• About us
  • Contact us
  • Disclaimer
Wednesday, May 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕೇರಳದಲ್ಲಿ ಬಿಜೆಪಿ, ಆರೆಸ್ಸೆಸ್ ತಲೆ ಎತ್ತಲು ಬಿಡಲಾರೆವು: ಶೈಲಜಾ ಟೀಚರ್

Coastal Times by Coastal Times
November 23, 2021
in ಕರಾವಳಿ
ಮಂಗಳೂರು: ಕೇರಳದಲ್ಲಿ ಬಿಜೆಪಿ, ಆರೆಸ್ಸೆಸ್ ತಲೆ ಎತ್ತಲು ಬಿಡಲಾರೆವು: ಶೈಲಜಾ ಟೀಚರ್
36
VIEWS
WhatsappTelegramShare on FacebookShare on Twitter

ಮಂಗಳೂರು: ಗುರುಪುರ ಕೈಕಂಬದ ಖಾಸಗಿ ಸಭಾಗೃಹದ ಮೈದಾನದಲ್ಲಿ ನಡೆಯುತ್ತಿರುವ ಸಿಪಿಎಂ ಪಕ್ಷದ ದ.ಕ. ಜಿಲ್ಲಾ 23ನೆ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.

ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ನೇತೃತ್ವದ ಸರಕಾರವಿದೆ. ಆದರೆ ಆಡಳಿತ ನಡೆಸುವುದು ಸಂಘ ಪರಿವಾರವಾಗಿದೆ. ಈ ಸಂಘ ಪರಿವಾರ, ಬಿಜೆಪಿಯು ಭಕ್ತಿಯ ಹೆಸರಲ್ಲಿ ಜನರನ್ನು ಮೋಸಮಾಡುತ್ತದೆ. ದೇಶದ ಬಹುತೇಕ ಕಡೆ ಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೇರಿದ ಬಿಜೆಪಿಯು ಕೇರಳದಲ್ಲೂ ತಳವೂರಲು ಯತ್ನಿಸುತ್ತಿದೆ. ಆದರೆ ಸಿಪಿಎಂ ಅದಕ್ಕೆ ಎಂದೂ ಅವಕಾಶ ಕೊಡುವುದಿಲ್ಲ ಎಂದು ಸಿಪಿಎಂ ಕೇಂದ್ರ ಸಮಿತಿ ಸದಸ್ಯೆ ಹಾಗೂ ಕೇರಳದ ಮಾಜಿ ಸಚಿವೆ, ಹಾಲಿ ಶಾಸಕಿ ಶೈಲಚಾ ಟೀಚರ್ ಹೇಳಿದರು.

ಎಲ್ಲಾ ಧರ್ಮವೂ ಅಹಿಂಸೆ, ಸಮಾನತೆ, ಮಾನವತೆಯನ್ನೇ ಪ್ರತಿಪಾದಿಸುತ್ತದೆ. ನಾರಾಯಣ ಗುರುಗಳೂ ಸಹ ಅದನ್ನೇ ಬೋಧಿಸಿದ್ದರು. ಆದರೆ ಸಂಘಪರಿವಾರ ಮಾತ್ರ ಧರ್ಮ, ಜಾತಿ ಹೆಸರಿನಲ್ಲಿ ವಿಭಜಿಸುತ್ತಿದೆ. ದೇಶಾದ್ಯಂತ ಸಂಘಪರಿವಾರ ಅದೆಷ್ಟು ಕೋಮು, ಮತಾಂಧತೆಯಿಂದ ಹಲವರ ಜೀವ ಬಲಿ ಪಡೆದಿದೆ. ಗುಜರಾತ್‌ನಲ್ಲಿ ಕರಸೇವೆ ಹೆಸರಿನಲ್ಲಿ ನಡೆದ ಜನಾಂಗೀಯ ಹತ್ಯಾಕಾಂಡ ಮರೆಯಲು ಸಾಧ್ಯವಿಲ್ಲ. ಅಲ್ಲಿನ ಮುಸ್ಲಿಮರನ್ನು ಪೆಟ್ರೋಲ್‌ ಸುರಿದು ಜೀವಂತವಾಗಿ ಸುಟ್ಟಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿರುವುದು ಕಾರ್ಪೊರೇಟ್ ಕಂಪೆನಿಗಳ ಸರಕಾರವಾಗಿದೆ. ಅದರ ವಿರುದ್ಧವೂ ಹೋರಾಟ ಆರಂಭವಾಗಿದೆ. ರೈತರ ಹೋರಾಟವು ಕೇವಲ ನರೇಂದ್ರ ಮೋದಿಯ ವಿರುದ್ದವಲ್ಲ. ಕಾರ್ಪೊರೇಟ್ ಕಂಪೆನಿಗಳ ವಿರುದ್ದವೂ ಆಗಿದೆ ಎಂದ ಶೈಲಜಾ ಟೀಚರ್ ಪ್ರಧಾನಿ ನರೇಂದ್ರ ಮೋದಿ ರೈತರ ಅಭಿವೃದ್ಧಿ ಹೆಸರಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೆಗೊಳಿಸಿದರು. ಈ ಕಾಯ್ದೆಯನ್ನು ಸಮರ್ಥಿಸಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ವೌನಕ್ಕೆ ಶರಣಾಗಿದ್ದಾರೆ ಎಂದರು.

