• About us
  • Contact us
  • Disclaimer
Friday, March 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್, ಎನ್‌ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ಯನ್ನು ಉದ್ಧವ್ ಠಾಕ್ರೆ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ

Coastal Times by Coastal Times
June 23, 2022
in ರಾಷ್ಟ್ರೀಯ ಸುದ್ದಿ
ಕಾಂಗ್ರೆಸ್, ಎನ್‌ಸಿಪಿ ಜೊತೆಗಿನ ‘ಅಸಹಜ ಮೈತ್ರಿ’ಯನ್ನು ಉದ್ಧವ್ ಠಾಕ್ರೆ ಕಡಿದುಕೊಳ್ಳಬೇಕು: ಏಕನಾಥ್ ಶಿಂಧೆ
38
VIEWS
WhatsappTelegramShare on FacebookShare on Twitter

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿಯಾಗಿದ್ದು, ಕೂಡಲೇ ಉದ್ಧವ್ ಠಾಕ್ರೆ ಅದನ್ನು ಕಡಿದುಕೊಳ್ಳಬೇಕು ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಶಿವಸೇನೆ ಕೂಡಲೇ ಮಹಾ ವಿಕಾಸ್ ಅಘಾಡಿಯ ಅಸಹಜ ಮೈತ್ರಿಯನ್ನು ತೊಡೆದುಕೊಳ್ಳಬೇಕು. ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗಿನ ಒಕ್ಕೂಟದಿಂದ ಹೊರನಡೆಯುವುದು ನಮ್ಮ ಪಕ್ಷ ಮತ್ತು ಕಾರ್ಯಕರ್ತರಿಗೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ನವೆಂಬರ್ 2019ರಲ್ಲಿ ಮಹಾ ವಿಕಾಸ್ ಅಘಾಡಿ ರಚನೆಯಾದಾಗಿನಿಂದ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿಗೆ ಮಾತ್ರ ಅನುಕೂಲವಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಸಾಮಾನ್ಯ ಶಿವಸೈನಿಕರು ತೊಂದರೆಗೆ ಈಡಾಗಿದ್ದಾರೆ. ಶಿವಸೈನಿಕರು ಮತ್ತು ಶಿವಸೇನೆಯ ಹಿತದೃಷ್ಟಿಯಿಂದ ಅಸಹಜ ಮೈತ್ರಿ ಕಡಿದುಕೊಳ್ಳುವುದು ಅವಶ್ಯವಾಗಿದೆ. ರಾಜ್ಯದ ಹಿತದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಬಂಡಾಯ ಶಾಸಕರ ಜೊತೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿಂಧೆ ಟ್ವೀಟ್ ಮಾಡಿದ್ದಾರೆ.

#Hindutvaforever ಎಂಬ ಹ್ಯಾಷ್ ಟ್ಯಾಗ್ ಬಳಸಿ ಮರಾಠಿಯಲ್ಲಿ ಶಿಂಧೆ ಟ್ವೀಟ್ ಮಾಡಿದ್ದು, ಎಂವಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಬಲವಾಗುತ್ತಿದ್ದರೆ, ಶಿವಸೇನೆ ದುರ್ಬಲವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಬಂಡಾಯ ಬಣದ ಒಬ್ಬ ಶಿವಸೇನೆ ಶಾಸಕ ಬಂದು ತಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಸಮರ್ಥನೆಂದು ಹೇಳಿದರೆ ಸಿಎಂ ಸ್ಥಾನ ತ್ಯಜಿಸುವುದಾಗಿ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ ಬೆನ್ನಲ್ಲೇ ಶಿಂಧೆ ಈ ಹೇಳಿಕೆ ನೀಡಿದ್ದಾರೆ.

३. पक्ष आणि शिवसैनिक टिकविण्यासाठी अनैसर्गिक आघाडीतून बाहेर पडणे अत्यावश्यक.

४. महाराष्ट्रहितासाठी आता निर्णय घेणे गरजेचे.#HindutvaForever

— Eknath Shinde – एकनाथ शिंदे (@mieknathshinde) June 22, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳಗಾವಿ: ಕೋಮಾದಲ್ಲಿರುವ ಮಗನ ಪ್ರಾಣ ಉಳಿಸಲು ದೇವರ ಮೊರೆ ಹೋದ ತಾಯಿ

Next Post

ಶಾಸಕ ಹರೀಶ್​ ಪೂಂಜಾರಿಗೆ ಕೊರಿಯರ್​ನಲ್ಲಿ ಬಂತು ಮುಸ್ಲಿಂರ ಬಿಳಿ ಟೋಪಿ , ಹಸಿರು ಶಾಲು.. ಕಾರಣ?

Related Posts

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
56
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
13
Next Post
ಶಾಸಕ ಹರೀಶ್​ ಪೂಂಜಾರಿಗೆ ಕೊರಿಯರ್​ನಲ್ಲಿ ಬಂತು ಮುಸ್ಲಿಂರ ಬಿಳಿ ಟೋಪಿ , ಹಸಿರು ಶಾಲು.. ಕಾರಣ?

ಶಾಸಕ ಹರೀಶ್​ ಪೂಂಜಾರಿಗೆ ಕೊರಿಯರ್​ನಲ್ಲಿ ಬಂತು ಮುಸ್ಲಿಂರ ಬಿಳಿ ಟೋಪಿ , ಹಸಿರು ಶಾಲು.. ಕಾರಣ?

Discussion about this post

Recent News

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
29
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d