• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ನ.24-26, ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಬಿಸಿನೆಸ್ ಕನ್‌ಕ್ಲೇವ್ ಮತ್ತು ಕೆಪಿಎಲ್ ಕ್ರೀಡಾ ಮಹೋತ್ಸವ

Coastal Times by Coastal Times
November 23, 2023
in ಕರಾವಳಿ
ಮಂಗಳೂರು: ನ.24-26, ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಬಿಸಿನೆಸ್ ಕನ್‌ಕ್ಲೇವ್ ಮತ್ತು ಕೆಪಿಎಲ್ ಕ್ರೀಡಾ ಮಹೋತ್ಸವ
20
VIEWS
WhatsappTelegramShare on FacebookShare on Twitter

ಮಂಗಳೂರು, ನ.23: ಕುಡಾಳ್ ದೇಶ್ಕರ್ ಆದ್ಯ ಗೌಡ್ ಬ್ರಾಹ್ಮಣ ಸಂಘದ ವತಿಯಿಂದ ಬಿಸಿನೆಸ್ ಕನ್‌ಕ್ಲೇವ್ ಮತ್ತು ಕೆಪಿಎಲ್ ಕ್ರೀಡಾ ಮಹೋತ್ಸವವು ನ.24ರಿಂದ 26ರವರೆಗೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಕೆಡಿಎಜಿಬಿ ಅಧ್ಯಕ್ಷ ಜಗದೀಶ ವಾಳವಲ್ಕರ್ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪ್ರದೇಶದ ವಿಆ೦ಉ (ಕುಡಾಳ್‌ ದೇಶ‌ ಆದ್ಯ ಗೌಡ್ ಬ್ರಾಹ್ಮಣ) ಸಂಘದಿಂದ ಮಂಗಳೂರಿನಲ್ಲಿ 3 ದಿನಗಳ ಕಾರ್ಯಕ್ರಮ ಬಿಸಿನೆಸ್‌ ಕನ್‌ ಕ್ಲೀವ್‌ ಮತ್ತು 8ನೇ ಕೆಪಿಎಲ್ ಈವೆಂಟ್ ಕಾರ್ಯಕ್ರಮವು ದಿನಾಂಕ 24 ನವೆಂಬರ್ 2023 ರಿಂದ 26 ನವೆಂಬರ್ 2023 ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಕುಡಾಳ್ ದೇಶ್ವರ್ ಆದ್ಯ ಗೌಡ್ ಬ್ರಾಹಣ (ಕೆಡಿಎಜಿಬಿ) ಮತ್ತು ಗೌಡ ಬ್ರಾಹಣ ಸಭಾ, ಮುಂಬೈ ಇವರ ವತಿಯಿಂದ ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿ ಕ್ರೀಡೆ, ಸಾಂಸ್ಕೃತಿಕ ಸಂಭ್ರಮ ಮತ್ತು ವ್ಯಾಪಾರ ಘಟಿಕೋತ್ಸವವನ್ನು ಆಯೋಜಿಸಿ ರಾಷ್ಟ್ರೀಯತೆಯ ಮನೋಭಾವದಿಂದ ಕಾರ್ಯಕ್ರಮವು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿಶಾಲವಾದ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸುಮಾರು 3000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಈ 3 ದಿನಗಳ ಕಾರ್ಯಕ್ರಮವನ್ನು ಮಹಾರಾಷ್ಟ್ರದ ಕೈಗಾರಿಕಾ ಸಚಿವ ಉದಯ್‌ ಸಾಮಂತ್ ಅವರು ಶನಿವಾರ (25 ನವೆಂಬರ್ 2023)ರಂದು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮತ್ತು ಕಾಂಗ್ರೆಸ್‌ ಎಂಎಲ್‌ ಸಿ ಮತ್ತು ಶಿಕ್ಷಣ ತಜ್ಞ ಮಂಜುನಾಥ ಭಂಡಾರಿ ಅವರ ಉಪಸ್ಥಿತಿಯಲ್ಲಿ ಕೆಪಿಎಲ್ ಕಾರ್ಯಕ್ರಮ ಮತ್ತು ವ್ಯಾಪಾರ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಿಜೆಪಿ ಉಡುಪಿ ಬ್ಲಾಕ್ ಅಧ್ಯಕ್ಷ ಮಹೇಶ್‌ ಠಾಕೂರ್, ಕರ್ನಾಟಕ ಅಥ್ಲೆಟಿಕ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ಮಾಜಿ ಭಾರತೀಯ ಮಹಿಳಾ ಕ್ರಿಕೆಟಿಗ ಸುಲಕ್ಷಣಾ ನಾಯಕ (ಪ್ರಸ್ತುತ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯೆ) ಮತ್ತು ಸಮುದಾಯದ ಇತರ ಗಣ್ಯರು ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕೆಪಿಎಲ್‌ ಕ್ರೀಡಾಕೂಟ: ಕೆಪಿಎಲ್ ಕ್ರೀಡಾಕೂಟದಲ್ಲಿ ಸುಮಾರು 3,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಏಕಐ 2023 ಐದು ಕ್ರೀಡಾಕೂಟಗಳನ್ನು ಒಳಗೊಂಡಿರುತ್ತದೆ. ಕ್ರಿಕೆಟ್, ಫೋಬಾಲ್, ಕೇರಂ, ಟೇಬಲ್ ಟೆನ್ನಿಸ್ ಮತ್ತು ಚೆಸ್ 32 ಪುರುಷ ಕ್ರಿಕೆಟ್ ತಂಡಗಳು, 12 ಮಹಿಳಾ ಕ್ರಿಕೆಟ್ ತಂಡಗಳು, 220 ಚೆಸ್‌ ಆಟಗಾರರು, 120 ಕೇರಂ ಆಟಗಾರರು. 50 ಟೇಬಲ್ ಟೆನಿಸ್ ಆಟಗಾರರು ಮತ್ತು 10 ಪ್ರೋಬಾಲ್ ತಂಡಗಳು ಪಾಲ್ಗೊಳ್ಳಲಿವೆ.

