• About us
  • Contact us
  • Disclaimer
Wednesday, August 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಸ್ಸಿನಲ್ಲಿ ಮದ್ಯಪಾನ ಮಾಡಿದ ಹೈಸ್ಕೂಲ್ ವಿದ್ಯಾರ್ಥಿನಿಯರು : ವಿಡಿಯೋ ವೈರಲ್

Coastal Times by Coastal Times
March 25, 2022
in ರಾಷ್ಟ್ರೀಯ ಸುದ್ದಿ
ಬಸ್ಸಿನಲ್ಲಿ ಮದ್ಯಪಾನ ಮಾಡಿದ ಹೈಸ್ಕೂಲ್ ವಿದ್ಯಾರ್ಥಿನಿಯರು : ವಿಡಿಯೋ ವೈರಲ್
149
VIEWS
WhatsappTelegramShare on FacebookShare on Twitter

ಚೆನ್ನೈ, ಮಾರ್ಚ್ 25: ತಮಿಳುನಾಡು ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಪೋಲಿಸರಿಗೆ ತನಿಖೆಗಾಗಿ ಸೂಚಿಸಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಿಂದಾಗಿ ಶಾಲಾ-ಕಾಲೇಜುಗಳು ದೇಶಾದ್ಯಾಂತ ಆರಂಭಗೊಂಡಿವೆ. ಮಕ್ಕಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಸಮಯವಿಲ್ಲ. ಬೋಧಿಸುವ ಸಮಯವನ್ನು ವಿಸ್ತರಿಸಲು ಚಿಂತಿಸಲಾಗುತ್ತಿದೆ. ಹಗಲು ರಾತ್ರಿ ಕುಳಿತು ಓದಿದರೂ ಮುಗಿಯದ ಪಠ್ಯಕ್ರಮವಿದೆ. ಹೀಗಿರುವಾಗ ಶಾಲೆಗೆ ಹೋಗಿ ನೆಟ್ಟಗೆ ಶಿಕ್ಷಕರು ಬೋಧಿಸಿದ್ದನ್ನು ಕಲಿಯಬೇಕಾದ ವಿದ್ಯಾರ್ಥಿನಿಯರು ಮದ್ಯ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಶಾಲಾ ಸಮವಸ್ತ್ರದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಧಿನಿಯರು ಎಣ್ಣೆ ಹೊಡೆದಿದ್ದಾರೆ. ಕೈಯಿಂದ ಕೈಯಿಗೆ ಬಾಟಲಿ ಕಸಿದುಕೊಂಡು ಪೈಪೋಟಿಗಿಳಿದು ಮದ್ಯ ಸೇವನೆ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಕ್ಲಿಪ್ ಅನ್ನು ವಿದ್ಯಾರ್ಥಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ವಿಡಿಯೋದಲ್ಲಿ ಹುಡುಗಿಯರು ಮತ್ತು ಹುಡುಗರ ಗುಂಪು ಬಿಯರ್ ಬಾಟಲಿಯನ್ನು ತೆರೆದು ಸೇವಿಸುವುದನ್ನು ಸೆರೆ ಹಿಡಿಯಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಚೆಂಗಲ್ಪಟ್ಟುವಿನ ಸರ್ಕಾರಿ ಶಾಲೆಯವರು ಎಂದು ಹೇಳಲಾಗುತ್ತಿದೆ. ಆರಂಭದಲ್ಲಿ ಇದು ಹಳೆಯ ವಿಡಿಯೋ ಎಂದು ಭಾವಿಸಲಾಗಿತ್ತು. ಆದರೆ ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಕ್ಕಳ ಬಗ್ಗೆ ಪೋಷಕರಿಗೆ ಆತಂಕ ಹೆಚ್ಚಾಗಿದೆ.

ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ತಿರುಕಳುಕುಂದ್ರಂನಿಂದ ತಾಚೂರ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ. ಘಟನೆಯನ್ನು ಅಧಿಕಾರಿಗಳು ಗಮನಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉದ್ಯಮಿ, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಮೊಹಿದ್ದೀನ್ ಕುಂಞಿ ಉಳ್ಳಾಲ ನಿಧನ

Next Post

ಪುತ್ತೂರು: ಬಲ್ನಾಡಿನ ಮನೆ ಕಳವು ಪ್ರಕರಣ, ಕುಖ್ಯಾತ ಅಂತಾರಾಜ್ಯ ಕಳ್ಳರಿಬ್ಬರ ಬಂಧನ 6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

Related Posts

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ರಾಷ್ಟ್ರೀಯ ಸುದ್ದಿ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
40
ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
ರಾಷ್ಟ್ರೀಯ ಸುದ್ದಿ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
68
Next Post
ಪುತ್ತೂರು: ಬಲ್ನಾಡಿನ ಮನೆ ಕಳವು ಪ್ರಕರಣ, ಕುಖ್ಯಾತ ಅಂತಾರಾಜ್ಯ ಕಳ್ಳರಿಬ್ಬರ ಬಂಧನ 6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

ಪುತ್ತೂರು: ಬಲ್ನಾಡಿನ ಮನೆ ಕಳವು ಪ್ರಕರಣ, ಕುಖ್ಯಾತ ಅಂತಾರಾಜ್ಯ ಕಳ್ಳರಿಬ್ಬರ ಬಂಧನ 6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
17
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d