• About us
  • Contact us
  • Disclaimer
Tuesday, August 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

Coastal Times by Coastal Times
February 24, 2026
in ವಿದೇಶಿ ಸುದ್ದಿ
ಕೂಡಲೇ ಇರಾನ್ ಬಿಟ್ಟು ಹೊರಡಿ; ಅಮೆರಿಕದ ದಾಳಿಯ ಭೀತಿಯ ಬೆನ್ನಲ್ಲೇ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ
45
VIEWS
WhatsappTelegramShare on FacebookShare on Twitter

ನವದೆಹಲಿ: ಅಮೆರಿಕ ಹಾಗೂ ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಸಾರಿಗೆ ವ್ಯವಸ್ಥೆ ಮೂಲಕ ಇರಾನ್​ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

2026ರ ಜನವರಿ 5ರಂದು ಭಾರತ ಸರ್ಕಾರ ಹೊರಡಿಸಿದ ಸಲಹೆಯ ಮುಂದುವರಿಕೆಯಾಗಿ ಮತ್ತು ಇರಾನ್‌ನಲ್ಲಿನ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು (ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು) ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಇರಾನ್‌ನಿಂದ ಹೊರಹೋಗಲು ಸೂಚಿಸಲಾಗಿದೆ.

ಟೆಹ್ರಾನ್‌ನಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳು ಮತ್ತು ಇರಾನ್​ ಮೇಲೆ ಅಮೆರಿಕದ ಮಿಲಿಟರಿ ದಾಳಿಯ ಭೀತಿ ಹೆಚ್ಚುತ್ತಿರುವ ಮಧ್ಯೆ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ. ಕಳೆದ ತಿಂಗಳು ಪ್ರತಿಭಟನಾಕಾರರ ಮೇಲೆ ಟೆಹ್ರಾನ್ ದಮನಕಾರಿ ಕ್ರಮಗಳನ್ನು ಕೈಗೊಂಡ ನಂತರ ಇದೇ ಮೊದಲ ಬಾರಿಗೆ ಇರಾನ್‌ನ ಹಲವಾರು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಇರಾನ್‌ನಲ್ಲಿ ಈ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಉದ್ಯಮಿಗಳು, ಪ್ರವಾಸಿಗರು ವಿಮಾನ ಸೇರಿದಂತೆ ಲಭ್ಯವಿರುವ ಸಾರಿಗೆ ಮಾರ್ಗಗಳ ಮೂಲಕ ಇರಾನ್‌ನಿಂದ ಹೊರಹೋಗುವಂತೆ ಮತ್ತು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ಹೋಗಬಾರದು. ಸದಾ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು. ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾ ವಹಿಸಬೇಕೆಂದು ತಿಳಿಸಿದೆ.

ಭಾರತೀಯ ನಾಗರಿಕರು ತಮ್ಮ ಪಾಸ್‌ಪೋರ್ಟ್‌ಗಳು ಮತ್ತು ಇತರ ಪ್ರಮುಖ ಪ್ರಯಾಣದ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ತಿಳಿಸಲಾಗಿದೆ. ಇನ್ನೂ ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಅಧಿಕೃತ ಆನ್‌ಲೈನ್ ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಇದರ ಜೊತೆಗೆ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ. ಇರಾನ್ ಒಳಗೆ ಇಂಟರ್ನೆಟ್ ಸಮಸ್ಯೆಗಳಿದ್ದಲ್ಲಿ, ಭಾರತದ ಕುಟುಂಬಗಳು ಅವರ ಪರವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ತಕ್ಷಣದ ಸಹಾಯಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಹ ಹಂಚಿಕೊಳ್ಳಲಾಗಿದೆ. “ಭಾರತೀಯ ರಾಯಭಾರ ಕಚೇರಿಯ ತುರ್ತು ಸಂಪರ್ಕ ಸಹಾಯವಾಣಿಗಳನ್ನು ಕೆಳಗೆ ನೀಡಲಾಗಿದೆ: ಮೊಬೈಲ್ ಸಂಖ್ಯೆಗಳು: +989128109115; +989128109109; +989128109102; +989932179359. ಇಮೇಲ್: cons.tehran@mea.gov.in” ಎಂದು ಸರ್ಕಾರ ಹೇಳಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ; ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನ ಪೊಲೀಸರಿಂದ ರಕ್ಷಣೆ

Next Post

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

Related Posts

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ
ವಿದೇಶಿ ಸುದ್ದಿ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
20
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ
ವಿದೇಶಿ ಸುದ್ದಿ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
19
Next Post
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

'ಸಹಕಾರ ರತ್ನ" ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d