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

Discussion about this post

Recent News

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
39
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d