• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ; ಡಿವೈಡರ್ ಏರಿದ ಕಾರು ! ತೊಕ್ಕೊಟ್ಟಿನ‌ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಬಲಿ

Coastal Times by Coastal Times
March 23, 2024
in ಕರಾವಳಿ
ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ; ಡಿವೈಡರ್ ಏರಿದ ಕಾರು ! ತೊಕ್ಕೊಟ್ಟಿನ‌ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಬಲಿ
192
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ವಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ.

ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಸಾವನ್ನಪ್ಪಿರುವ ಯುವಕ. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಲಿತಾ ಸುಂದರ್ ಅವರು ಬಿಜೆಪಿಯ ಹಿರಿಯ ನಾಯಕಿಯಾಗಿದ್ದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಆಶೀರ್ವಾದ್ ಕಾಂಪ್ಲೆಕ್ಸ್ ಹೆಸರಿನ ಬೃಹತ್ ವಾಣಿಜ್ಯ ಕಟ್ಟಡ ಮತ್ತು ಹೊಟೇಲ್ ಹೊಂದಿದ್ದಾರೆ. ಲಲಿತಾ ಅವರ ಏಕೈಕ ಮಗ ಸಂತೋಷ್ ಯಾನೆ ಸಂತು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದ. ಶಮಿತ್  ಮದುವೆ ಮಾಡಲು ವಧುವಿನ ಅನ್ವೇಷಣೆಯನ್ನೂ ಪೋಷಕರು ನಡೆಸುತ್ತಿದ್ದರು. ಲಲಿತಾ ಸುಂದರ್ ಅವರು ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ನ ಕೊರಗಜ್ಜ ಸೇವಾ ಸಮಿತಿಯ ಗೌರವಾಧ್ಯಕ್ಷೆ ಆಗಿದ್ದು ಕುಟುಂಬವು ಕಳೆದ ಎರಡು ವರುಷದ ಹಿಂದೆ ಕೊರಗಜ್ಜನಿಗೆ ಬೆಳ್ಳಿಯ ಮುಟ್ಟಾಲೆ, ದಂಟೆಯನ್ನ ಹರಕೆ ರೂಪದಲ್ಲಿ ಸಮರ್ಪಿಸಿತ್ತು. ಶಮಿತ್ ಅವರ ಅಕಾಲಿಕ ಅಗಲಿಕೆಗೆ ಬಿಜೆಪಿ ಜಿಲ್ಲಾ ಮತ್ತು ಮಂಗಳೂರು ಮಂಡಲದ ನಾಯಕರು ಶೋಕ ವ್ಯಕ್ತ ಪಡಿಸಿದ್ದಾರೆ. ಮೃತ ಶಮಿತ್ ತಾಯಿ, ಸಹೋದರಿ, ಅಜ್ಜಿಯನ್ನು ಅಗಲಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ 5 ನೇ ಅಂತರರಾಷ್ಟ್ರೀಯ ಸಮ್ಮೇಳನ

Next Post

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು

Related Posts

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು
ಕರಾವಳಿ

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
47
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು
ಕರಾವಳಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

July 11, 2025
145
Next Post
ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
26
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d