• About us
  • Contact us
  • Disclaimer
Wednesday, August 27, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಳ್ತಂಗಡಿಯಲ್ಲಿ ವೃದ್ಧೆಯನ್ನು ಕೊಲೆಗೈದು, ಚಿನ್ನಾಭರಣ ಸಹಿತ ನಗದು ದರೋಡೆ: ಆರೋಪಿ ಅರೆಸ್ಟ್​​

Coastal Times by Coastal Times
July 24, 2022
in ಕ್ರೈಮ್ ನ್ಯೂಸ್
ಬೆಳ್ತಂಗಡಿಯಲ್ಲಿ ವೃದ್ಧೆಯನ್ನು ಕೊಲೆಗೈದು, ಚಿನ್ನಾಭರಣ ಸಹಿತ ನಗದು ದರೋಡೆ: ಆರೋಪಿ ಅರೆಸ್ಟ್​​
161
VIEWS
WhatsappTelegramShare on FacebookShare on Twitter

ಬೆಳ್ತಂಗಡಿ : ದುಷ್ಕರ್ಮಿಗಳು ಊಟಕ್ಕೆಂದು ಕುಳಿತಿದ್ದ ವೃದ್ಧೆಯನ್ನು ಹತ್ಯೆಗೈದು ಚಿನ್ನಾಭರಣ ದೋಚಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ. ಗ್ರಾಮದ ನಿವಾಸಿ ಅಕ್ಕು (85) ಮೃತರು. ಹಾಡಹಗಲೇ ವೃದ್ಧೆಯ ಮೇಲೆ ಹಲ್ಲೆ ಮಾಡಿ ಅವರ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದೋಚಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಕ್ಕು ಅವರು ತಮ್ಮ ಮಗ ಡೀಕಯ್ಯ, ಸೊಸೆ ಲಲಿತಾ, ಮಗಳು ದೇವಕಿ ಹಾಗೂ ಮೊಮ್ಮಗಳೊಂದಿಗೆ ವಾಸವಿದ್ದರು. ಮಗ-ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ ಅವರು ಮನೆಯಲ್ಲಿ ಇರಲಿಲ್ಲ. ನಂತರ ಹೊರಗೆ ಬಂದು ನೋಡಿದಾಗ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡುಬಂದಿದೆ. ಬಳಿಕ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಚಿಂತಾಜನಕ ಸ್ಥಿತಿಯಲ್ಲಿ ಒದ್ದಾಡುತಿದ್ದರು. ತಕ್ಷಣ ಆಸ್ಪತ್ರೆಗೆ ಕೊಂಡು ಹೋಗಲು ವಾಹನಕ್ಕೆ ತಿಳಿಸಿದರೂ ವಾಹನ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಮೃತದೇಹವನ್ನು ಪರಿಶೀಲಿಸಿದಾಗ ಕಿವಿಯಲ್ಲಿದ್ದ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದರೋಡೆ ಮಾಡಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬಂದ ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದ ಮೂಲಕ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಿದ್ದಾರೆ.

ಆರೋಪಿ ಬಂಧನ: ವೃದ್ಧೆ ಕೊಲೆಗೈದು ಚಿನ್ನಾಭರಣ ದೋಚಿದ ಆರೋಪದಡಿ ಅಶೋಕ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಶನಿವಾರ ಮಧ್ಯಾಹ್ನ ಘಟನೆಯ ನಂತರ ರಸ್ತೆಯಲ್ಲಿ ನಡೆದುಕೊಂಡು ಬೆಳಾಲಿಗೆ ಹೋಗುವುದನ್ನು ವ್ಯಕ್ತಿಯೊಬ್ಬರು ನೋಡಿದ್ದಾರೆ. ಈ ಬಗ್ಗೆ ಸಂಶಯಗೊಂಡ ಅವರು ಮನೆಯವರಿಗೆ ಮಾಹಿತಿ ನೀಡಿದಾಗ ಅವರು ಫೋನ್​​ ಮಾಡಿ ಎಲ್ಲಿದ್ದಿ ಎಂದು ವಿಚಾರಿಸಿದಾಗ ನಾರಾವಿಯಲ್ಲಿ ಇದ್ದೇನೆ ಎಂಬ ಸುಳ್ಳು ಮಾಹಿತಿಯನ್ನು ನೀಡಿದ್ದಾನೆ. ಇದರಿಂದ ಇನ್ನಷ್ಟು ಅನುಮಾನಗೊಂಡ ಮನೆಯವರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಫೋನ್​​ ಲೊಕೇಶನ್ ಪರೀಕ್ಷಿಸಿದಾಗ ಸಮೀಪದಲ್ಲೇ ಸುತ್ತಾಡಿದ ಮಾಹಿತಿ ಲಭ್ಯವಾಗಿದೆ.   ವೃದ್ಧೆಯ ಸಂಬಂಧಿಯಾಗಿದ್ದ ಆತ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಐಸ್ ಕ್ರೀಮ್ ವಾಹನ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಕುಡಿತದ ದಾಸನಾಗಿದ್ದ. ಮನೆಯವರ ಚಲನವಲನದ ಬಗ್ಗೆ ಅರಿವಿದ್ದ ಈತ ಮನೆಯವರು ಕೆಲಸಕ್ಕೆ ಹಾಗೂ ಮಕ್ಕಳು ಶಾಲೆಗೆ ಹೋಗಿದ್ದ ಸಮಯ ನೋಡಿ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಕಿಸ್ಸಿಂಗ್ ವಿಡಿಯೋ ಪ್ರಕರಣ ; ಮತ್ತೆ ಮೂವರು ವಿದ್ಯಾರ್ಥಿಗಳ ಬಂಧನ

Next Post

ಬೆಂಗಳೂರು: ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
50
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
79
Next Post
ಬೆಂಗಳೂರು: ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ

ಬೆಂಗಳೂರು: ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
35
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
65
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d