ಕಲಾಪ್ರದರ್ಶನ: ಕಲೆ ಮತ್ತು ರಂಗೋಲಿ ಸ್ಪರ್ಧೆಯನ್ನು ಸಹ ನಡೆಸಲಾಗುವುದು ಮತ್ತು ಚಿತ್ರಕಲೆ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ನವೆಂಬರ್ 24 ಮತ್ತು ನವೆಂಬರ್ 25 ರಂದು ಸಂಜೆ, ಮೂರು ದಿನಗಳ ಕಾರ್ಯಕ್ರಮದಲ್ಲಿ ವೃತ್ತಿಪರರು ಮತ್ತು ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಸಾರೆಗಮಾಪ ಜೀ ಮರಾಠಿ ಮತ್ತು ಜೀ ಕನ್ನಡದ ಖ್ಯಾತ ಗಾಯಕರು ಮತ್ತು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಿಸಿನೆಸ್‌ ಕನ್‌ಕ್ಷೇವ್ – ಪ್ರಮುಖ ಭಾಷಣಕಾರರು: “ಯುನೈಟ್ ಎಂಪವರ್ ಮತ್ತು ಇನ್‌ಸ್ಪೆರ್” ಎಂಬ ವಿಷಯದ ಅಡಿಯಲ್ಲಿ – ನವೆಂಬರ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ 300ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು, ವಿವಿಧ ವಲಯಗಳ ಉದ್ಯಮಿಗಳು ಮತ್ತು ಸ್ಟಾರ್ಟ್‌ ಆಪ್‌ಗಳು ಉದ್ಯಮ ಕನ್‌ಕ್ಷೇವ್‌ನಲ್ಲಿ ಭಾಗವಹಿಸಲಿದ್ದಾರೆ.

ದೀಪಕ್ ಕರೆಂಜರ್, ನಟ, ನಿರ್ದೇಶಕ, ಲೇಖಕ ಮತ್ತು ರೂಪಾಂತರ ತರಬೇತುದಾರ, ಶುಭಾಂಗಿ ತಿರೋಡ್ಕ‌, ಮಹಾರಾಷ್ಟ್ರ ಚೇಂಬರ್ ಆಫ್ ಕಾಮರ್ಸ್ ಆಫ್ ಇಂಡಸ್ಟ್ರಿ ಮತ್ತು ಅಗಿಕಲ್ಟರ್‌ನ ಉಪಾಧ್ಯಕ್ಷ, ಅಜಯ್‌ ನಾಯಕ್, ರುಕ್ಕಿಣಿ ಪುಡ್ ಇಂಪ್ಲೆಕ್ಸ್ ಲಿಮಿಟೆಡ್‌ನ ಪಾಲುದಾರ; ಜಗದೀಶ್ ವಾಲ್ವಾಲ್ಕರ್, ಐಡಿಯಲ್ ಎಜುಕೇಶನ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಎಂ.ಡಿ.: ಸತೀಶ್ ಪಾಟೀಲ್‌, ವೇಗ, ಟ್ರಾನ್ಸ್‌ಪೋರ್ಟ್‌ನ ಸಂಸ್ಥಾಪಕರು: ಇನ್ನಿತರ ಉದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆಪಿಎಲ್ ಅಧ್ಯಕ್ಷ ಸಂಜೀವ ನಾಯ್ಕ ಕಲ್ಲೇಗ, ಕೆಪಿಎಲ್ ಕಾರ್ಯದರ್ಶಿ ಶಿವಾನಂದ ಪ್ರಭು, ಕೆಪಿಎಲ್ ಕ್ರೀಡಾ ಸಂಚಾಲಕ ಮನೀಶ್ ದಾಭೋಲ್ಕರ್, ಕೆಪಿಎಲ್ ಮಹಾಸಂಚಾಲಕ ಮಹೇಶ್ ಠಾಕೂರ್, ರಮೇಶ್ ನಾಯ್ಕ, ಮೋಹನದಾಸ್ ಪಾಟೀಲ್, ಸಂಜಯ್ ಪ್ರಭು, ಅಕ್ಷತಾ ನಾಯ್ಕ್, ಪ್ರವೀಣ್ ದರ್ಬೆ, ಸತೀಶ್ ಪಾಟೀಲ್ ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನಕ್ಸಲ್‌ ಪ್ರದೇಶದ ಒಂಟಿ ಮನೆಗೆ ಮಧ್ಯರಾತ್ರಿ ಲಗ್ಗೆ ಇಟ್ಟವರ‍್ಯಾರು? ಪೊಲೀಸರನ್ನೇ ಯಾಮಾರಿಸಲು ಯತ್ನಿಸಿದ ವಂಚಕ

Next Post

ಮುಡಿಪು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, 4.95 ಲಕ್ಷರೂ. ಮೌಲ್ಯದ ಸೊತ್ತು ವಶ

Related Posts

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ
ಆರೋಗ್ಯ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
175
Next Post
ಮುಡಿಪು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, 4.95 ಲಕ್ಷರೂ. ಮೌಲ್ಯದ ಸೊತ್ತು ವಶ

ಮುಡಿಪು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, 4.95 ಲಕ್ಷರೂ. ಮೌಲ್ಯದ ಸೊತ್ತು ವಶ

Discussion about this post

Recent News

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

July 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d