ಮಂಗಳೂರು, ಫೆ.23: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯೊಬ್ಬರನ್ನು ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿನ ನಿವಾಸಿ ಲೀಲಾವತಿ ಮಗುವಿಗೆ ಜನ್ಮ ನೀಡಿದ್ದು ಆರೋಗ್ಯವಾಗಿದ್ದಾರೆ.
ಲೀಲಾವತಿ ಅವರನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಅನಾರೋಗ್ಯ ಇರುವುದರಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ.
ಅದರಂತೆ ಇಬ್ಬರು ನರ್ಸ್ ಗಳ ಜೊತೆಗೆ ಆಸ್ಪತ್ರೆಯ ತುರ್ತು ವಾಹನದಲ್ಲಿ ಮಂಗಳೂರಿಗೆ ಕಳುಹಿಸಲಾಗಿತ್ತು. ಆಂಬುಲೆನ್ಸ್ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಲೀಲಾವತಿಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಜೊತೆಗಿದ್ದ ನರ್ಸ್ ಗಳಾದ ಕುಮುದಾ ಹಾಗೂ ಸೌಮ್ಯಾ ಎಸ್. ಅವರು ಆಂಬುಲೆನ್ಸ್ ವಾಹನದಲ್ಲೇ ಲೀಲಾವತಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.
Discover more from Coastal Times Kannada
Subscribe to get the latest posts sent to your email.








Discussion about this post