• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿದೇಶದಲ್ಲಿ ಉದ್ಯೋಗಕ್ಕಾಗಿ ಮಂಗಳೂರಿನಲ್ಲೇ ಅರ್ಜಿ ಸಲ್ಲಿಸಿ , ದುಬೈ, ಯುಕೆಯಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ಕೈತುಂಬಾ ಸಂಬಳ

Coastal Times by Coastal Times
September 23, 2022
in ಕರಾವಳಿ
ವಿದೇಶದಲ್ಲಿ ಉದ್ಯೋಗಕ್ಕಾಗಿ ಮಂಗಳೂರಿನಲ್ಲೇ ಅರ್ಜಿ ಸಲ್ಲಿಸಿ , ದುಬೈ, ಯುಕೆಯಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ಕೈತುಂಬಾ ಸಂಬಳ
86
VIEWS
WhatsappTelegramShare on FacebookShare on Twitter

ಮಂಗಳೂರು, ಸೆಪ್ಟೆಂಬರ್‌ 22: ವಿದೇಶದಲ್ಲಿ ಉದ್ಯೋಗ ಮಾಡಬೇಕೆನ್ನುವುದು ಹಲವು ಜನರ ಕನಸಾಗಿರುತ್ತದೆ. ಆದರೆ ವಿದೇಶದ ಉದ್ಯೋಗದ ಮಾಹಿತಿ, ಅರ್ಜಿ ಸಲ್ಲಿಸಬೇಕಾದ ವಿಧಾನ ತಿಳಿಯದೇ ಹಲವು ಜನರು ತಮ್ಮ ಕನಸನ್ನು ನನಸು ಮಾಡಲಾಗದೇ ಹಾಗೆಯೇ ಹಿಂದೆ ಉಳಿದುಬಿಡುತ್ತಾರೆ. ಆದರೆ ಈ ಬಾರಿ ವಿದೇಶದಲ್ಲಿ ಉದ್ಯೋಗ ಮಾಡಬೇಕು ಎನ್ನುವರರಿಗೆ ಕರ್ನಾಟಕ ಕೌಶಲ್ಯಾಭಿವೃಧ್ಧಿ ನಿಗಮ ಉತ್ತಮ ಅವಕಾಶವನ್ನು ನೀಡಿದೆ. ದುಬೈ, ಯುಕೆ, ಜಪಾನ್, ರೊಮೇನಿಯ ದೇಶಗಳಲ್ಲಿ ಉದ್ಯೋಗಾವಕಾಶದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲೂ ನರ್ಸಿಂಗ್ ವಿಧ್ಯಾಭ್ಯಾಸ ಪೂರ್ಣಗೊಳಿಸಿದವರಿಗೆ ಅವಕಾಶ ಹುಡುಕಿಕೊಂಡು ಬಂದಿದ್ದು, ಕೈತುಂಬಾ ಸಂಬಳದ ಉದ್ಯೋಗದ ಮಾಹಿತಿಯನ್ನು ನೀಡಿದೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆಎಸ್‍ಡಿಸಿ) ಉದಯೋನ್ಮುಖ ಯೋಜನೆಯಾದ ಅಂತರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕದ ಮುಖಾಂತರ ವಿದೇಶಗಳಲ್ಲಿ ಉದ್ಯೋಗಾವಕಾಶಳು ಇದ್ದು, ಆಸಕ್ತರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.
ದುಬೈ: ಟೈಲ್ಸ್ ಮೇಸನ್ಸ್ , ಬ್ಲಾಕ್ ಮೇಸನ್ಸ್, ಹಾಗೂ ಮಾರ್ಬಲ್ ಮೇಸನ್ಸ್ 100 ಖಾಲಿ ಹುದ್ದೆಗಳಿಗೆ 18 ರಿಂದ 32 ವರ್ಷದೊಳಗಿನ ವಯೋಮಿತಿ ಉಳ್ಳವರು ಅಥವಾ 2 ವರ್ಷಕ್ಕಿಂತ ಹೆಚ್ಚು ಅನುಭವವುಳ್ಳ ಕಾರ್ಮಿಕರು ಬೇಕಾಗಿದ್ದಾರೆ.

ಯು.ಕೆ: ಐ.ಇ.ಎಲ್.ಟಿ.ಎಸ್-ಬ್ಯಾಂಡ್ 7 ಅಥವಾ ಒ.ಇ.ಟಿ ಗ್ರೇಡ್ ಬಿಯೊಂದಿಗೆ ಬಿ.ಎಸ್ಸಿ ನರ್ಸಿಂಗ್, ಜಿ.ಎನ್.ಎಂ, ಪಿ.ಬಿ.ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರುವ 6 ತಿಂಗಳಿಗಿಂತ ಹೆಚ್ಚು ಅನುಭವವುಳ್ಳ 50 ವರ್ಷದೊಳಗಿನ ಅಭ್ಯರ್ಥಿಗಳಿಗೆ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ಹಾಗೂ ಮೊದಲ 3 ತಿಂಗಳವರೆಗೆ ಉಚಿತ ವಸತಿ ನೀಡಲಾಗುತ್ತದೆ.

