• About us
  • Contact us
  • Disclaimer
Tuesday, July 8, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಸ್ಮರಣಾರ್ಥ ನಿರ್ಮಿಸಿದ ಬಸ್ ನಿಲ್ದಾಣ ನಾಮಕರಣಕ್ಕೆ ತಗಾದೆ, ಕೊಲೆ ಬೆದರಿಕೆ ಅಡಿಯೋ ವೈರಲ್ ಪ್ರಕರಣ – ಪಿಂಕಿ ನವಾಜ್ ಸಹಿತ ಐವರ ಬಂಧನ

Coastal Times by Coastal Times
October 23, 2021
in ಕ್ರೈಮ್ ನ್ಯೂಸ್
ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಸ್ಮರಣಾರ್ಥ ನಿರ್ಮಿಸಿದ ಬಸ್ ನಿಲ್ದಾಣ ನಾಮಕರಣಕ್ಕೆ ತಗಾದೆ, ಕೊಲೆ ಬೆದರಿಕೆ ಅಡಿಯೋ ವೈರಲ್ ಪ್ರಕರಣ – ಪಿಂಕಿ ನವಾಜ್ ಸಹಿತ ಐವರ ಬಂಧನ
53
VIEWS
WhatsappTelegramShare on FacebookShare on Twitter

ಮಂಗಳೂರು, ಅ.22: ಸಂಘ ಪರಿವಾರಕ್ಕೆ ಸೇರಿದ ಜಿಲ್ಲೆಯ ಕೆಲ ಮುಖಂಡರ ಕೊಲೆ ಮಾಡುವುದಾಗಿ ವಾಯ್ಸ್ ಮೆಸೇಜ್ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಮಾರಾಣಾಂತಿಕವಾಗಿ ಹಲ್ಲೆಗೊಳಗಾಗಿ ಹತ್ಯೆಗೆಯ್ಯಲ್ಪಟ್ಟ ಬಿಜೆಪಿ ಕಾರ್ಯಕರ್ತ ದಿ. ದೀಪಕ್ ರಾವ್ ಸ್ಮರಣಾರ್ಥವಾಗಿ ನಿರ್ಮಿಸಿದ ಬಸ್ ನಿಲ್ದಾಣದ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ಕೊಲೆ ಮಾಡುವ ಬೆದರಿಕೆಯೊಡ್ಡಿದ ಅಡೀಯೊವೊಂದು ವೈರಲ್‌ ಆಗಿತ್ತು. ಇದರ ಬೆನ್ನು ಹತ್ತಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ

ಸುರತ್ಕಲ್ ಕಾಟಿಪಳ್ಳದ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ನವಾಝ್ ಯಾನೆ ಪಿಂಕಿ ನವಾಝ್ (25), ಜೋಕಟ್ಟೆಯ ಮುಹಮ್ಮದ್ ಫೈಝಲ್ (21), ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ಸಫ್ವಾನ್ (23), ಕಾಟಿಪಳ್ಳ 6ನೇ ಬ್ಲಾಕ್ ನಿವಾಸಿ ಮುಹಮ್ಮದ್ ನಿಯಾಝ್ (20), ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಮುಸ್ತಫಾ (22) ಬಂಧಿತ ಆರೋಪಿಗಳು. ಇವರ ಪೈಕಿ ಪಿಂಕಿ ನವಾಝ್ ಬಿಜೆಪಿ ಕಾರ್ಯಕರ್ತ ದೀಪಕ್‌ ರಾವ್‌ ಕೊಲೆಯ ಪ್ರಮುಖ ಆರೋಪಿ.

ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಈತ ಕೆಲ ಸಮಯದ ಬಳಿಕ ಜಾಮೀನಿನಲ್ಲಿ ಹೊರಗೆ ಬಂದಿದ್ದ. ಬಂಧಿತ ಆರೋಪಿಗಳಿಂದ ತಲವಾರು,ನಾಲ್ಕು ಮೊಬೈಲ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಇನ್ನೂ ಹಲವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ನಾಲ್ಕು ವರ್ಷಗಳ ಹಿಂದೆ ಕೊಲೆಯಾದ ದೀಪಕ್ ರಾವ್ ನೆನಪಿಗಾಗಿ ಕಾಟಿಪಳ್ಳದ 3ನೇ ಬ್ಲಾಕ್ ದ್ವಾರದ ಸಮೀಪದಲ್ಲಿ ಹೊಸದಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಕ್ಕೆ ದೀಪಕ್ ಹೆಸರು ನಾಮಕರಣಕ್ಕೆ ತೀರ್ಮಾನಿಸಿದ್ದರು. ಅದರಂತೆ, ಬಸ್ ನಿಲ್ದಾಣವನ್ನು ಅಕ್ಟೋಬರ್ 2ರಂದು ಬೆಳಗ್ಗೆ 9:30ಕ್ಕೆ ಶಾಸಕ ಭರತ್ ಶೆಟ್ಟಿ ಉದ್ಘಾಟಿಸಿದ್ದರು.

ಇದಾದ ಬಳಿಕ ‘ಲೋಕಂಡವಾಲಾ’ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಪಿಂಕಿ ನವಾಝ್ ಹಾಗೂ ಜುನ್ನಿ ಎಂಬಾತನ ನಡುವೆ ನಡೆದ ಸಂಭಾಷಣೆಯದ್ದು ಎನ್ನಲಾದ ಆಡಿಯೊ ತುಣುಕನ್ನು ಹಂಚಿಕೊಳ್ಳಲಾಗಿತ್ತು. ‘ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳನ್ನು ಕೊಲೆ ಮಾಡುತ್ತೇವೆ’ ಎನ್ನುವುದು ಆಡಿಯೊದಲ್ಲಿತ್ತು. ಇದು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾಟಿಪಳ್ಳದ ಲೋಕೇಶ್ ಎಂಬವರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಐವರನ್ನು ಬಂಧಿಸಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಟಿ20 – ಪಂದ್ಯ

Next Post

ಮಂಗಳೂರು: ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದ ಆಸಿಯಾ

Related Posts

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು
ಕ್ರೈಮ್ ನ್ಯೂಸ್

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
16
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ
ಕ್ರೈಮ್ ನ್ಯೂಸ್

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
1
Next Post
ಮಂಗಳೂರು: ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದ ಆಸಿಯಾ

ಮಂಗಳೂರು: ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದ ಆಸಿಯಾ

Discussion about this post

Recent News

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
16
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ 4.59 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ 4.59 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d