ಕಮ್ಯುನಿಸ್ಟ್ ಪಕ್ಷವು ಈ ದೇಶದ ದುಡಿಯುವ ವರ್ಗದ ಜೀವಾಳವಾಗಿದೆ. ದುಡಿಯುವ ವರ್ಗದ ಮೇಲಿನ ದೌರ್ಜನ್ಯ ವಿರೋಧಿಸಿ ನಿರಂತರ ಹೋರಾಟ ಮಾಡುತ್ತ ಬಂದಿರುವ ಪಕ್ಷ ಸಿಪಿಎಂ ಆಗಿದೆ. ರಷ್ಯಾದಲ್ಲಿ ಹೋರಾಟದ ಕಿಚ್ಚು ಹಚ್ಚಿದ ಕಮ್ಯುನಿಸ್ಟರು ಅಮೆರಿಕ, ಭಾರತ ಮತ್ತಿತರ ರಾಷ್ಟ್ರಗಳಲ್ಲಿ ಸಾಮ್ರಾಜ್ಯಶಾಹಿಗಳು ಮತ್ತು ಬಂಡವಾಳಶಾಹಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಶೈಲಜಾ ಟೀಚರ್ ಹೇಳಿದರು.

ಪಕ್ಷದ ಜಿಲ್ಲಾ ಮುಖಂಡ ವಸಂತ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳದ ಸ್ವಾಗತ ಸಮಿತಿಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ವಹಿಸಿದ್ದರು. ಕೆಆರ್ ಶ್ರೀಯಾನ್, ಕೆ. ಯಾದವ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಯುಬಿ ಲೋಕಯ್ಯ, ಮುನೀರ್‌ಕಾಟಿಪಳ್ಳ, ಸುನೀಲ್‌ ಕುಮಾರ್‌ ಬಜಾಲ್‌, ಸದಾಶಿವ ದಾಸ್, ಮನೋಜ್ ವಾಮಂಜೂರು ಮತ್ತಿತರರು ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಪಬ್ಲಿಕ್ ಟಿವಿ ವರದಿಗಾರನ ಮೇಲೆ ವಕೀಲನಿಂದ ಮಾರಣಾಂತಿಕ ಹಲ್ಲೆ

Next Post

ವಿಧಾನ ಪರಿಷತ್ ಚುನಾವಣೆ , ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ.

Related Posts

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್
ಕರಾವಳಿ

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
ಪಂಜಾಬ್​ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
ಕರಾವಳಿ

ಪಂಜಾಬ್​ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

May 19, 2025
157
Next Post
ವಿಧಾನ ಪರಿಷತ್ ಚುನಾವಣೆ , ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ.

ವಿಧಾನ ಪರಿಷತ್ ಚುನಾವಣೆ , ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ.

Discussion about this post

Recent News

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
132
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

May 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d