ಜಪಾನ್‌: ಎಸ್‌ಎಸ್ಎಲ್‌ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ ನರ್ಸಿಂಗ್, ಯಾವುದೇ ಪದವಿ ಅಥವಾ ಯಾವುದೇ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅವಿಯೇಶನ್, ಎಲೆಕ್ಟ್ರಿಕ್, ಕೃಷಿ, ನರ್ಸಿಂಗ್ ಕೇರ್, ಎಲೆಕ್ಟ್ರಾನಿಕ್ಸ್ ಮತ್ತು ಇನ್‍ಫಾರ್ಮೇಶನ್, ಶಿಪ್ ಬಿಲ್ಡಿಂಗ್ ಮತ್ತು ಶಿಪ್ ಮೆಷಿನರಿ ಇಂಡಸ್ಟ್ರಿ, ಇಂಡಸ್ಟ್ರಿಯಲ್ ಮೆಷಿನರಿ, ಮೆಷಿನ್ ಪಾಟ್ರ್ಸ್, ಟೂಲಿಂಗ್ ಇಂಡಸ್ಟ್ರಿ ವಲಯಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ.

ರೊಮೇನಿಯ: ಎಲೆಕ್ಟ್ರಿಷಿಯನ್ ಅಸೆಂಬ್ಲರ್‌, ಲಾಕ್ಸ್‌ಮಿತ್ಸ್‌ ಇನ್‍ಸ್ಟಾಲರ್ಸ್, ಎಲೆಕ್ಟ್ರಿಕ್ ಎ.ಆರ್.ಸಿ ವೆಲ್ಡರ್, ಮ್ಯಾನ್ಯುಯಲ್ ವೆಲ್ಡರ್ ವಿತ್‍ಗ್ಯಾಸ್ ಫ್ಲೇಮ್, ಕಾಪೆರೆಂಟರಿ ಫಾರ್ ಕಟ್ಟಿಂಗ್ ಎಂಡ್ ಸೀಜಿಂಗ್, ಮೆಕಾನಿಕಲ್ ಕಾಪೆರೆಂಟರಿ ಮಿಲ್ಲಿಂಗ್ ಎಂಡ್ ಡ್ರಿಲ್ಲಿಂಗ್, ಯೂನಿವರ್ಸಲ್ ಲೇತ್ ಮಷಿನ್ ಆಪರೇಟರ್, ಓವರ್‌ಹೆಡ್ ಕ್ರೇನ್‍ ಆಪರೇಟರ್, ಪ್ಲಂಬರ್ (ಸ್ಯಾನಿಟರಿ ವೇರ್/ಗ್ಯಾಸ್ ಲೈನ್), ಕಾಪೆರೆಂಟರ್ ಮಿಲ್ಲಿಂಗ್ ಮಷಿನ್, ಕಾಪೆರೆಂಟರ್ ಜನರಲ್ (ಟ್ರೇನ್‍ಕ್ಯಾರೇಜಸ್), ಪ್ಲಂಬರ್ (ಪೈಪ್‍ಲೈನ್), ರೆಫ್ರಿಜರೇಶನ್ ಇನ್‍ಸ್ಟಾಲರ್, ವೆಲ್ಡರ್ ಎ.ಆರ್.ಸಿ, ಲೇತ್ ಮೆಷಿನ್ ಆಪರೇಟರ್, ಯೂನಿವರ್ಸಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಮೆಕಾನಿಕಲ್ ಡಿಸೈನ್ ಇಂಜಿನಿಯರ್ ಮುಂತಾದ ಹುದ್ದೆಗಳಿಗೆ ಪದವಿಗೆ ಅನುಸಾರವಾಗಿ ಉದ್ಯೋಗಾವಕಶಗಳಿವೆ. ಆಸಕ್ತರು ಮಂಗಳೂರು ನಗರದ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃಧ್ಧಿ ಕಚೇರಿ ಅಥವಾ ಮೊಬೈಲ್ ಸಂಖ್ಯೆ; 9110248485 ಮೂಲಕ ಸಂಪರ್ಕಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಯಾವ ರಾಜ್ಯದಲ್ಲಿ ಎನ್‌ಐಎ ಎಷ್ಟು ಜನರನ್ನು ಬಂಧಿಸಲಾಗಿದೆ, ಯಾರೆಲ್ಲಾ ಬಂಧನಕ್ಕೊಳಗಾಗಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Next Post

ಕೇರಳ: ಹಿಂಸಾಚಾರಕ್ಕೆ ತಿರುಗಿದ ಪಿಎಫ್‌ಐ ಬಂದ್, ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲು ತೂರಾಟ, ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
61
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
39
Next Post
ಕೇರಳ: ಹಿಂಸಾಚಾರಕ್ಕೆ ತಿರುಗಿದ ಪಿಎಫ್‌ಐ ಬಂದ್, ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲು ತೂರಾಟ, ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ

ಕೇರಳ: ಹಿಂಸಾಚಾರಕ್ಕೆ ತಿರುಗಿದ ಪಿಎಫ್‌ಐ ಬಂದ್, ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲು ತೂರಾಟ, ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
35
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d