• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಪೂರ್ವ ನಾಟ್ಯ ಶೈಲಿಯಿಂದ ವರ್ಲ್ಡ್ ರೆಕಾರ್ಡ್ ಮಾಡಿರುವ ಮಂಗಳೂರಿನ ರೆಮೋನಾ ಪಿರೇರಾಗೆ ರಾಷ್ಟ್ರೀಯ ಬಾಲ ಪುರಸ್ಕಾರ

Coastal Times by Coastal Times
January 25, 2022
in ಕರಾವಳಿ
ಅಪೂರ್ವ ನಾಟ್ಯ ಶೈಲಿಯಿಂದ ವರ್ಲ್ಡ್ ರೆಕಾರ್ಡ್ ಮಾಡಿರುವ ಮಂಗಳೂರಿನ ರೆಮೋನಾ ಪಿರೇರಾಗೆ ರಾಷ್ಟ್ರೀಯ ಬಾಲ ಪುರಸ್ಕಾರ
30
VIEWS
WhatsappTelegramShare on FacebookShare on Twitter

ಮಂಗಳೂರು : ನಗರದ ಪದುವ ಶಾಲೆಯ ವಿದ್ಯಾರ್ಥಿನಿ, ಭರತನಾಟ್ಯ ಕಲಾವಿದೆ ರೆಮೋನಾ ಇವೆಟ್ ಪಿರೇರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು.‌

ದೆಹಲಿಯಿಂದ ನೇರವಾಗಿ ಮಂಗಳೂರಿನ ಜಿಪಂ ಸಭಾಂಗಣದಲ್ಲಿ ಕುಳಿತಿದ್ದ 17 ವರ್ಷದ ಬಾಲ ಕಲಾವಿದೆ ರೆಮೋನಾ ಅವರನ್ನು ಪ್ರಧಾನಿ ಮೋದಿ ವರ್ಚುವಲ್ ಮೂಲಕ ಮಾತನಾಡಿಸಿದ್ದು, ಸಣ್ಣ ವಯಸ್ಸಿನಲ್ಲಿಯೇ ಅಪರಿಮಿತ ಸಾಧನೆ ಮಾಡಿರುವುದಕ್ಕಾಗಿ ಅಭಿನಂದಿಸಿದ್ದಾರೆ. ಕೂಚಿಪುಡಿ, ಕಥಕ್, ಸೆಮಿ ಕ್ಲಾಸಿಕಲ್, ಪಾಶ್ಚಾತ್ಯ, ಯಕ್ಷಗಾನ ಹೀಗೆ ನಾನಾ ರೀತಿಯ ನಾಟ್ಯ ಪ್ರಕಾರಗಳನ್ನು ಮಾಡುವ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಗಿಟ್ಟಿಸಿರುವ ರೆಮೋನಾ ಮುಂಬೈ, ಹೈದರಾಬಾದ್, ಬೆಂಗಳೂರು, ಪುಣೆ, ದೆಹಲಿ ಹೀಗೆ ದೇಶದ ಬಹುತೇಕ ನಗರಗಳಲ್ಲಿ ಸ್ಟೇಜ್ ಪ್ರೋಗ್ರಾಮ್ ನೀಡಿದ್ದಾರೆ. ತಮ್ಮ ಅಪೂರ್ವ ರೀತಿಯ ನಾಟ್ಯಗಳಿಂದಾಗಿ ಜನ ಮೆಚ್ಚುಗೆ ಪಡೆದಿದ್ದಾರೆ.

3 ವರ್ಷದಿಂದಲೇ ನೃತ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದೀರಿ, ಹೇಗೆ ಅಭ್ಯಾಸ ಮಾಡಿದ್ದೀರಿ? ನೀವೇ ಸ್ವಯಂ ಆಗಿ ಅಭ್ಯಾಸ ಮಾಡುತ್ತಿದ್ದಿರಾ ಅಥವಾ ಹೆತ್ತವರು ಕಾಳಜಿ ವಹಿಸಿದ್ದರೇ ಎಂಬ ಪ್ರಧಾನಿಯವರ ಪ್ರಶ್ನೆಗೆ ನನ್ನ ತಾಯಿಯವರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ತುಂಬಾ ಆಸಕ್ತಿ ಇತ್ತು. ಹಾಗಾಗಿ ನಾನು ಇದರಲ್ಲಿ ಆಸಕ್ತಿ ಬೆಳೆಸಿಕೊಂಡೆ ಎಂದರು.

