• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹನಿಟ್ರ್ಯಾಪ್ : ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್‌ ಸದಸ್ಯ, ಶ್ರೀನಿಧಿ ಗೋಲ್ಡ್‌ ಮಾಲೀಕ ಜಗನ್ನಾಥ ಎಸ್‌ ಶೆಟ್ಟಿಯಿಂದ 50 ಲಕ್ಷ ಪೀಕಿಸಿದ ಖದೀಮರು

Coastal Times by Coastal Times
August 23, 2022
in ರಾಜ್ಯ
ಹನಿಟ್ರ್ಯಾಪ್ : ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್‌ ಸದಸ್ಯ, ಶ್ರೀನಿಧಿ ಗೋಲ್ಡ್‌ ಮಾಲೀಕ ಜಗನ್ನಾಥ ಎಸ್‌ ಶೆಟ್ಟಿಯಿಂದ 50 ಲಕ್ಷ ಪೀಕಿಸಿದ ಖದೀಮರು
276
VIEWS
WhatsappTelegramShare on FacebookShare on Twitter

ಮಂಡ್ಯ: ಹನಿಟ್ರ್ಯಾಪ್ ಸುಳಿಗೆ ಸಿಲುಕಿದ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಹಾಗೂ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು 50 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದು, ಆರು ತಿಂಗಳ ನಂತರ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ಹನಿಟ್ರ್ಯಾಪ್​ಗೆ ಸಿಲುಕಿದವರು.  ಫೆಬ್ರವರಿ 26 ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಜಗನ್ನಾಥ್ ಶೆಟ್ಟಿ ಕಾಯುತ್ತಿದ್ದರು. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದಿದ್ದಾರೆ. ನಂತರ ಚಿನ್ನದ ಪರೀಕ್ಷೆಗೆಂದು ಅವರನ್ನು ಅಪಹರಿಸಿ ಲಾಡ್ಜ್ ರೂಮ್‍ಗೆ ಕರೆದೊಯ್ದಿದ್ದಾರೆ. ರೂಮ್‍ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ 50 ಲಕ್ಷ ಕೊಟ್ಟು ಅಲ್ಲಿಂದ ಜಗನ್ನಾಥ್ ತೆರಳಿದ್ದರು. ಆದರೆ, ಮತ್ತೆ ಹಣಕ್ಕಾಗಿ ಗ್ಯಾಂಗ್ ಬೇಡಿಕೆ ಇಟ್ಟಿದ್ದಲ್ಲದೇ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದೆ. ಇದರಿಂದ ಬೇಸತ್ತ ಜಗನ್ನಾಥ್ ಶೆಟ್ಟಿ ಅವರು 6 ತಿಂಗಳ ಬಳಿಕ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸಾಮಾನ್ಯ ಜ್ಞಾನವುಳ್ಳ ವ್ಯಕ್ತಿ ಮಧ್ಯರಾತ್ರಿಯಲ್ಲಿ ಯಾರೋ ಕರೆದರು ಎಂದರೆ ಹೋಗುತ್ತಾರಾ?  ಅವರು ಉದ್ಯಮಿಯಾಗಿದ್ದು ಅಪಾಯಗಳು ಇರುತ್ತವೆ. ಈ ಕನಿಷ್ಠ ತಿಳಿವಳಿಕೆ ಅವರಿಗೆ ಇರಲಿಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು. ಶ್ರೀನಿವಾಸ ಶೆಟ್ಟರ ಹೆಸರು ಬಳಕೆ: ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಡಾ.ಶ್ರೀನಿವಾಸ ಶೆಟ್ಟಿ ಅವರ ಮೂಲಕ ₹ 25 ಲಕ್ಷ ಹಣ ತಂದು ಆರೋಪಿಗಳಿಗೆ ನೀಡಲಾಯಿತು ಎಂದು ಜಗನ್ನಾಥ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ. ಸರ್ಕಾರಿ ಅಧಿಕಾರಿಯಾಗಿರುವ ಶ್ರೀನಿವಾಸ ಶೆಟ್ಟರ ಹೆಸರನ್ನು ಪ್ರಕರಣದಲ್ಲಿ ಬಳಕೆ ಮಾಡಿಕೊಂಡಿರುವ ಬಗ್ಗೆಯೂ ಸಾಕಷ್ಟು ಅನುಮಾನಗಳು ಪೊಲೀಸರಲ್ಲಿ ಮೂಡಿವೆ. ಶ್ರೀನಿವಾಸ ಶೆಟ್ಟಿ ಸೇರಿದಂತೆ ದೂರಿನಲ್ಲಿ ನಮೂದಿಸಿರುವ ರಾಜಶ್ರೀ ಜುವೆಲರ್ಸ್‌, ಸೂರ್ಯ ಜುವೆಲ್ಲರ್ಸ್‌ ಮಾಲೀಕರನ್ನು ಕರೆದು ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದರು. ಅಪಹರಣ, ಹಣ ದರೋಡೆ ಸೇರಿದಂತೆ ಜಗನ್ನಾಥ ಶೆಟ್ಟಿ ಅವರನ್ನು ಹನಿಟ್ರ್ಯಾಪ್‌ ಮಾಡಿರಬಹುದು ಎಂಬ ಬಗ್ಗೆಯೂ ಪೊಲೀಸರಲ್ಲಿ ಅನುಮಾನಗಳು ಇದ್ದು ಆ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮೆಡಾರ್ಗನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ – ಗೈಕೋಪೋಲ್-ಪಿಇಯ ಬಿಡುಗಡೆ ಸಮಾರಂಭ.

Next Post

ಸೆಪ್ಟೆಂಬರ್.2ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ಸಾಧ್ಯತೆ

Related Posts

ರಾಜ್ಯ

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

August 14, 2025
68
ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್
ರಾಜ್ಯ

ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್

July 25, 2025
66
Next Post
ಸೆಪ್ಟೆಂಬರ್.2ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ಸಾಧ್ಯತೆ

ಸೆಪ್ಟೆಂಬರ್.2ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ಸಾಧ್ಯತೆ

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
42
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
62
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d