• About us
  • Contact us
  • Disclaimer
Wednesday, August 27, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕದ ಯಲಬುರ್ಗಾ ತಾಲೂಕುಗಳಲ್ಲಿ ಅಪೌಷ್ಟಿಕತೆ ಕೊನೆಗಾಣಿಸುವ ಪೈಲಟ್ ಪರಿಕಲ್ಪನೆ ಫಲಿತಾಂಶ

Coastal Times by Coastal Times
June 23, 2023
in ರಾಜ್ಯ
ಕರ್ನಾಟಕದ ಯಲಬುರ್ಗಾ ತಾಲೂಕುಗಳಲ್ಲಿ ಅಪೌಷ್ಟಿಕತೆ ಕೊನೆಗಾಣಿಸುವ ಪೈಲಟ್ ಪರಿಕಲ್ಪನೆ ಫಲಿತಾಂಶ
20
VIEWS
WhatsappTelegramShare on FacebookShare on Twitter

ಕೊಪ್ಪಳ : ಅಪೌಷ್ಟಿಕತೆ ಕೊನೆಗೊಳಿಸುವಿಕೆ – ಅಪೌಷ್ಟಿಕತೆಯ ಹೊರೆಯನ್ನು ಕಡಿಮೆ ಮಾಡುವ ಒಂದು ನವೀನ ಸಾರ್ವಜನಿಕ ಆರೋಗ್ಯ ಪರಿಕಲ್ಪನೆಯನ್ನು ಎಡ್ವರ್ಡ್ ಮತ್ತು ಸಿಂಥಿಯಾ ಇನ್‌ಸ್ಟಿಟ್ಯೂಟ್‌ ಆಫ್ ಪಬ್ಲಿಕ್ ಹೆಲ್ತ್‌ (ECIPH) (ಯೆನೆಪೊಯ ಜೊತೆಗಿನ ಸಿಎಚ್‌ ಡಿ ಗ್ರೂಪ್ ಮತ್ತು ಸುಧಾರಿತ ತಾಂತ್ರಿಕ ಸಹಕಾರ ಕೇಂದ್ರದ ಒಂದು ಘಟಕ)ನಿಂದ ಪರಿಚಯಿಸಲಾಗಿದೆ.

ಈ ಉಪಕ್ರಮವನ್ನು ಸಾರ್ವಜನಿಕ ಆರೋಗ್ಯದ ದೃಷ್ಟಿಕೋನದಿಂದ ಪ್ರಾಯೋಗಿಕವಾಗಿ ನಡೆಸಲಾಯಿತು ಮತ್ತು ಕರ್ನಾಟಕ ರಾಜ್ಯದ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮವಾಗಿ ಜಾರಿಗೊಳಿಸಲಾಯಿತು. ಈ ಉಪಕ್ರಮವು ತೀವ್ರವಾದ ಅಪೌಷ್ಟಿಕತೆ ಹೊಂದಿರುವ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಅಪೌಷ್ಟಿಕತೆಯನ್ನು ಕಡಿಮೆಗೊಳಿಸುವ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆಯ ಹೊರೆಯನ್ನು ಕಡಿಮೆ ಮಡುವ ಗುರಿಯನ್ನು ಹೊಂದಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಹಕಾರದಿಂದ ಸಿಎಚ್‌ಡಿ ಗ್ರೂಪ್ ಇದನ್ನು ಅನುಷ್ಠಾನಗೊಳಿಸಿದೆ. ನಿಧಿಯ ಕೊರತೆಯಿಂದಾಗಿ, ಯೋಜನೆಯು ಪ್ರಾಯೋಗಿಕ ಕ್ರಮದಲ್ಲಿ ಕಾರ್ಯಗತಗೊಳಿಸಲಾಗಿತ್ತು. ಆಗಸ್ಟ್ 2022ರಲ್ಲಿ 31 ತೀವ್ರ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಂದ, ಮಾರ್ಚ್ 2023ರಲ್ಲಿ ಸಂಖ್ಯೆ 11ಕ್ಕೆ ಇಳಿದಿದೆ. ಅಂತೆಯೇ ಸೆಪ್ಟೆಂಬರ್ 2022ರಲ್ಲಿ 1067 ಮಧ್ಯಮ ತೀವ್ರ ಅಪೌಷ್ಟಿಕತೆಯ ಮಕ್ಕಳಿಂದ, ಮಾರ್ಚ್ 2023ರಲ್ಲಿ ಸಂಖ್ಯೆ 329ಕ್ಕೆ ಇಳಿದಿದೆ.