ಚಿಕ್ಕಂದಿನಿಂದಲೇ ಏನಾದರೂ ಕಠಿಣ ಪರಿಸ್ಥಿತಿ ಎದುರಾಗಿತ್ತೇ ಎಂಬ ಮೋದಿಯವರ ಪ್ರಶ್ನೆಗೆ ಉತ್ತರಿಸಿದ ರೆಮೋನಾ, ಚಿಕ್ಕಂದಿನಲ್ಲೇ ತಂದೆಯವರನ್ನು ಕಳೆದುಕೊಂಡೆ, ಹಾಗಾಗಿ ತಾಯಿಯವರು ಬಹಳ ಕಷ್ಟಪಟ್ಟರು. ಕಷ್ಟದಲ್ಲೇ ನನ್ನನ್ನು ಓದಿಸಿದ್ದರು, ನೃತ್ಯತರಬೇತಿಗೆ ಸೇರಿಸಿದ್ದರು ಎಂದರು. ಈ ಸಂದರ್ಭ ಮೋದಿಯವರು ರೆಮೋನಾ ತಾಯಿಗೂ ನಮಸ್ಕರಿಸಿದರು.

‘2022ರ ಸಾಲಿನ ರಾಷ್ಟ್ರೀಯ ಬಾಲಪುರಸ್ಕಾರ (ಕಲೆ ಮತ್ತು ಸಂಸ್ಕೃತಿ ವಿಭಾಗ)ಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ರೆಮೋನಾ. ಈಕೆ  ಮಂಗಳೂರಿನ ಪದುವ ಪಿಯು ಕಾಲೇಜಿನ ವಿದ್ಯಾರ್ಥಿನಿ. 16 ರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ 20 ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮಂಗಳೂರಿನ ನೃತ್ಯಗುರು ಡಾ.ಶ್ರೀವಿದ್ಯಾ ಮುರಳೀಧರ್‌ ಅವರ ಶಿಷ್ಯೆ. ಈ ಪ್ರಶಸ್ತಿಯು 1 ಲಕ್ಷ ರೂ. ಬಹುಮಾನವನ್ನೊಳಗೊಂಡಿದೆ’.

ನಾಟ್ಯ ಪ್ರಕಾರದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದ ತಾಯಿ ಗ್ಲಾಡಿಸ್ ಅವರು ಮಗಳಿಗೆ ಮೂರೂವರೆ ವಯಸ್ಸಿನಿಂದಲೇ ಭರತ ನಾಟ್ಯದ ಹೆಜ್ಜೆಗಳನ್ನು ಕಲಿಸಿಕೊಟ್ಟಿದ್ದರು. ಆಬಳಿಕ ಪ್ರಮೋದ್ ಕೋಡಿಕಲ್, ಪ್ರೀತೇಶ್ ಕುಮಾರ್, ನಿಕಿ ಪಿಂಟೋ, ಮನೋಜ್ ಕರಿಪಳ್ಳ, ಸಂಧ್ಯಾ ಕೆ. ಅವರಿಂದ ನಾಟ್ಯ ಪ್ರಕಾರಗಳನ್ನು ಕಲಿತಿದ್ದರು. ನಂತೂರಿನ ಪದುವಾ ಕಾಲೇಜಿನಲ್ಲಿ ಪಿಯು ಕಲಿಯುತ್ತಿರುವ ರೆಮೋನಾ ಮಂಗಳೂರಿನ ಫಳ್ನೀರ್ ನಿವಾಸಿಯಾಗಿದ್ದು, ಗ್ಲಾಡಿಸ್ ಸೆಲಿನ್ ಮತ್ತು ದಿ. ಎವರೆಸ್ಟ್ ಪಿರೇರಾ ದಂಪತಿಯ ಹಿರಿಯ ಪುತ್ರಿ. ಇನ್ನೊಬ್ಬ ಪುತ್ರ ರೊನಾಲ್ಡೋ ರಾಕ್ಸನ್ ಹೈಸ್ಕೂಲ್ ಓದುತ್ತಿದ್ದಾನೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು; ದಾಖಲೆಗಳಿಲ್ಲದೆ 1.48 ಕೋ.ರೂ. ನಗದು, 40 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ ಸೆರೆ

Next Post

‘ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ’ – ಬಿರುವೆರ್ ಕುಡ್ಲ ಮನವಿ

Related Posts

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ
ಆರೋಗ್ಯ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
174
Next Post
‘ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ’ – ಬಿರುವೆರ್ ಕುಡ್ಲ ಮನವಿ

'ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ' - ಬಿರುವೆರ್ ಕುಡ್ಲ ಮನವಿ

Discussion about this post

Recent News

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

July 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d