• About us
  • Contact us
  • Disclaimer
Saturday, January 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬಡ ಜನರ ಬ್ಯಾಂಕ್​ ಖಾತೆ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Coastal Times by Coastal Times
March 25, 2025
in ಕ್ರೈಮ್ ನ್ಯೂಸ್
ಮಂಗಳೂರು: ಬಡ ಜನರ ಬ್ಯಾಂಕ್​ ಖಾತೆ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
62
VIEWS
WhatsappTelegramShare on FacebookShare on Twitter

ಮಂಗಳೂರು, ಮಾ​ 24: ಆನ್​ಲೈನ್‌ ವಂಚನೆಗಾಗಿ ಬಡ ಜನರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಸೀಲ್ದಾರ್‌ ಗಲ್ಲಿಯ ಅವಿನಾಶ್‌ ಸುತಾರ್ (‌28), ರಾಮದೇವ ಗಲ್ಲಿಯ ಅನೂಪ್‌ ಕಾರೇಕರ್‌ (42)ಬಂಧಿತ ಆರೋಪಿಗಳು.

ದಕ್ಷಿಣ ಕನ್ನಡ ಸೈಬರ್‌ ಕ್ರೈಂ ಪ್ರಕರಣದ ತನಿಖೆ ವೇಳೆ ಆರೋಪಿಗಳ ಖತರ್ನಾಕ್ ಪ್ಲ್ಯಾನ್​ ಬೆಳಕಿಗೆ ಬಂದಿದ್ದು, ಮುಗ್ದ ಜನರ ಬ್ಯಾಂಕ್‌ ಖಾತೆಯೇ ಇವರಿಗೆ ಖಜಾನೆಯಾಗಿದೆ. ಆರೋಪಿಗಳು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್‌ ಖಾತೆ ತೆರೆಯಲು ಹೇಳುತ್ತಾರೆ. ಬಳಿಕ, ಆರೋಪಿಗಳು ಆ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಪಡೆದುಕೊಂಡು, ಆನ್‌ ಲೈನ್‌ ಬ್ಯುಸಿನೆಸ್‌ ಮಾಡುವುದಾಗಿ ಹೇಳುತ್ತಿದ್ದರು. ಬಳಿಕ ಮುಗ್ದರ ಬ್ಯಾಂಕ್‌ ಖಾತೆ ಮಾಹಿತಿಯನ್ನು ಸೈಬರ್‌ ವಂಚಕರ ಕೈಗಿಡುತ್ತಿದ್ದರು.

ನಂತರ, ಸೈಬರ್​ ವಂಚಕರು ಈ ಬ್ಯಾಂಕ್​ ಖಾತೆಗಳನ್ನು ಇಟ್ಟುಕೊಂಡು, ಶ್ರೀಮಂತ ಜನರಿಗೆ ವಿಡಿಯೊ ಕಾಲ್‌, ಡಿಜಿಟೆಲ್‌ ಅರೆಸ್ಟ್‌ ಸೇರಿದಂತೆ ಹಲವು ವಿಧಾನಗಳಲ್ಲಿ ಬ್ಲ್ಯಾಕ್‌ ಮೇಲ್‌ ಮಾಡುತ್ತಾರೆ. ಬಳಿಕ, ವಂಚಕರ ಜಾಲಕ್ಕೆ ಸಿಲುಕಿದವರ ಕಡೆಯಿಂದ ಮುಗ್ದ ಜನರ ಬ್ಯಾಂಕ್​ ಖಾತೆಗೆ ಹಣ ವರ್ಗಾವಣೆ ಮಾಡಿಸುತ್ತಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? : ಪುತ್ತೂರಿನ ರಾಧಾಕೃಷ್ಣ ನಾಯಕ್‌ ಎಂಬುವವರಿಗೆ ಸೈಬರ್​ ವಂಚಕರು ವಿಡಿಯೊ ಕಾಲ್‌ ಮಾಡಿ ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ನಿಮ್ಮನ್ನ ಡಿಜಿಟಲ್‌ ಅರೆಸ್ಟ್‌ ಮಾಡುತ್ತೇವೆ ಎಂದು ಹೆದರಿಸಿದ್ದಾರೆ. ಬಳಿಕ, 40 ಲಕ್ಷ ರೂಪಾಯಿ ಹಣವನ್ನ ಆರ್​ಟಿಜಿಎಸ್‌ ಮೂಲಕ ಪಡೆದಿದ್ದಾರೆ. ಕೆಲವು ದಿನಗಳ ಬಳಿಕ ಅನುಮಾನಗೊಂಡ ರಾಧಾಕೃಷ್ಣರವರು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ವೇಳೆ ಬೆಳಗಾವಿಯ ಯಾರದ್ದೋ ಖಾತೆಗೆ ಹಣ ವರ್ಗಾವಣೆಗೊಂಡಿರುವುದು ತಿಳಿದಿದೆ.

ಬಂಧಿತ ಆರೋಪಿಗಳು ಸೈಬರ್‌ ವಂಚರೊಂದಿಗೆ ಟೆಲಿಗ್ರಾಂ ಮೂಲಕ ಸಂಪರ್ಕ ಸಾಧಿಸಿ ವ್ಯವಹಾರ ನಡೆಸುತ್ತಿದ್ದರು. ಆರೋಪಿಗಳು ಕೇವಲ ಕಮಿಷನ್‌ ಆಸೆಗಾಗಿ ಜನರ ಬ್ಯಾಂಕ್‌ ಖಾತೆಗಳನ್ನ ಉತ್ತರ ಭಾರತದವರಿಗೆ ನೀಡುತ್ತಿದ್ದರು. ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಅನೇಕ ಜನರು ತಮ್ಮ ಖಾತೆಗಳನ್ನು ಬೇರೊಬ್ಬರಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಸೈಬರ್‌ ವಂಚನೆ ಪ್ರಕರಣಕ್ಕೆ ಜಾರ್ಖಂಡ್‌ ‘ಜಾಮತಾರಾ’ವರೆಗೂ ನಂಟು ಇದೆ ಎಂಬುವುದನ್ನ ಬಾಯಿ ಬಿಟ್ಟಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅತ್ತಾವರ-ಬಾಬುಗುಡ್ಡ ದಲ್ಲಿ ‘ರೋಹನ್ ಕಾರ್ಪೊರೇಷನ್’ನ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ಗೆ ಶಿಲಾನ್ಯಾಸ

Next Post

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

Related Posts

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್
ಕ್ರೈಮ್ ನ್ಯೂಸ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
84
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
104
Next Post
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

Discussion about this post

Recent News

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
84
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
104
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ: ಮದುವೆಗಾಗಿ ಸಿಕ್ಕಿತು 15 ದಿನಗಳ ಪೆರೋಲ್

January 24, 2026
ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

ಬೆಳ್ತಂಗಡಿ: ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದ ಎಂಟು ಜನರ ಬಂಧನ

January 23, 2026
ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು ಡಬಲ್​ ಮರ್ಡರ್​ ಕೇಸ್​ನಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗ್ಯಾಂಗ್​ನ ಕೊಲೆ ಆರೋಪಿ 29 ವರ್ಷಗಳ ಬಳಿಕ ಬಂಧನ

January 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d