ಬೆಂಗಳೂರು, ಮೇ 22: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಇಂದು (ಮೇ 22) ಮಾರ್ಗಸೂಚಿ ಪ್ರಕಟಿಸಿದ್ದು, ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ ಕಂಡುಬಂದ್ರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ವರದಿಮಾಡಿಕೊಳ್ಳಲು ಸೂಚಚಿಸಲಾಗಿದೆ.
ಎಬೋಲಾ ಲಕ್ಷಣಗಳು ಮತ್ತು ಹರಡುವಿಕೆ:
- ಎಬೋಲಾ ಒಂದು ಗಂಭೀರ ವೈರಲ್ ಸೋಂಕಾಗಿದ್ದು, ಇದರ ಲಕ್ಷಣಗಳು ಈ ಕೆಳಗಿನಂತಿರುತ್ತವೆ:
- ತೀವ್ರ ಜ್ವರ ಮತ್ತು ತಲೆನೋವು.
- ಸ್ನಾಯು ನೋವು ಮತ್ತು ಗಂಟಲು ನೋವು.
- ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು.
- ದದ್ದುಗಳು ಹಾಗೂ ಕಣ್ಣು ಕೆಂಪಾಗುವುದು.
ಸೋಂಕಿತ ವ್ಯಕ್ತಿಯ ರಕ್ತ, ಅಂಗಾಂಗಗಳು ಅಥವಾ ದೇಹದ ದ್ರವಗಳೊಂದಿಗೆ ನೇರ ಸಂಪರ್ಕ ಹೊಂದುವುದರಿಂದ ಅಥವಾ ಕಲುಷಿತಗೊಂಡ ಬಟ್ಟೆ, ಹಾಸಿಗೆ ಮತ್ತು ಸಿರಿಂಜ್ಗಳ ಮೂಲಕ ಈ ರೋಗ ಹರಡುತ್ತದೆ. ಆರೋಗ್ಯ ಸಿಬ್ಬಂದಿ ಮತ್ತು ರೋಗಿಯ ಕುಟುಂಬಸ್ಥರಿಗೆ ಸೋಂಕಿನ ಅಪಾಯ ಹೆಚ್ಚಿರುತ್ತದೆ.

ಸರ್ಕಾರದ ಸಿದ್ಧತೆ ಮತ್ತು ಆಸ್ಪತ್ರೆಗಳ ವಿವರ: ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರವು ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ:
- ಬೆಂಗಳೂರು: ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD)ಯನ್ನು ಐಸೋಲೇಷನ್ ಕೇಂದ್ರವಾಗಿ ಮತ್ತು ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ನಿಗದಿಪಡಿಸಲಾಗಿದೆ.
- ಮಂಗಳೂರು: ಶ್ರೀನಿವಾಸ್ ಪೋರ್ಟ್ ಆಸ್ಪತ್ರೆ (NMPA) ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ.
- ಪರಿಶೀಲನೆ: ಶಂಕಾಸ್ಪದ ಪ್ರಕರಣಗಳ ಮಾದರಿಗಳನ್ನು ಬೆಂಗಳೂರಿನ ಎನ್.ಐ.ವಿ (NIV) ಮೂಲಕ ಪುಣೆಯ ಮುಖ್ಯ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗುತ್ತದೆ.
ಪ್ರಯಾಣಿಕರಿಗೆ ಸೂಚನೆ: ಎಬೋಲಾ ಪೀಡಿತ ದೇಶಗಳಿಂದ (DRC ಮತ್ತು ಉಗಾಂಡಾ) ಭಾರತಕ್ಕೆ ಮರಳಿದ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಇರಬೇಕು. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಬೇಕು. ತ್ವರಿತ ಪ್ರತಿಕ್ರಿಯೆ ತಂಡಗಳನ್ನು (RRT) ಈಗಾಗಲೇ ಸಜ್ಜುಗೊಳಿಸಲಾಗಿದೆ.
ಸಾರ್ವಜನಿಕರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಮತ್ತು ಕೇವಲ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
Discover more from Coastal Times Kannada
Subscribe to get the latest posts sent to your email.







Discussion about this post