• About us
  • Contact us
  • Disclaimer
Wednesday, November 19, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬೋಟ್ ನಲ್ಲಿ ಮೊಬೈಲ್ ಕದ್ದನೆಂದು ತಲೆಕಳೆಗೆ ತೂಗು ಹಾಕಿ ಹಲ್ಲೆ : ಆರು ಆರೋಪಿಗಳ ಬಂಧನ

Coastal Times by Coastal Times
December 23, 2021
in ಕ್ರೈಮ್ ನ್ಯೂಸ್
ಮಂಗಳೂರು: ಬೋಟ್ ನಲ್ಲಿ ಮೊಬೈಲ್ ಕದ್ದನೆಂದು ತಲೆಕಳೆಗೆ ತೂಗು ಹಾಕಿ ಹಲ್ಲೆ : ಆರು ಆರೋಪಿಗಳ ಬಂಧನ
185
VIEWS
WhatsappTelegramShare on FacebookShare on Twitter

ಮಂಗಳೂರು, ಡಿ.23: ನಗರದ ಬಂದರ್ ದಕ್ಕೆಯಲ್ಲಿ‌‌ ಆಂಧ್ರಪ್ರದೇಶ‌ ಮೂಲದ ವೈಲ ಶೀನು(32) ಎಂಬ ಮೀನುಗಾರನೊಬ್ಬರನ್ನು ಮೊಬೈಲ್ ಕಳ್ಳತನದ ಆರೋಪ ಹೊರಿಸಿ ಕೈಕಾಲುಗಳನ್ನು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಂಡೂರು ಪೋಲಯ್ಯ(23), ಅವುಲ ರಾಜ್ ಕುಮಾರ್(26), ಕಾಟಂಗರಿ ಮನೋಹರ್(21), ವೂಟುಕೋರಿ ಜಾಲಯ್ಯ(30), ಕರಪಿಂಗಾರ ರವಿ(27) ಹಾಗೂ ಪ್ರಳಯಕಾವೇರಿ ಗೋವಿಂದಯ್ಯ(47) ಬಂಧಿತ ಆರೋಪಿಗಳಾಗಿದ್ದಾರೆ. ಇವರೆಲ್ಲರೂ ಆಂಧ್ರ ಪ್ರದೇಶ ಮೂಲದವರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ: ಮಂಗಳೂರು ದಕ್ಕೆಯಲ್ಲಿ ನಿಲ್ಲಿಸಿದ್ದ ಮೀನುಗಾರಿಕಾ ಬೋಟ್ ವೊಂದಕ್ಕೆ ಮೀನುಗಾರಿಕಾ ಕಾರ್ಮಿಕರಾಗಿರುವ ವೈಲ ಶೀನು ಡಿ.14ರಂದು ರಾತ್ರಿ ಹೋಗಿದ್ದರು. ಬಳಿಕ ವಾಪಾಸ್ಸಾಗಿ ತಾನು ಕೆಲಸಕ್ಕಿದ್ದ ಬೋಟ್ ನಲ್ಲಿ ಮಲಗಿದ್ದರು. ಆದರೆ ಡಿ.15ರಂದು ಬೆಳಗ್ಗೆ ತಮ್ಮ ಬೋಟ್ ಗೆ ಬಂದು ತಮ್ಮ ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿದ್ದಿ ಎಂದು ಆರೋಪಿಸಿ ಆರೋಪಿಗಳಾದ ಪೋಲಯ್ಯ, ರಾಜ್ ಕುಮಾರ್, ಮನೋಹರ್, ಜಾಲಯ್ಯ, ರವಿ ಹಾಗೂ ಗೋವಿಂದಯ್ಯ ಎಂಬವರು ಶೀನುವನ್ನು ಅಪಹರಿಸಿ ತಾವು ಕೆಲಸ ಮಾಡುವ ಬೋಟಿಗೆ ಕೊಂಡೊಯ್ದಿದ್ದಾರೆ. ಈ ವೇಳೆ ಶೀನುವಿನ ಕೈಕಾಲುಗಳನ್ನು ಕಟ್ಟಿ, ಬೊಬ್ಬೆ ಹಾಕದಂತೆ ಬಾಯಿಮುಚ್ಚಿ ತಲೆಕೆಳಗಾಗಿ ಬೋಟಿನ ಆರಿಯ ಕೊಕ್ಕೆಗೆ ನೇತಾಡಿಸಿದ್ದಾರೆ. ಬಳಿಕ ಶೀನು ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕರು ಶೀನುವನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದುಷ್ಕೃತ್ಯದ ವೀಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಮಂಗಳೂರು ದಕ್ಷಿಣ ಪೊಲೀಸರು ಆರೋಪಿಗಳ ವಿರುದ್ದ ಡಿ.21ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ಡಿ.22ರಂದು ಸಂಜೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ

Next Post

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಫುಟ್‌ಪಾತ್‌ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ

Related Posts

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ
ಕ್ರೈಮ್ ನ್ಯೂಸ್

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
64
ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

November 14, 2025
54
Next Post
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಫುಟ್‌ಪಾತ್‌ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಫುಟ್‌ಪಾತ್‌ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ

Discussion about this post

Recent News

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

November 19, 2025
42
ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

November 19, 2025
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

November 19, 2025
ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

November 19, 2025
300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d