ತಿರುವನಂತಪುರ: ‘ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ನನ್ನ ಮಗನಿಗೆ ಹುಷಾರಿಲ್ಲ. ಆದರೂ ನನಗೆ ಆತನ ಜೊತೆ ಇರಲು ಆಗುತ್ತಿಲ್ಲ. ಲಾಟರಿಯನ್ನು ಗೆದ್ದಾಗ ನನಗೆ ಭಾರಿ ಸಂತೋಷವಾಗಿತ್ತು. ಆದರೆ ಈಗ, ಯಾಕಾದರೂ ಗೆದ್ದೆನೊ ಎನ್ನಿಸುತ್ತಿದೆ’. ಶುಕ್ರವಾರ ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಅನೂಪ್ ಅವರು, ‘ನನಗೆ ಇನ್ನೂ ಹಣ ಬಂದಿಲ್ಲ ಎಂದು ಹೇಳಿದರೆ ಯಾರೂ ನಂಬುತ್ತಿಲ್ಲ. ನಾನು ಈಗ ಇರುವ ಮನೆಯನ್ನು ಬದಲಾಯಿಸಬೇಕು ಎಂದಿದ್ದೇನೆ’ ಎಂದು ಹೇಳಿದ್ದಾರೆ. ‘ಹಣದ ಸಹಾಯ ಕೇಳಿಕೊಂಡು ಬರುತ್ತಿರುವವರಿಂದ ತಪ್ಪಿಸಿಕೊಳ್ಳಲು ದೂರದ ಊರುಗಳಿಗೆ ಅನೂಪ್ ಅವರು ಓಡಿಹೋಗುವಂತಾಗಿದೆ. ಆತನ ಮಗನಿಗೆ ಆರೋಗ್ಯ ಸರಿಯಿಲ್ಲ. ಆತನ ಹೆಂಡತಿ ಬಸುರಿ. ಆದರೂ ಆತನಿಗೆ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ’ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post