ಉಳ್ಳಾಲ, ಜೂ.23: ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ದನ ಅವರನ್ನು ಬಸ್ ನಿರ್ವಾಹಕ ಹಾಗೂ ಪ್ರಯಾಣಿಕರು ಆಂಬುಲೆನ್ಸ್ ಮೂಲಕ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ವಿವರ: ಮಂಗಳೂರಿನಿಂದ ಮುಡಿಪು ಕಡೆ ಬರುತ್ತಿದ್ದ ಗೋಪಾಲಕೃಷ್ಣ ಬಸ್ ಯೆನೆಪೋಯ ಬಳಿ ತಲುಪಿದಾಗ ಚಾಲಕ ಜನಾರ್ದನ ಅವರಿಗೆ ರಕ್ತದೊತ್ತಡ ಕಡಿಮೆಯಾಗಿದೆ. ಇದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಚಾಲನೆಯಲ್ಲಿದ್ದ ಬಸ್ ಅನ್ನು ಅವರು ಡಿವೈಡರ್ಗೆ ಹತ್ತಿಸಿದ್ದಾರೆ. ಈ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ದನ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಯೆನೆಪೋಯ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ವಾಹನ ಚಾಲಕರು ದಿನನಿತ್ಯಲೂ ವಿರುದ್ಧ ಧಿಕ್ಕಿನಲ್ಲಿ ಚಲಿಸಿ ಯೂ-ಟರ್ನ್ ಹೊಡೆಯುತ್ತಿರುತ್ತಾರೆ. ಆದರೆ ಇಂದು ಘಟನೆ ನಡೆದ ಸಂದರ್ಭದಲ್ಲಿ ಬಸ್ಸಿಗೆ ಯಾವುದೇ ವಾಹನಗಳು ಅಡ್ಡ ಸಿಗದ ಕಾರಣ ಅನಾಹುತ ತಪ್ಪಿದಂತಾಗಿದೆ.
ಬಿಪಿ ಲೋ ಆಗಿ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ಧನ ಅವರನ್ನು ಅಲ್ಲೇ ಇದ್ದ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post