• About us
  • Contact us
  • Disclaimer
Friday, October 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ

Coastal Times by Coastal Times
July 24, 2025
in ರಾಷ್ಟ್ರೀಯ ಸುದ್ದಿ
ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ
51
VIEWS
WhatsappTelegramShare on FacebookShare on Twitter

ಮಾಸ್ಕೋ: ಸುಮಾರು 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಗುರುವಾರ ರಷ್ಯಾದ ಪೂರ್ವ ಪ್ರದೇಶ ಅಮುರ್‌ ಎಂಬ ಸ್ಥಳದಲ್ಲಿ ಪತನಗೊಂಡಿದೆ. ಬದುಕುಳಿದವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೈಬೀರಿಯಾ ಮೂಲದ ಅಂಗಾರ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ AN-24 ಸಂಖ್ಯೆಯ ವಿಮಾನ ಇದಾಗಿದ್ದು, ರಷ್ಯಾ-ಚೀನಾದ ಗಡಿ ಪ್ರದೇಶವಾದ ಬ್ಲಾಗೊವೆಶ್‌ಚೆನ್ಸ್ಕ್ ನಗರದಿಂದ ಟಿಂಡಾ ಪಟ್ಟಣಕ್ಕೆ ತೆರಳುತ್ತಿತ್ತು. ಈ ವೇಳೆ ಸ್ಥಳೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ (0400 GMT) ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿರುವುದು ತಿಳಿದುಬಂದಿದೆ.

ಸುದ್ದಿ ತಿಳಿದು ರಕ್ಷಣಾ ಹೆಲಿಕಾಪ್ಟರ್ ತೆರಳಿದ್ದು, ಟಿಂಡಾದಿಂದ 15 ಕಿಲೋಮೀಟರ್ ದೂರದಲ್ಲಿರುವ ಇಳಿಜಾರು ಪ್ರದೇಶದಲ್ಲಿ ವಿಮಾನದ ಅವಶೇಷಗಳನ್ನು ಪತ್ತೆ ಮಾಡಿದೆ. ವಿಮಾನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ವಿಮಾನದಲ್ಲಿ ಐರು ಮಕ್ಕಳು ಸೇರಿದಂತೆ 43 ಪ್ರಯಾಣಿಕರು ಮತ್ತು ಆರು ಜನ ಸಿಬ್ಬಂದಿ ಇದ್ದರು ಎಂದು ಪ್ರದೇಶದ ಗವರ್ನರ್ ವಾಸಿಲಿ ಓರ್ಲೋವ್ ಮಾಹಿತಿ ನೀಡಿದ್ದಾರೆ.

ರಷ್ಯಾದ ತನಿಖಾಧಿಕಾರಿಗಳು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ದಟ್ಟ ಹಾಗೂ ಇಳಿಜಾರಿನಿಂದ ಕೂಡಿರುವ ಅರಣ್ಯ ಪ್ರದೇಶದಲ್ಲಿ ವಿಮಾನದ ಅವಶೇಷಗಳಿಂದ ಹೊಗೆ ಬರುತ್ತಿರುವುದು ಅದರಲ್ಲಿ ಸೆರೆಯಾಗಿದೆ.

25 ಜನರು ಮತ್ತು ಐದು ಯುನಿಟ್ ಉಪಕರಣಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಸಿಬ್ಬಂದಿಗಳೊಂದಿಗೆ ನಾಲ್ಕು ವಿಮಾನಗಳು ಅಲ್ಲಿಗೆ ತೆರಳಲು ಸಿದ್ಧವಾಗಿವೆ. ಅರಣ್ಯ ಪ್ರದೇಶವಾಗಿದ್ದರಿಂದ ಸ್ಥಳಕ್ಕೆ ಹೋಗುವುದು ಕಷ್ಟಕರವಾಗಿದೆ. ಆದರೂ, ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಲಿವೆ. ಬದುಕುಳಿದವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ರಕ್ಷಣಾ ಸಿಬ್ಬಂದಿಯೊಬ್ಬರು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ರಷ್ಯಾದ ಇರ್ಕುಟ್ಸ್ಕ್ ನಗರದಲ್ಲಿರುವ ಅಂಗಾರ ಏರ್ಲೈನ್ಸ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ರಷ್ಯಾದ ಫಾರ್ ಈಸ್ಟರ್ನ್ ಟ್ರಾನ್ಸ್‌ಪೋರ್ಟ್ ಪ್ರಾಸಿಕ್ಯೂಟರ್ ಕಚೇರಿ ಈ ಬಗ್ಗೆ ಖಚಿತಪಡಿಸಿದೆ. ಟಿಂಡಾ ಪಟ್ಟಣಕ್ಕೆ ತೆರಳುತ್ತಿದ್ದಾಗ ವಿಮಾನ ಅಪಘಾತಕ್ಕೀಡಾಗಿದೆ. ಅದಕ್ಕೂ ಮುನ್ನ ವಿಮಾನವು ಎರಡನೇ ಲ್ಯಾಂಡಿಂಗ್‌ಗೆ ತೆರಳಿತು. ನಂತರ ಸಂಪರ್ಕ ಕಡಿತಗೊಂಡಿತು. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಕಚೇರಿ ತಿಳಿಸಿದೆ.

ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ತಿಳಿದು ಬಂದಿಲ್ಲ. ಈ ವಿಮಾನವನ್ನು ಸುಮಾರು 50 ವರ್ಷಗಳ ಹಿಂದೆ ತಯಾರಿಸಲಾಗಿತ್ತು. 2021 ರಲ್ಲಿ, ವಿಮಾನದ ವಾಯು ಯೋಗ್ಯತಾ ಪ್ರಮಾಣಪತ್ರವನ್ನು 2036ರ ವರೆಗೆ ವಿಸ್ತರಿಸಲಾಗಿತ್ತು ಎಂದು ರಾಜ್ಯ TASS ಸುದ್ದಿ ಸಂಸ್ಥೆ ವರದಿ ಮಾಡಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಿಂದ 20 ಸಾವಿರ ರೂ. ಸುಲಿಗೆ ನಾಲ್ವರ ವಿರುದ್ಧ KCOCA ಜಾರಿ

Next Post

ಭಾರತ vs ಇಂಗ್ಲೆಂಡ್​ ನಡುವಿನ 3 ಏಕದಿನ, 5 ಟಿ20 ಸರಣಿಗೆ ದಿನಾಂಕ ಪ್ರಕಟ

Related Posts

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
97
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ
ರಾಷ್ಟ್ರೀಯ ಸುದ್ದಿ

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

September 30, 2025
103
Next Post
ಭಾರತ vs ಇಂಗ್ಲೆಂಡ್​ ನಡುವಿನ 3 ಏಕದಿನ, 5 ಟಿ20 ಸರಣಿಗೆ ದಿನಾಂಕ ಪ್ರಕಟ

ಭಾರತ vs ಇಂಗ್ಲೆಂಡ್​ ನಡುವಿನ 3 ಏಕದಿನ, 5 ಟಿ20 ಸರಣಿಗೆ ದಿನಾಂಕ ಪ್ರಕಟ

Discussion about this post

Recent News

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
14
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
118
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d