• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮರಣ ದೃಢೀಕರಣ ಪತ್ರಕ್ಕಾಗಿ ಲಂಚದ ಬೇಡಿಕೆ, 13 ಸಾವಿರ ಕೇಳಿದ ಚೇಳ್ಯಾರು ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ

Coastal Times by Coastal Times
November 24, 2023
in ಕರಾವಳಿ
ಮರಣ ದೃಢೀಕರಣ ಪತ್ರಕ್ಕಾಗಿ ಲಂಚದ ಬೇಡಿಕೆ, 13 ಸಾವಿರ ಕೇಳಿದ ಚೇಳ್ಯಾರು ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ
38
VIEWS
WhatsappTelegramShare on FacebookShare on Twitter

ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ‌

ದೂರುದಾರ ವ್ಯಕ್ತಿ ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರಿನ ಚೇಳ್ಯಾರು ಗ್ರಾಮದಲ್ಲಿ 42 ಸೆಂಟ್ಸ್ ಜಾವವಿದ್ದು ಅದರಲ್ಲಿ ಐದು ಸೆಂಟ್ಸ್ ಜಾಗವನ್ನು ನೆರೆಮನೆವರಿಗೆ ಮಾರಾಟ ಮಾಡಲು ನಿರ್ಧರಿಸಿದ್ದರು ಇದಕ್ಕೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಚಾರಿಸಿದ ವೇಳೆ ಅಜ್ಜನ ಮರಣ ಪ್ರಮಾಣ ಪತ್ರ ಜೊತೆಗೆ ಸಂತತಿ ನಕ್ಷೆ ತರುವಂತೆ ಹೇಳಿದ್ದಾರೆ.

ಅದರಂತೆ ವ್ಯಕ್ತಿ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಅಜ್ಜನ ಮರಣ ಪ್ರಮಾಣ ಪಾತ್ರ ಹಾಗೂ ಸಂತತಿ ನಕ್ಷೆ ಮಾಡಲು ಚೇಳ್ಯಾರು ಗ್ರಾಮ ಕರಣಿಕರ ಕಛೇರಿಯುಗೆ ತೆರಳಿ ಅರ್ಜಿ ಸಲ್ಲಿಸಿದ್ದಾರೆ. ಆ ಬಳಿಕ ಎರಡು ಮೂರೂ ಬಾರಿ ಕಚೇರಿಗೆ ತೆರಳಿ ಅರ್ಜಿಯ ವಿಚಾರವಾಗಿ ಗ್ರಾಮ ಆಡಳಿತ ಅಧಿಕಾರಿ ಶ್ರೀ ವಿಜಿತ್ ಅವರನ್ನು ವಿಚಾರಿಸಿದಾಗ ಯಾವುದೇ ಉತ್ತರ ಸಿಗಲಿಲ್ಲ ಆ ಬಳಿಕ ನವೆಂಬರ್ 20 ರಂದು ಗ್ರಾಮ ಆಡಳಿತ ಅಧಿಕಾರಿ ವಿಜಿತ್ ಅವರ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ನಿಮ್ಮ ಅಜ್ಜನ ಮರಣ ದೃಡೀಕರಣ ಪತ್ರ ರೆಡಿ ಇದೆ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಬಂದು ತೆಗೆದುಕೊಳ್ಳಿ ಹಾಗೆಯೇ ಬರುವಾಗ ಹದಿನೈದು ಸಾವಿರ ರೂಪಾಯಿಗಳನ್ನು ತರುವಂತೆ ವಿಜಿತ್ ಹೇಳಿದ್ದಾರೆ ಇದಕ್ಕೆ ಪ್ರತಿಯಾಗಿ ಅರ್ಜಿದಾರ ವ್ಯಕ್ತಿ ತನ್ನ ಬಳಿ ಅಷ್ಟೊಂದು ದುಡ್ಡು ಇಲ್ಲ ಎಂದು ಹೇಳಿದ್ದಾರೆ ಆದರೆ ಅದಕ್ಕೆ ಪ್ರತಿಕ್ರಿಯಿಸಿದ ವಿಜಿತ್ ಇವತ್ತು ಆಗದಿದ್ದರೂ ಪರವಾಗಿಲ್ಲ ನಾಳೆಯಾದರೂ ತಗೊಂಡು ಬನ್ನಿ ಎಂದು ಹೇಳಿದ್ದಾರೆ.

ಇದಾದ ಬಳಿಕ ನವೆಂಬರ್ 22 ರಂದು ಮತ್ತೆ ಗ್ರಾಮ ಕರಣಿಕರ ಕಚೇರಿಗೆ ತೆರಳಿ ಮರಣ ಪ್ರಮಾಣ ಪತ್ರ ಪಡೆಯಲು ಹೋದಾಗ ಗ್ರಾಮ ಆಡಳಿತ ಅಧಿಕಾರಿ ವಿಜಿತ್ ಮರಣ ಪ್ರಮಾಣ ಪತ್ರ ನೀಡಿ ಹಣ ಕೊಡುವಂತೆ ಕೇಳಿಕೊಂಡಿದ್ದಾರೆ ಈ ವೇಳೆ ಇಷ್ಟೊಂದು ದುಡ್ಡು ನನ್ನ ಬಳಿ ಇಲ್ಲ ಸ್ವಲ್ಪ ಕಡಿಮೆ ಮಾಡಿ ಎಂದಿದ್ದಕ್ಕೆ ಎರಡು ಸಾವಿರ ಕಡಿಮೆ ಮಾಡಿ ಹದಿಮೂರು ಸಾವಿರ ನೀಡುವಂತೆ ಕೇಳಿಕೊಂಡಿದ್ದಾರೆ.

ಈ ವಿಚಾರವನ್ನು ಲೋಕಾಯುಕ್ತ ಪೊಲೀಸರಿಗೆ ದೂರಿನ ಮೂಲಕ ನೀಡಿದ್ದು ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು ಇಂದು ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ತೆರಳಿದ್ದಾರೆ ಅದರಂತೆ ದೂರುದಾರ ವ್ಯಕ್ತಿ ಬೆಳಿಗ್ಗೆ ಕಚೇರಿಗೆ ತೆರಳಿ ಅಧಿಕಾರಿಗೆ ದುಡ್ಡು ನೀಡುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಲಂಚದ ನೀಡಿದ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಚಲುವರಾಜು ಬಿ. ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ. ಸುರೇಶ ಕುಮಾರ್ ಪಿ. ಕಾರ್ಯಾಚರಣೆಯಲ್ಲಿ ಇದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮುಡಿಪು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, 4.95 ಲಕ್ಷರೂ. ಮೌಲ್ಯದ ಸೊತ್ತು ವಶ

Next Post

ಉಡುಪಿ ; ಪೆಟ್ರೋಲ್ ಪಂಪ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್ ಲಾರಿ, ಒಬ್ಬ ಸ್ಥಳದಲ್ಲೇ ಮೃತ್ಯು

Related Posts

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
ಕರಾವಳಿ

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
39
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
ಕರಾವಳಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
Next Post
ಉಡುಪಿ ; ಪೆಟ್ರೋಲ್ ಪಂಪ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್ ಲಾರಿ, ಒಬ್ಬ ಸ್ಥಳದಲ್ಲೇ ಮೃತ್ಯು

ಉಡುಪಿ ; ಪೆಟ್ರೋಲ್ ಪಂಪ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್ ಲಾರಿ, ಒಬ್ಬ ಸ್ಥಳದಲ್ಲೇ ಮೃತ್ಯು

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
39
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d