• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ಮಂಗಳೂರು ಬ್ಲಾಸ್ಟ್ ನಮಗೊಂದು ಪಾಠ”: ಎಡಿಜಿಪಿ ಅಲೋಕ್‌ ಕುಮಾರ್‌

Coastal Times by Coastal Times
November 23, 2022
in ರಾಜ್ಯ
“ಮಂಗಳೂರು ಬ್ಲಾಸ್ಟ್ ನಮಗೊಂದು ಪಾಠ”: ಎಡಿಜಿಪಿ ಅಲೋಕ್‌ ಕುಮಾರ್‌
48
VIEWS
WhatsappTelegramShare on FacebookShare on Twitter

ಬೆಂಗಳೂರು: ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ ರಾಜ್ಯದಲ್ಲಿ ಭೀತಿಯ ಅಲೆ ಎಬ್ಬಿಸಿದೆ. ಈ ಘಟನೆ ಕುರಿತಂತೆ ತನಿಖೆ ಕೈಗೊಂಡಿರುವ ಪೊಲೀಸರು ಮಹತ್ವದ ಸಂಗತಿಗಳನ್ನು ಬೆಳಕಿಗೆ ತರುತ್ತಿದ್ದಾರೆ. ಪಾತಕಿಗಳ ಹೆಜ್ಜೆ ಜಾಡು ಬೆನ್ನತ್ತಿರುವ ಪೊಲೀಸರು ಅನೇಕರನ್ನು ಖೆಡ್ಡಕ್ಕೆ ಕೆಡವಿದ್ದು, ಇದರ ಜೊತೆಯಲ್ಲೇ ಎನ್‌ಐಎ, ರಾ ಸಹಿತ ವಿವಿಧ ತಂಡಗಳೂ ತನಿಖೆಯ ಅಖಡದಲ್ಲಿ ಕಾರ್ಯಾಚರಣೆ ಕೈಗೊಂಡಿವೆ.

ರಾಜ್ಯದಲ್ಲಿ ಈ ಹಿಂದೆ ಸಂಭವಿಸಿದ್ದ ಬಾಂಬ್ ಸ್ಫೋಟದ ತನಿಖೆಯನ್ನು ಯಶಸ್ವಿಯಾಗಿ ನಡೆಸಿದ್ದರೆಂಬ ಖ್ಯಾತಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರದ್ದು. ಇದೀಗ ಅವರು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಮುಖ್ಯಸ್ಥರಾಗಿರುವುದರಿಂದ ತಾವೇ ಖುದ್ದಾಗಿ ಮಂಗಳೂರು ಸ್ಫೋಟದ ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಮಂಗಳೂರಿನ ಈ ಘಟನೆಯ ಬಗ್ಗೆ ಎಲ್ಲಾ ಮಗ್ಗುಲಲ್ಲೂ ಪರಿಶೀಲನೆ ನಡೆಸಲು ಸೂಚಿಸಿರುವ ಅಲೋಕ್ ಕುಮಾರ್, ಈ ಸ್ಫೋಟದ ರೂವಾರಿಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕ ಇರುವ ರಹಸ್ಯವನ್ನು ಬೇಧಿಸಲು ಮಾರ್ಗದರ್ಶನ ಮಾಡಿದ್ದಾರೆ. ಅಷ್ಟೇ ಅಲ್ಲ, ವಿಧ್ವಂಸಕರು ಮಂಗಳೂರನ್ನೇ ಆಯ್ಕೆ ಮಾಡಿರುವ ಉದ್ದೇಶವನ್ನು ಪತ್ತೆ ಮಾಡುವ ಕಸರತ್ತಿನಲ್ಲೂ ಅವರು ತೊಡಗಿದ್ದಾರೆ.

Learnings from Mangalore blast case-

– Plz be careful if you lose your Aadhaar card

Use Lock & Unlock facility available on UIDAI site to prevent its misuse

– Plz verify antecedents of tenants before renting it out

– Effective neighbourhood watch system to be in place pic.twitter.com/xcy5ehtykU

— alok kumar (@alokkumar6994) November 22, 2022

ಮಂಗಳೂರು ಸ್ಫೋಟ ಪ್ರಕರಣದಿಂದ ನಾವು ಸಾಕಷ್ಟು ಕಲಿಯಬೇಕಿದೆ ಎಂದವರು ಅಭಿಪ್ರಾಯ ಹೇಳಿಕೊಂಡಿದ್ದಾರೆ. ಕೃತ್ಯಕ್ಕೂ ಮುನ್ನ ನಡೆದಿರುವ ಸಂಚು, ಆರೋಪಿಯ ಸಂಶಯಾಸ್ಪದ ನಡೆ, ಅಮಾಯಕರ ಆಧಾರ್ ಕಾರ್ಡ್ ಅಪಬಳಕೆಯ ವಿಚಾರಗಳು ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ಅದನ್ನು ಆಧಾರವಾಗಿಟ್ಟು ಸುರಕ್ಷತೆಯ ಅನಿವಾರ್ಯತೆಯ ವಿಚಾರಗಳನ್ನು ಅವರು ಜನತೆಯ ಮುಂದಿಟ್ಟಿದ್ದಾರೆ.

  • ಆಧಾರ್ ಕಾರ್ಡನ್ನು ಜೋಪಾನವಾಗಿ ಇಟ್ಟುಕೊಳ್ಳಿ,
  • ಆಧಾರ್ ಕಾರ್ಡ್‌ಗೆ ಸಂಬಂಧಪಟ್ಟ ಸೈಟ್‌ಗಳು ಅಪಬಳಕೆಯಾಗದಂತೆ ಲಾಕ್ ಅನ್‌ಲಾಕ್ ವಿಚಾರದಲ್ಲಿ ಜಾಗ್ರತೆ ವಹಿಸಿ.
  • ಬಾಡಿಗೆದಾರರ ವಿಚಾರದಲ್ಲೂ ನಿಗಾ ಇರಲಿ.
  • ನೆರೆ ಹೊರೆಯಲ್ಲಿನ ಸುವ್ಯವಸ್ಥೆ ಬಗ್ಗೆ ಹೆಚ್ಚು ಗಮನವಿರಲಿ

ಈ ಸಲಹೆಗಳೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಮಾಡಿರುವ ಟ್ವೀಟ್‌ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದನ್ನು ಅನೇಕರು ರಿಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್‌ಗೆ, ಜಾಗೃತಿ ಅಭಿಯಾನ ರೂಪದಲ್ಲಿ ಹರಿದಾಡುತ್ತಿರುವ ಕಮೆಂಟ್‌ಗಳೂ ಗಮನಸೆಳೆದಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

Customer Satisfaction is our greatest achievement – Mr. Anil Lobo, Chairman, MCC Bank Ltd.

Next Post

ಸುರತ್ಕಲ್‌ ಟೋಲ್ ಗೇಟ್ ತೆರವು: 3 ದಿನಗಳಲ್ಲಿ ಆದೇಶ ಜಿಲ್ಲಾಧಿಕಾರಿ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
Next Post
ಸುರತ್ಕಲ್‌ ಟೋಲ್ ಗೇಟ್ ತೆರವು: 3 ದಿನಗಳಲ್ಲಿ ಆದೇಶ ಜಿಲ್ಲಾಧಿಕಾರಿ

ಸುರತ್ಕಲ್‌ ಟೋಲ್ ಗೇಟ್ ತೆರವು: 3 ದಿನಗಳಲ್ಲಿ ಆದೇಶ ಜಿಲ್ಲಾಧಿಕಾರಿ

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
56
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d