ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಯಿ ಕಾಲಿಗೆ ಹಾವು ಕಚ್ಚಿದಾಗ ಮಗಳು ರಕ್ತ ಹೀರಿ ತಾಯಿಯನ್ನು ರಕ್ಷಣೆ ಮಾಡಿದ ಘಟನೆಗೆ ದೊಡ್ಡ ತಿರುವು ದೊರಕಿದೆ. ಈ ಘಟನೆಯಲ್ಲಿ ಮಹಿಳೆಗೆ ತಾಯಿಗೆ ಕಚ್ಚಿರುವುದು ನಾಗರ ಹಾವು ಅಲ್ಲ ಮಲಬಾರ್ ಪಿಟ್ ವೈಪರ್ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ವಿಷಕಾರಿ ಆಗಿರುವ ಈ ಹಾವು ಬಹಳ ನಂಜುಕಾರಿ. ನಂಜು ಹೊರಸೂಸುವ ಈ ಹಾವಿನ ಕಡಿತದಿಂದ ಸಾವು ಸಂಭವ ಕಡಿಮೆಯಾದರೂ ಹಾವು ಕಡಿದ ಜಾಗದಲ್ಲಿ ನಂಜು ಊತ ಏರ್ಪಡುತ್ತದೆ. ತಾಯಿಗೆ ಚಿಕಿತ್ಸೆ ನೀಡಿದ ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದು, ಮಮತಾ ರೈ ಕಾಲಿಗೆ ಕಚ್ಚಿದ ಹಾವು ಮಲಬಾರ್ ಪಿಟ್ ವೈಪರ್ ಎನ್ನುವುದುನ್ನು ಸ್ಪಷ್ಟ ಪಡಿಸಿದ್ದಾರೆ.
ಅತ್ಯಂತ ಕಡಿಮೆ ಪ್ರಮಾಣದ ವಿಷ ಹೊಂದಿರುವ ಮಲಬಾರ್ ಪಿಟ್ ವೈಪರ್ನ ಕಡಿತಕ್ಕೊಳಗಾದ ತಾಯಿ ಮಮತಾ ರೈ ಒಂದು ದಿನದ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.ಅತ್ಯಂತ ಕಡಿಮೆ ಪ್ರಮಾಣದ ವಿಷ ಹೊಂದಿರುವ ಮಲಬಾರ್ ಪಿಟ್ ವೈಪರ್ನ ಕಡಿತಕ್ಕೊಳಗಾದ ತಾಯಿ ಮಮತಾ ರೈ ಒಂದು ದಿನದ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.
ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ಘಟನೆ ನಡೆದಿದ್ದು, ಮೊದಲು ನಾಗರಹಾವು ಕಡಿತಕ್ಕೊಳಗಾದ ತಾಯಿಗೆ ಪುತ್ರಿಯೇ ಬಾಯಿಯಿಂದ ವಿಷ ಹೀರಿ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿರುವ ಅಪರೂಪದ ಘಟನೆ ಎಂದು ಸುದ್ದಿ ಯಾಗಿತ್ತು. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿನಿ, ಸ್ಕೌಟ್ಸ್ ಮತ್ತು ಗೈಡ್ಸ್ ನ ರೇಂಜರ್ ಕೂಡ ಆಗಿರುವ ಶ್ರಮ್ಯಾ ರೈ ತನ್ನ ತಾಯಿ ಕೆಯ್ಯೂರು ಗ್ರಾ.ಪಂ. ಸದಸ್ಯೆಯಾಗಿರುವ ಮಮತಾ ರೈ ಅವರನ್ನು ಅಪಾಯದಿಂದ ಪಾರು ಮಾಡಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post