ಅಪೌಷ್ಟಿಕತೆಯ ಸಮಸ್ಯೆಗಳನ್ನು ಕೊನೆಗೊಳಿಸಲು ಈ ಮಾದರಿಯು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೆಲಸ ಮಾಡಿದೆ. ಐದು ವರ್ಷದೊಳಗಿನ ಮಕ್ಕಳ ಪಾಲಕರು, ಅಂಗನವಾಡಿ ಮೇಲ್ವಿಚಾರಕರು, ಸಮುದಾಯದ ಹಿರಿಯರು, ಚುನಾಯಿತ ಪ್ರತಿನಿಧಿಗಳು, ನಂಬಿಕೆ ಆಧಾರಿತ ಮುಖಂಡರು ಅಪೌಷ್ಟಿಕತೆಯ ಹೊರೆಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಒಗ್ಗೂಡಿದರು. ಕಡಿಮೆ-ವೆಚ್ಚದ ಪೌಷ್ಟಿಕಾಂಶದ ಆಹಾರ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ, ದೈನಂದಿನ ತೂಕ ಹೆಚ್ಚಳದ ರೆಕಾರ್ಡಿಂಗ್ ಮತ್ತು ಸಾಪ್ತಾಹಿಕ ಎತ್ತರದ ದಾಖಲೆಗಳು, ತಾತ್ಕಾಲಿಕ ಮೇಲ್ವಿಚಾರಣೆ, ಉತ್ತಮ ಪೋಷಣೆಯ ಕಡೆಗೆ ನಿವೃತ್ತ ಜನರ ಒಳಗೊಳ್ಳುವಿಕೆ ಮತ್ತು ತಯಾರಿಕೆಯಲ್ಲಿ ಪೋಷಕರಿಗೆ ಸಹಕಾರ ಇವುಗಳು ಯಶಸ್ಸನ್ನು ಸಾಧಿಸುವಲ್ಲಿ ಪ್ರಮುಖ ಕಾರಣವಾಗಿದೆ. ಭಾರತದಲ್ಲಿನ ಕರ್ನಾಟಕ ರಾಜ್ಯದ ಯಲಬುರ್ಗಾ ತಾಲೂಕಿನಲ್ಲಿರುವ ಎಲ್ಲಾ ಅಂಗನವಾಡಿಗಳಿಗೆ ಅವರ ಪೋಷಕರು ಮಕ್ಕಳಿಗೆ ಒದಗಿಸಬೇಕಾದ ಕಡಿಮೆ-ವೆಚ್ಚದ ಶಕ್ತಿಯುತ ಆಹಾರದ ವಿಷಯದಲ್ಲಿ ಬೆಂಬಲದ ಮೇಲ್ವಿಚಾರಣೆ ಮತ್ತು  ಸಹಕಾರವನ್ನು ನೀಡಲಾಯಿತು.

