• About us
  • Contact us
  • Disclaimer
Friday, May 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಮಾ.3ರಿಂದ ಸಹಸ್ರ ನಾರಿಕೇಳ ಗಣಯಾಗ, ಸಹಸ್ರ ಕುಂಭಾಭಿಷೇಕ, ನಾಗಬ್ರಹ್ಮಮಂಡಲೋತ್ಸವ

Coastal Times by Coastal Times
February 25, 2023
in ಕರಾವಳಿ
ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಮಾ.3ರಿಂದ ಸಹಸ್ರ ನಾರಿಕೇಳ ಗಣಯಾಗ, ಸಹಸ್ರ ಕುಂಭಾಭಿಷೇಕ, ನಾಗಬ್ರಹ್ಮಮಂಡಲೋತ್ಸವ
44
VIEWS
WhatsappTelegramShare on FacebookShare on Twitter

ಮಂಗಳೂರು:  ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಗರಡಿಗಳಲ್ಲಿ ಒಂದಾದ ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಆರಂಭವಾಗಿ 150 ವರ್ಷಗಳು ಸಂದಿವೆ. ಇದರ ಪ್ರಯುಕ್ತ ಈ ಗರಡಿ ಕ್ಷೇತ್ರದಲ್ಲಿ ಸಹಸ್ರ ನಾರಿಕೇಳ ಗಣಯಾಗ, ಸಹಸ್ರ ಕುಂಭಾಭಿಷೇಕ, ನಾಗಬ್ರಹ್ಮಮಂಡಲೋತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮಾರ್ಚ್‌ 3ರಿಂದ 7ರವರೆಗೆ ನಡೆಯಲಿವೆ. ಮಾರ್ಚ್‌ 7ರಂದು ಸಂಜೆ 6.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಗರಡಿ ಕ್ಷೇತ್ರದ ಅಧ್ಯಕ್ಷ ಕೆ. ಚಿತ್ತರಂಜನ್, ‘ಗರಡಿಗೆ 150 ವರ್ಷ ತುಂಬಿದ ಸಲುವಾಗಿ ಕ್ಷೇತ್ರದ ಪ್ರಧಾನ ಅರ್ಚಕ ಕೆ. ವಾಸುದೇವ ಶಾಂತಿ ಉಪಸ್ಥಿತಿಯಲ್ಲಿ ಬಿ. ಗಂಗಾಧರ ಶಾಂತಿ ನೇತತ್ವದಲ್ಲಿ ಹಾಗೂ ನಗರದ ನಾರಾಯಣಗುರು ವೈದಿಕ ಸಮಿತಿ ಸಹಭಾಗಿತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ’ ಎಂದರು.

ಮಾ.4ರಂದು ಬೆಳಗ್ಗೆ 5.00ರಿಂದ ಸಹಸ್ರ ನಾರಿಕೇಳ ಗಣಯಾಗ, ಪೂರ್ವಾಹ್ನ ಗಂಟೆ 11.00ಕ್ಕೆ ಪೂರ್ಣಾಹುತಿ, ಮಾ.5ರಂದು ಪೂರ್ವಾಹ್ನ ಗಂಟೆ 7.00ರಿಂದ ಕ್ಷೇತ್ರದ ಪರಿವಾರ ದೈವದೇವರುಗಳಿಗೆ ಕಲಶಾಭಿಷೇಕ, ಮಾ.6ರಂದು ಪೂರ್ವಾಹ್ನ ಗಂಟೆ 7.40ಕ್ಕೆ ಒದಗುವ ಮೀನ ಲಗ್ನದಲ್ಲಿ ಶ್ರೀ ಬ್ರಹ್ಮ ಬೈದರ್ಕಳರಿಗೆ ಸಹಸ್ರ ಕುಂಭಾಭಿಷೇಕ, ಮಾ.7ರಂದು ನಾಗಪಾತ್ರಿ ಕಾವೂರು ಮನೋಜ್ ಶಾಂತಿ ಮತ್ತು ಬಳಗದವರಿಂದ ರಾತ್ರಿ ಗಂಟೆ 9.00ಕ್ಕೆ ಹಾಲಿಟ್ಟು ಸೇವೆ ಬಳಿಕ ರಾತ್ರಿ ಗಂಟೆ 12.00ಕ್ಕೆ ನಾಗಬ್ರಹ್ಮ ಮಂಡಲೋತ್ಸವ ಸೇವೆ ನಡೆಯಲಿದೆ.

ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ವಿವರ: ಮಾ. 3ರಂದು ಪೂರ್ವಾಹ್ನ 6.00ಗಂಟೆಗೆ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ಮಚ್ಚೇಂದ್ರನಾಥ ಬಾಬಾ ಇವರ ಉಪಸ್ಥಿತಿಯಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ಕ್ಷೇತ್ರದಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಋತ್ವಿಜರ ಆಗಮನ. ಬೆಳಗ್ಗೆ 9.12ಕ್ಕೆ ತೋರಣ ಮುಹೂರ್ತ, 9.30ಕ್ಕೆ ಕೊಪ್ಪರಿಗೆ ಮುಹೂರ್ತ, 11.08ಕ್ಕೆ ಉಗ್ರಾಹ ಮುಹೂರ್ತ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ: ರಾತ್ರಿ ಗಂಟೆ 7.30ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ ಕಾರ್ಯಕ್ರಮ, ಹಾಗೂ ನಾದ ಸಂಕೀರ್ತನಾ ಮಂಗಳೂರು ತಂಡದಿಂದ ಭಕ್ತಿ ಲಹರಿ ಮಾ.4ರಂದು ಬೆಳಗ್ಗೆ 6.00ರಿ೦ದ ಸಹಸ್ರ ನಾರಿಕೇಳ ಗಣಯಾಗ, ಪೂರ್ವಾಹ್ನ ಗಂಟೆ 11.00ಕ್ಕೆ ಪೂರ್ಣಾಹುತಿ, ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ, ಮಹಾಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ: ಸಂಜೆ 4.30ರಿಂದ ಮಂಗಳೂರಿನ ಖ್ಯಾತ ಸಪ್ತಸ್ವರ ಆರ್ಕೆಸ್ಟ್ರಾ ಪ್ರಭಾಕರ್ ತಣ್ಣೀರುಬಾವಿ ಮತ್ತು ಬಳಗದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 8.00ರಿಂದ ರುದ್ರ ಥೇಟರ್ ಮಂಗಳೂರು ಅರ್ಪಿಸುವ ‘ಶೂದ್ರ ಶಿವ’.

ಮಾ.6ರಂದು ಬೆಳಗ್ಗೆ ಸಹಸ್ರಕಲರ ಪ್ರಸನ್ನ ಪೂಜೆ, ಕಲಶಾಭಿಷೇಕ ಪ್ರಾರಂಭ, 7.40 ಮೀನ ಲಗ್ನದಲ್ಲಿ ಶ್ರೀ ಬ್ರಹ್ಮ ಬೈದರ್ಕಳರಿಗೆ ಸದಸ್ಯ ಕುಂಭಾಭಿಷೇಕ, ಪ್ರಸನ್ನ ಪೂಜೆ, ಅನ್ನನೈವೇದ್ಯ ಸೇವೆ, ಬೈದರ್ಕಳರಿಗೆ ದರ್ಶನ ಸೇವೆ, ಪಾಣಿತಾಡನ, ಭೂತಬಲಿ, ಪಲ್ಯ ಪೂಜೆ. ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4.00ರಿಂದ ನಾಗಮಂಡಲ ಮಂಟಪ ಶುದ್ದಿ, ವಾಸ್ತುರಾಗೋಪ್ಪ ಹೋಮ, ವಾಸ್ತು ಬಲಿ. ರಾತ್ರಿ 7.00ರಿಂದ ಪಲ್ಲಕಿ ಬಲಿ ಉತ್ಸವ, ಬ್ರಹ್ಮಬೈದರ್ಕಳರಿಗೆ ವಿಶೇಷ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ: ಸಂಜೆ 4.30ರಿಂದ ಸ್ಥಳೀಯ ಪ್ರತಿಭೆಗಳಿಂದ ನಾನ ನೃತ್ಯಾವಳಿಗಳು, ರಾತ್ರಿ ಗಂಟೆ 8.00ರಿಂದ ಮೈಮ್ ರಾಮ್‌ ದಾಸ್, ಶಶಿರಾಜ್ ಕಾವೂರ್ ಹಾಗೂ ವರಹಾ ರೂಪಂ ಖ್ಯಾತಿಯ ಹಾಡುಗಾರ ಸಾಯಿ ವಿಶ್ಲೇಶ್ ಇವರ ತುಳು ಮತ್ತು ಭಾರತೀಯ ಜಾನಪದ ಶಾಸ್ತ್ರೀಯ ಸಂಗೀತಗಳ ಅದ್ಧೂರಿ ಕಾರ್ಯಕ್ರಮ.

