• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅತ್ತಾವರ-ಬಾಬುಗುಡ್ಡ ದಲ್ಲಿ ‘ರೋಹನ್ ಕಾರ್ಪೊರೇಷನ್’ನ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ಗೆ ಶಿಲಾನ್ಯಾಸ

Coastal Times by Coastal Times
March 25, 2025
in ಕರಾವಳಿ
ಮಂಗಳೂರು: ಅತ್ತಾವರ-ಬಾಬುಗುಡ್ಡ ದಲ್ಲಿ ‘ರೋಹನ್ ಕಾರ್ಪೊರೇಷನ್’ನ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ಗೆ ಶಿಲಾನ್ಯಾಸ
59
VIEWS
WhatsappTelegramShare on FacebookShare on Twitter

ಮಂಗಳೂರು: ರಾಜ್ಯದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್‌ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಶಿಲಾನ್ಯಾಸ ಕಾರ್ಯಕ್ರಮವು ಸೋಮವಾರ ನಗರದ ಅತ್ತಾವರ-ಬಾಬುಗುಡ್ಡದಲ್ಲಿ ನಡೆಯಿತು.

ಮಿಲಾಗ್ರಿಸ್ ಚರ್ಚ್‌ನ ಧರ್ಮಗುರು ರೆ.ಫಾ. ಬೊನೆವೆಂಚರ್ ನಝ್ರತ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ಐವನ್ ಡಿಸೋಜ, ವೇದವ್ಯಾಸ ಕಾಮತ್ ಶುಭ ಹಾರೈಸಿದರು.

ರೆ.ಫಾ. ಬೊನೆವೆಂಚರ್ ನಝ್ರತ್, ಧರ್ಮಗುರು, ಮಿಲಾಗ್ರಿಸ್ ಚರ್ಚ್ ಇವರು ಮಾತನಾಡಿ ರೋಹನ್ ಮೊಂತೆರೋ ಶಿಸ್ತುಬದ್ಧ ವ್ಯಕ್ತಿ. ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳುವಾಗಲೂ ಗ್ರಾಹಕರ ತೃಪ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಒಂದಿನಿತೂ ಕುಂದುಕೊರತೆ ಇಲ್ಲದ ಯೋಜನೆಗಳನ್ನು ಪೂರ್ತಿಗೊಳಿಸುವುದು ಅವರ ಹೆಗ್ಗಳಿಕೆಯಾಗಿದೆ.

ಡಾ. ಎನ್.ಎಂ. ರಾಜೇಂದ್ರ ಕುಮಾರ್‌ ಮಾತನಾಡಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ರೋಹನ್ ಮೊಂತೆರೋ ತನ್ನದೇ ಆದ ಛಾಪು ಮೂಡಿಸಿದ್ದಾರೆ. ರೋಹನ್ ಮೊಂತೆರೋ ಈವರೆಗೆ ಕೈಗೆತ್ತಿಕೊಂಡ ಎಲ್ಲಾ ಯೋಜನೆಗಳೂ ಗ್ರಾಹಕರ ತೃಪ್ತಿಗೆ ಪಾತ್ರವಾಗಿವೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿ ಕೊಡುವುದರಲ್ಲಿ ಅವರು ಎತ್ತಿದ ಕೈ. ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈಯಲ್ಲೂ ವಿನೂತನ ಪ್ರಾಜೆಕ್ಟ್ ನಿರ್ಮಾಣದ ಗುರಿ ಹಾಕಬೇಕಾಗಿದೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತನ್ನದೇ ಆದ ದಾಖಲೆಗಳನ್ನು ಮಾಡುತ್ತಿರುವ ರೋಹನ್ ಮೊಂತೆರೋ ಕೇವಲ ಲಾಭಗಳಿಕೆಯ ಉದ್ದೇಶವನ್ನು ಹೊಂದಿಲ್ಲ. ಸಾಮಾಜಿಕ ಕಳಕಳಿಯನ್ನೂ ಹೊಂದಿದ್ದಾರೆ. ಜನರ ಮೇಲೆ ಸಂಪೂರ್ಣ ವಿಶ್ವಾಸವಿಟ್ಟು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವ ಅವರು ಎಲ್ಲದರಲ್ಲೂ ಯಶಸ್ವಿಯಾಗುತ್ತಿರುವುದು ಶ್ಲಾಘನೀಯ.