500 ಯುವ ಸ್ವಯಂಸೇವಕರನ್ನು ಗುರುತಿಸಲಾಗಿದ್ದು, ಮಕ್ಕಳಿಗೆ ಕಡಿಮೆ ದರದ ಪೌಷ್ಟಿಕ ಆಹಾರ ಕ್ರಮಗಳನ್ನು ನೀಡಲಾಗಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಶೇಂಗಾ ಚಿಕ್ಕಿಯಿಂದ ಹಿಡಿದು ಬೇಳೆ ಪಾಯಸ, ಚಿತ್ರಾನ್ನ, ಅನ್ನ ಸಾಂಬಾರು, ಮೊಳಕೆ ಕಾಳು, ಗೋಧಿ ಪಾಯಸ, ಉಪ್ಪಿಟ್ಟು ಹೀಗೆ ದಿನನಿತ್ಯ ಪೌಷ್ಟಿಕ ಆಹಾರ ನೀಡಲಾಯಿತು ಜೊತೆಗೆ ಮನೆಗಳಲ್ಲಿ, ಐದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಬಲವರ್ಧಿತ ಆಹಾರ ಮಿಶ್ರಣಗಳನ್ನು ತಯಾರಿಸಲು ಪೋಷಕರಿಗೆ ಕಲಿಸಲಾಯಿತು.

ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್‌ನ ನಿರ್ದೇಶಕ ಡಾ. ಎಡ್ಕಂಡ್ ಫೆನಾರ್ಂಡಿಸ್ ಈ ವಿಷಯದ ಕುರಿತು ಮಾತನಾಡುತ್ತಾ, ಇಂತಹ ಪರಿಕಲ್ಪನೆಗಳು 2030ರ ವೇಳೆಗೆ ಭಾರತದಿಂದ ಅಪೌಷ್ಟಿಕತೆಯನ್ನು ತೊಡೆದುಹಾಕಬಹುದು. ಆದರೆ ಗಂಭೀರವಾದ ರಾಜಕೀಯ ಇಚ್ಛಾಶಕ್ತಿ, ಸಾಪ್ತಾಹಿಕ, ಬೆಂಬಲಿತ ಮೇಲ್ವಿಚಾರಣೆ ಮತ್ತು ಪೋಷಕರ ಸಹಕಾರದ ಅಗತ್ಯವಿದೆ ಎಂದು ಹೇಳಿದ್ದಾರೆ. ಮಗುವಿನ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸದ ಪೋಷಕರಿಗೆ ತಿಳುವಳಿಕೆ ನೀಡಿ, ಮಗುವಿನ ಅತ್ಯುತ್ತಮ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯವಾಗಿ ರಚಿಸಲಾದ ಮೇಲ್ವಿಚಾರಕ ಪಂಗಡಗಳಿಗೆ ಈ ಪರೀಕ್ಷಿಸಿದ ಮಾದರಿಯು ಉನ್ನತ ಮಟ್ಟದ ಸಾಮರ್ಥ್ಯದೊಂದಿಗೆ ಅದ್ಭುತ ಫಲಿತಾಂಶಗಳನ್ನು ನೀಡಿರುವುದರಿಂದ ಅಪೌಷ್ಟಿಕತೆಯನ್ನು ಕೊನೆಗೊಳಿಸುವ ಗಂಭೀರ ಕಾರ್ಯಕ್ರಮಗಳ ಅನುಷ್ಟಾನಗೊಳಿಸುವ ಯಾವುದೇ ರಾಜ್ಯ ಸರ್ಕಾರಕ್ಕೆ ತಮ್ಮ ನಿರ್ದೇಶನಗಳ ಪ್ರಕಾರ ಬೆಂಬಲವನ್ನು ಡಾ. ಎಡ್ಕಂಡ್ ಫೆನಾರ್ಂಡಿಸ್‌ ಸಿದ್ಧರಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೊಣಾಜೆ: ರಸ್ತೆ ನಿಯಮ ನಿರ್ಲಕ್ಷಿಸಿದ್ದ ಮಹಿಳೆಗೂ ಬಿತ್ತು ಕೇಸು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು, ಅಜಾಗರೂಕತೆಯ ಚಾಲನೆಗೆ ದಂಡ

Next Post

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ದುರುಳರು!

Related Posts

ರಾಜ್ಯ

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

August 14, 2025
68
ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್
ರಾಜ್ಯ

ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್

July 25, 2025
66
Next Post
ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ದುರುಳರು!

ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ದುರುಳರು!

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
37
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
65
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d