ಮಾ. 7ರಂದು ಪ್ರಾತಃಕಾಲ 4.30 ಗಣಹೋಮ, ನಾಗದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ತನುತಂಬಿಲ ಸೇವೆ, ಆಶ್ಲೇಷ ಬಲಿ, ಸರ್ವಸೂಕ್ತ ಹೋಮ, ಮ೦ಡಲ ಪೂಜೆ, ರಾತ್ರಿ ಗಂಟೆ 9.00 ಕ್ಕೆ ನಾಗಪಾತ್ರಿ ಶ್ರೀ ಮನೋಜ್ ಶಾಂತಿ ಮತ್ತು ಬಳಗದವರಿಂದ ನಾಗ ಸಾನಿಧ್ಯದಲ್ಲಿ ‘ಹಾಲಿಟ್ಟು ಸೇವೆ’, ರಾತ್ರಿ ಗಂಟೆ 12.00ರಿಂದ ನಾಗಬ್ರಹ್ಮ ಮಂಡಲೋತ್ಸವ ಸೇವೆ ಸಂಜೆ 4ರಿಂದ ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ ಮಂಗಳೂರು ತಂಡದಿಂದ ನೃತ್ಯ ರೂಪಕ.

ಹೊರೆಕಾಣಿಕೆ ಮೆರವಣಿಗೆ : ಮಾ.3ರ ಶುಕ್ರವಾರ ಮಧ್ಯಾಹ್ನ ಗಂಟೆ 3.00ಕ್ಕೆ ಹಸಿರುವಾಣಿ ಹೊರಕಾಣಿಕ ಮೆರವಣಿಗೆಯು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇಲ್ಲಿಂದ ಹೊರಟು ಶ್ರೀ ನಾರಾಯಣಗುರು ವೃತ್ತ, ಲಾಲ್‌ ಭಾಗ್, ಪಿ.ವಿ.ಎಸ್ ವೃತ್ತ, ಬಂಟ್ಸ್ ಹಾಸ್ಟೆಲ್ ವೃತ್ತ, ಜ್ಯೋತಿ ವೃತ್ತ, ಕಂಕನಾಡಿ, ಪಂಪ್ ವೆಲ್ ವೃತ್ತದ ಮೂಲಕ ಶ್ರೀ ಕ್ಷೇತ್ರ ಗರಡಿಗೆ ಆಗಮಿಸಲಿದೆ.

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ವ್ಯವಸ್ಥಾಪಕ ಜೆ. ಕಿಶೋರ್ ಕುಮಾರ್, ‘ಕಂಕನಾಡಿ ಗರಡಿ 150’ರ ಸಂಭ್ರಮ ಸಮಿತಿ ಪ್ರಧಾನ ಸಂಚಾಲಕ ಎಂ. ಮೋಹನ್ ಉಜ್ಜೋಡಿ, ಕ್ಷೇತ್ರದ ಮೊಕ್ತೇಸರರಾದ ಬಿ. ದಾಮೋದರ ನಿಸರ್ಗ, ಬಿ.ವಿಠಲ, ಎ. ವಾಮನ,  ದಿವರಾಜ್, ಜಗದೀಪ್ ಡಿ. ಸುವರ್ಣ, ಜೆ.ವಿಜಯ, ಆರ್ಥಿಕ ಸಮಿತಿಯ ಶರಣ್ ಪಂಪ್‌ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಪ್ರಚಾರ ಸಮಿತಿ ಸಂಚಾಲಕ ಬ್ರಿಜೇಶ್ ಮತ್ತಿತರರು ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಟ್ಕಳ: ಆಸ್ತಿ ಕಲಹ – ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ

Next Post

ಉಳ್ಳಾಲ ದರ್ಗಾ ಚುನಾವಣೆ: ಆಡಳಿತ ಸಮಿತಿಗೆ 55 ಮಂದಿ ಆಯ್ಕೆ

Related Posts

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ
ಕರಾವಳಿ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
ಮೇ 9 -10 ರಂದು : ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ
ಕರಾವಳಿ

ಮೇ 9 -10 ರಂದು : ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

May 6, 2026
9
Next Post
ಉಳ್ಳಾಲ ದರ್ಗಾ ಚುನಾವಣೆ: ಆಡಳಿತ ಸಮಿತಿಗೆ 55 ಮಂದಿ ಆಯ್ಕೆ

ಉಳ್ಳಾಲ ದರ್ಗಾ ಚುನಾವಣೆ: ಆಡಳಿತ ಸಮಿತಿಗೆ 55 ಮಂದಿ ಆಯ್ಕೆ

Discussion about this post

Recent News

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
46
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ

May 7, 2026
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d