ಮಂಗಳೂರು: ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ‘ಅಮೃತ ಪ್ರಕಾಶ’ ಪತ್ರಿಕೆಯ ವತಿಯಿಂದ ನಡೆದ 35ನೇ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಗುರುವಾರ ಕವಯತ್ರಿ ಸ್ವಪ್ನಾ ದಿನಕರ್ ಅವರ ‘ಹೃದಯದ ಪಿಸುಮಾತು’ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.
ಪತ್ರಕರ್ತ ಮನೋಹರ್ ಪ್ರಸಾದ್ ಕೃತಿ ಬಿಡುಗಡೆಗೊಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕವಯತ್ರಿ ಅರುಣಾ ನಾಗರಾಜ್ ವಂದಿಸಿದರು.
Discover more from Coastal Times Kannada
Subscribe to get the latest posts sent to your email.
Discussion about this post