• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲದಲ್ಲಿ ನಿರ್ಮಾಣವಾಗಲಿದೆ 50 ಕೋಟಿ ರೂ ವೆಚ್ಚದಲ್ಲಿ ತಾಜ್ ಮಹಲ್ ಶೈಲಿಯ ಭವ್ಯ ಮಸೀದಿ

Coastal Times by Coastal Times
May 24, 2025
in ಕರಾವಳಿ
ಉಳ್ಳಾಲದಲ್ಲಿ ನಿರ್ಮಾಣವಾಗಲಿದೆ 50 ಕೋಟಿ ರೂ ವೆಚ್ಚದಲ್ಲಿ ತಾಜ್ ಮಹಲ್ ಶೈಲಿಯ ಭವ್ಯ ಮಸೀದಿ
66
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿರುವ ಪ್ರಸಿದ್ಧ ತಾಜ್ ಮಹಲ್​ನ ವಾಸ್ತುಶಿಲ್ಪ ಶೈಲಿಯನ್ನು ಪ್ರತಿಬಿಂಬಿಸುವ ಭವ್ಯ ಮಸೀದಿ ಶೀಘ್ರದಲ್ಲೇ ತಲೆ ಎತ್ತಲಿದೆ. 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಸೀದಿ ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಮತ್ತು ಧಾರ್ಮಿಕ ವೈವಿಧ್ಯಕ್ಕೆ ಹೊಸ ಆಯಾಮ ನೀಡಲಿದೆ.

ಮಸೀದಿಗೆ ದುಬೈ, ಕರ್ನಾಟಕ, ಗೋವಾ, ಆಂಧ್ರ ಪ್ರದೇಶದ ವಾಸ್ತುಶಿಲ್ಪಿಗಳು ನೀಲನಕ್ಷೆ ಸಿದ್ದಪಡಿಸಿದ್ದಾರೆ. 8 ಮಿನಾರ್, 6 ಗುಂಬಜ್, 5 ಪ್ರವೇಶದ್ವಾರಗಳನ್ನು ನಿರ್ಮಿಸಲಾಗುತ್ತಿದೆ. ನೆಲ ಹಾಗೂ ಮೊದಲ ಮಹಡಿ 14 ಅಡಿ, ಎರಡನೇ ಅಂತಸ್ತು 12 ಅಡಿ ಇರಲಿದ್ದು, ಒಟ್ಟು 40 ಅಡಿಯ ಕಟ್ಟಡ ನಿರ್ಮಾಣವಾಗಲಿದೆ. ನೆಲ ಹಾಗೂ ಎರಡೂ ಅಂತಸ್ತಿನಲ್ಲಿ ಪ್ರಾರ್ಥನೆಗೆ, ನೆಲಮಹಡಿಯಲ್ಲಿ ಧರ್ಮಗುರುಗಳ ಪ್ರವಚನಕ್ಕೆ ಸ್ಥಳಾವಕಾಶ ಕಲ್ಪಿಸಲಾಗುತ್ತಿದೆ. ಇದು ಕರ್ನಾಟಕದ ಅತಿದೊಡ್ಡ ಮಸೀದಿಯಾಗಲಿದ್ದು 10,000 ಜನರಿಗೆ ಒಮ್ಮೆಗೆ ಸೇರಲು ಅವಕಾಶ ಕಲ್ಪಿಸಲಿದೆ.

ಗೋಡೆಗಳಿಗೆ ಪೈಂಟಿಂಗ್ ಬದಲು ಒಳಾಂಗಣ ಹಾಗೂ ಹೊರಾಂಗಣಕ್ಕೆ ಅಮೃತಶಿಲೆ ಬಳಸಲು ನಿರ್ಧರಿಸಲಾಗಿದೆ. ಮೆರುಗು ಹೆಚ್ಚಿಸಲು ಮುಂಭಾಗದಲ್ಲಿ 40 ಅಡಿ ಅಗಲ ಮತ್ತು 70 ಅಡಿ ಉದ್ದದ ಒಂದೂವರೆ ಅಡಿ ಆಳದ ಕೊಳ ನಿರ್ಮಿಸಲಾಗುತ್ತದೆ. ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾದ ಆವರಣದಲ್ಲಿ ಮಸೀದಿ ನಿರ್ಮಾಣವಾಗಲಿದೆ.

ಉಳ್ಳಾಲ ದರ್ಗಾದ ಅಧ್ಯಕ್ಷ ಹನೀಫ್ ಹಾಜಿ ಅವರು ಮಾತನಾಡಿ, “ತಾಜ್ ಮಹಲ್ ಹೋಲುವಂತೆ ಉಳ್ಳಾಲದಲ್ಲಿ ಮಸೀದಿ ನಿರ್ಮಾಣಕ್ಕೆ ಸಿದ್ದತೆಗಳು ನಡೆದಿವೆ. ಉಳ್ಳಾಲ ಜಮಾತ್​ನಲ್ಲಿ ಕೋಟೆಪುರದಿಂದ ಮದನಿನಗರ, ಕುಂಪಲ, ಕಲ್ಲಾಪು ಸೇರಿ 28 ಮೊಹಲ್ಲ, 34 ಮಸೀದಿ ಹಾಗೂ 34 ಮದರಸಾಗಳಿವೆ. ಸಾವಿರಾರು ಮನೆಗಳಿದ್ದು, ಪ್ರತೀ ಮನೆಯಿಂದ ಅವರವರ ಇಚ್ಛಾನುಸಾರ ದೇಣಿಗೆ ಸ್ವೀಕರಿಸಿ ಮುಂದಿನ 2 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಿದ್ದೇವೆ” ಎಂದು ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮನೆ ಬಿಟ್ಟು ಹೋದ ಪತ್ನಿ; ಮದುವೆ ಮಾಡಿಸಿದ್ದ ಸ್ವಂತ ಚಿಕ್ಕಪ್ಪನನ್ನೇ ಹತ್ಯೆಗೈದ ಮುಸ್ತಫಾ

Next Post

ಮಂಗಳೂರು: ಸ್ಟಾನ್ಲಿ ಲೈಫ್‌ ಸ್ಟೈಲ್ಸ್, ವಿಕೆ ಗ್ರೂಪ್ ಜೊತೆಗಿನ ಪಾಲುದಾರಿಕೆಯಲ್ಲಿ ನಗರದ ಮೊದಲ ಮಳಿಗೆ ನಾಳೆ ಉದ್ಘಾಟನೆ

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
54
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
38
Next Post
ಮಂಗಳೂರು: ಸ್ಟಾನ್ಲಿ ಲೈಫ್‌ ಸ್ಟೈಲ್ಸ್, ವಿಕೆ ಗ್ರೂಪ್ ಜೊತೆಗಿನ ಪಾಲುದಾರಿಕೆಯಲ್ಲಿ ನಗರದ ಮೊದಲ ಮಳಿಗೆ ನಾಳೆ ಉದ್ಘಾಟನೆ

ಮಂಗಳೂರು: ಸ್ಟಾನ್ಲಿ ಲೈಫ್‌ ಸ್ಟೈಲ್ಸ್, ವಿಕೆ ಗ್ರೂಪ್ ಜೊತೆಗಿನ ಪಾಲುದಾರಿಕೆಯಲ್ಲಿ ನಗರದ ಮೊದಲ ಮಳಿಗೆ ನಾಳೆ ಉದ್ಘಾಟನೆ

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
54
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d