ಮಂಗಳೂರು: ಪ್ರೀತಿಸಿ ಮದುವೆಯಾದ ಪತಿಯು ಅಕ್ರಮ ಸಂಬಂಧ ಹೊಂದಿರುವುದನ್ನು ಪ್ರಶ್ನಿಸಿ ಮಾನಸಿಕವಾಗಿ ಹಿಂಸಿಸಿ, ದೈಹಿಕವಾಗಿ ಹಲ್ಲೆ ನಡೆಸಿ ತಲಾಖ್ ನೀಡಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ ಸಮ್ಮರ್ ಸ್ಯಾಂಡ್ ಹತ್ತಿರ ನಿವಾಸಿ ಮಹಮ್ಮದ್ ದಿಲ್ಫಾಜ್ ತ್ರಿವಳಿ ತಲಾಖ್ ನೀಡಿದ ಪತಿ. ಈತ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಹೀನ ಫಾತಿಮಾ ಎಂಬಾಕೆಯನ್ನು 2019ರಲ್ಲಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯ ಸಂದರ್ಭ ಹೀನ ಫಾತಿಮಾ ಮನೆಯವರು ಆಕೆಗೆ 22ಪವನ್ ಚಿನ್ನ ಹಾಕಿದ್ದು, ಮೊಹಮ್ಮದ್ ದಿಲ್ಫಾಜ್ಗೆ ವಾಚ್ ಖರೀದಿಸಲು 50,000 ರೂ. ನೀಡಿದ್ದಾರೆ. ಮದುವೆಯಾದ ಬಳಿಕ ಮೊಹಮ್ಮದ್ ದಿಲ್ಫಾಜ್ ಪತ್ನಿಯೊಂದಿಗೆ ಸಂತೋಷದಿಂದಿದ್ದು, ಬಳಿಕ ಬೇರೆ ಅನ್ಯ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಲು ಆರಂಭಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ, ಪತ್ನಿ ವಿಚಾರಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿದ್ದನು. ಪರಿಣಾಮ ಹೀನ ಫಾತಿಮಾ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕುಟುಂಬದ ಹಿರಿಯರು ಪಂಚಾಯಿತಿಕೆ ನಡೆಸಿ ಮೊಹಮ್ಮದ್ ದಿಲ್ಫಾಜ್ಗೆ ಬುದ್ಧಿ ಮಾತನ್ನು ಹೇಳಿದ್ದರು. ಆದರೂ ತನ್ನ ಚಾಳಿಯನ್ನು ಮುಂದುವರಿಸಿದ್ದಾನೆ. ನವೆಂಬರ್ 8ರಂದು ಈ ಬಗ್ಗೆ ಹೀನ ಫಾತಿಮಾ ತಂದೆ ಸಬೀಲ್ ಅಹಮ್ಮದ್ ಅವರು ಮೊಹಮ್ಮದ್ ದಿಲ್ಫಾಜ್ನಲ್ಲಿ ವಿಚಾರಿಸಿದ್ದಕ್ಕೆ ಆತ ಪತ್ನಿಗೆ ಹಲ್ಲೆ ನಡೆಸಿದ್ದಲ್ಲದೆ ಪತ್ನಿಯ ತಂದೆಯನ್ನು ಮನೆಗೆ ಕರೆದು ಅವರ ಎದುರಿನಲ್ಲಿಯೇ ಪತ್ನಿ ಹೀನ ಫಾತಿಮಾಗೆ ಮೂರು ಬಾರಿ ತಲಾಖ್ ಹೇಳಿದ್ದಾನೆ. ಇನ್ನು ಮುಂದೆ ನೀನು ನನ್ನ ಪತ್ನಿಯಲ್ಲ ಎಂದು ಹೇಳಿ ಮನೆಯಿಂದ ಹೊರ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ.
ಅಲ್ಲದೆ ಮೊಹಮ್ಮದ್ ದಿಲ್ಫಾಜ್ ತಂದೆ ಉಮರಬ್ಬ ಕೈತುಂಬಾ ವರದಕ್ಷಿಣೆ ಕೊಡಲಿಲ್ಲ, ಎಂದು ಹೀನ ಫಾತಿಮಾಗೆ ಆಗಾಗ ಮಾನಸಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ ಅಜ್ಜಿ ತನ್ನ ಹೆಸರಿನಲ್ಲಿ ಹೂಡಿಕೆ ಮಾಡಿರುವ 50ಸಾವಿರ ರೂ. ಮೆಚೂರ್ಡ್ ಆದರೆ ದೊರಕುವ 8,00,000 ರೂ ಹಣವನ್ನು ಪತಿ ಹಾಗೂ ಪತಿಯ ತಂದೆಗೆ ನೀಡಬೇಕೆಂದು ಕಿರುಕುಳ ನೀಡಿರುತ್ತಾರೆ ಎಂದು ಹೀನ ಫಾತಿಮಾ ತನ್ನ ಪತಿ ಮೊಹಮ್ಮದ್ ದಿಲ್ಫಾಜ್ ಹಾಗೂ ಆತನ ತಂದೆ ಉಮರಬ್ಬ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಮೊಹಮ್ಮದ್ ದಿಲ್ಫಾಜ್ನನ್ನು ಬಂಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post