ಮಂಗಳೂರು, ಡಿ.22 : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.
ದ.ಕ. ಜಿಲ್ಲಾಡಳಿತರ ಮಾರ್ಗಸೂಚಿಯಲ್ಲಿ ಏನಿದೆ:
* ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ * ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ * ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ * ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, * ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ * ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ * ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು * ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು * ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು * 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು * ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ * ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ * ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ * ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