ಮಂಗಳೂರು, ಜು 24 : ಭಾರಿ ಮಳೆ ಹಿನ್ನಲೆ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಿದೆ.
ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ (ನಾಳೆ) ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಸಾರಲಾಗಿದೆ. ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ. ಅಲ್ಲದೆ, ಸಾರ್ವಜನಿಕರು ನದಿ ಪಾತ್ರಗಳಲ್ಲಿ ಜಾಗ್ರತೆ ಇರಬೇಕು. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಸನ್ನದ್ಧ ಇರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
Discussion about this post