ವೇದಿಕೆಯಲ್ಲಿ ಮಾಜಿ ಕಾರ್ಪೊರೇಟರ್‌ಗಳಾದ ದಿವಾಕರ ಪಾಂಡೇಶ್ವರ, ಶೈಲೇಶ್ ಶೆಟ್ಟಿ, ಉದ್ಯಮಿ ಶಶಿಧರ ಪೈ ಮಾರೂರು, ಉದ್ಯಮಿ ಡಿಯಾನ್ ಮೊಂತೆರೋ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಷನ್‌ನ ಅಧ್ಯಕ್ಷ ರೋಹನ್ ಮೊಂತೆರೋ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.

ಮಧ್ಯಮ ವರ್ಗದ ಕುಟುಂಬದ ಸ್ವಂತ ಮನೆಯನ್ನು ಹೊಂದುವ ಕನಸನ್ನು ಸಾಕಾರಗೊಳಿಸುವ ಸಲುವಾಗಿ ನಿರ್ಮಾಣಗೊಳ್ಳಲಿರುವ ರೋಹನ್ ನೆಸ್ಟ್ ಎರಡು ಬಿ.ಎಚ್.ಕೆ.ಯ 58 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿವೆ. ಮೂರು ಮಹಡಿಗಳಲ್ಲಿ ಹರಡಿಕೊಳ್ಳಲಿದ್ದು, ಪ್ರತಿ ಘಟಕವು ಉತ್ತಮ ಸ್ಥಳಾವಕಾಶವನ್ನು ಹೊಂದಿದೆ. 695ರಿಂದ 715 ಚದರ ಅಡಿ ವಿಸ್ತೀರ್ಣದ ಈ ಅಪಾರ್ಟ್‌ಮೆಂಟ್‌ಗಳು ಆಧುನಿಕ ನಗರ ಕುಟುಂಬಗಳ ಅವಶ್ಯಗಳನ್ನು ಪೂರೈಸಲಿದೆ. ಸ್ವಯಂಚಾಲಿತ ಲಿಫ್ಟ್‌ಗಳು, ಪವರ್ ಬ್ಯಾಕಪ್, ವಿಟ್ರಿಫೈಡ್ ಟೈಲ್ ಫ್ಲೋರಿಂಗ್, ಸುರಕ್ಷತೆಗಾಗಿ ಸರ್ವಿಲೆನ್ಸ್ ಕ್ಯಾಮೆರಾಗಳು ಸಹಿತ ಹಲವು ಸೌಲಭ್ಯಗಳನ್ನು ಹೊಂದಿದೆ. ಮಳೆ ನೀರಿನ ಸಂಗ್ರಹಣಾ ವ್ಯವಸ್ಥೆ ಮತ್ತು ಪರಿಸರ ಸ್ನೇಹಿ ವಾತಾವರಣವಿದೆ. ಹೆಚ್ಚಿನ ಮಾಹಿತಿ ಅಥವಾ ಬುಕ್ಕಿಂಗ್‌ಗಾಗಿ, ರೋಹನ್ ಕಾರ್ಪೊರೇಷನ್ ದೂ.ಸಂ: +919845490100 ಅಥವಾ ಈಮೇಲ್: info@rohancorporation.in / ಜಾಲತಾಣ : www.rohancorporation.in ಅಥವಾ ರೋಹನ್ ಕಾರ್ಪೊರೇಶನ್, ಮುಖ್ಯ ರಸ್ತೆ, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿ ಸಬಹುದು ಎಂದು ಪ್ರಕಟನೆ ತಿಳಿಸಿದೆ.

 

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಕಾರಿಂಜೇಶ್ವರ ಬೆಟ್ಟವನ್ನು ಕೆಲವೇ 30 ನಿಮಿಷಗಳಲ್ಲಿ ಏರಿದ ಕರ್ನಾಟಕದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್

Next Post

ಮಂಗಳೂರು: ಬಡ ಜನರ ಬ್ಯಾಂಕ್​ ಖಾತೆ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
59
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
39
Next Post
ಮಂಗಳೂರು: ಬಡ ಜನರ ಬ್ಯಾಂಕ್​ ಖಾತೆ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಡ ಜನರ ಬ್ಯಾಂಕ್​ ಖಾತೆ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
30
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d